ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ

ಹೊಸನಗರ ತಾಲೂಕಿನ ಗರ್ತಿಕೆರೆ ಸಮೀಪದ ರಾಮನಸರ ಶ್ರೀನಾಗದೇವತೆ, ಚೌಡೇಶ್ವರಿ ಹಾಗೂ ಪರಿವಾರ ದೇವತೆಗಳ ಸುಬ್ರಹ್ಮಣ್ಯ ಷಷ್ಠಿ ಮತ್ತು ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಶನಿವಾರದಂದು ಗಣಹೋಮ, ಪಂಚ ವಿಂಶತಿ, 108 ಕಲಶಾಭಿಷೇಕ, ಕಲಾತತ್ವ ಅಧಿವಾಸ ಹೋಮ, ಆಶ್ಲೇಷಾ ಬಲಿ ನಡೆಯಿತು.

ವೇದಮೂರ್ತಿ ವಿದ್ವಾನ್ ಮುರಳೀಧರ ಕೆದ್ಲಾಯ ಹಾಗೂ ಪ್ರಧಾನ ಅರ್ಚಕ ಸುರೇಶ್ ಭಟ್ ಅವರ ತಂಡ ಪೂಜಾ ವಿಧಿವಿಧಾನಗಳ ನೆರವೇರಿಸಿದರು. ಉಡುಪಿ ಜಿಲ್ಲೆ ಶ್ರೀನರಸಿಂಹತೀರ್ಥ ಸಂಸ್ಥಾನ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಅರಸೀಕೆರೆ ಶ್ರೀ ಲಕ್ಷ್ಮೀ ನರಸಿಂಹ ಪಂಚಾಯತನ ಕ್ಷೇತ್ರದ ಅವಧೂತ ಶ್ರೀಸತೀಶ ಶರ್ಮ ಅವರ ಪಾದಪೂಜೆ ಹಾಗೂ ಆಶೀರ್ವಚನ ಕಾರ್ಯಕ್ರಮ ನಡೆಯಿತು.

ಮಧ್ಯಾಹ್ನದ ವೇಳೆಗೆ ಶ್ರೀಕ್ಷೇತ್ರ ಆವರಣದಿಂದ ಹುಂಚದಕಟ್ಟೆ ಗರ್ತಿಕೆರೆ ಮಾರ್ಗದಲ್ಲಿ ವಿವಿಧ ಕಲಾತಂಡಗಳ ಕಲಾ ಪ್ರದರ್ಶನದೊಂದಿಗೆ ರಾಜಬೀದಿ ಉತ್ಸವ ನಡೆಯಿತು. ಸಂಜೆ ಪೂಜಾ ವಿಧಾನಗಳೊಂದಿಗೆ ದೀಪೋತ್ಸವ ನೆರವೇರಿತು. ದೀಪೋತ್ಸವ ಹಿನ್ನೆಲೆಯಲ್ಲಿ ದೇವಸ್ಥಾನದ ಆವರಣವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು. ಮಂದಾರ್ತಿ ಶ್ರೀದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯಿಂದ ನಡೆದ ಐದು ಮೇಳಗಳ ಕೂಡಾಟ ಯಕ್ಷಗಾನ ಪ್ರದರ್ಶನ ನೆರೆದಿದ್ದ ಭಕ್ತರ ಗಮನ ಸೆಳೆಯಿತು.

ಮಾಜಿ ಗೃಹಸಚಿವ, ಶಾಸಕ ಆರಗ ಜ್ಞಾನೇಂದ್ರ ಧಾರ್ಮಿಕ ಸಭೆಯ ಉದ್ಘಾಟಿಸಿ ಮಾತನಾಡಿ, ನೊಂದ ಮನಸ್ಸುಗಳಿಗೆ ಧಾರ್ಮಿಕ ಕ್ಷೇತ್ರಗಳು ಬದುಕುವ ಪ್ರೇರಣೆ ನೀಡುತ್ತವೆ. ಶ್ರೀ ಕ್ಷೇತ್ರ ರಾಮನಸರ ಸಾವಿರಾರು ಜನರ ಬದುಕಿಗೆ ಚೈತನ್ಯ ತುಂಬಿದೆ ಎಂದು ಬಣ್ಣಿಸಿದರು. ಶ್ರೀ ಕ್ಷೇತ್ರ ರಾಮನಸರ ಪವಾಡ ಸದೃಶ್ಯವಾಗಿ ಸಾಕಷ್ಟು ಬದಲಾವಣೆ ಕಂಡಿದ್ದು, ಜನರಲ್ಲಿರುವ ನೋವುಗಳ ನಿವಾರಿಸಿ ಬದುಕುವ ಹುಮ್ಮಸ್ಸು ಶ್ರೀಕ್ಷೇತ್ರ ನೀಡುತ್ತಿದೆ. ಜತೆಗೆ ಕಲೆ, ಸಾಹಿತ್ಯ, ಸಂಸ್ಕೃತಿ ಬೆಳೆಸುವ ಕಾರ್ಯವನ್ನು ಅನೇಕ ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ವೇದಮೂರ್ತಿ ವಿದ್ವಾನ್ ಮುರಳೀಧರ ಕೆದ್ಲಾಯ ಆಶೀರ್ವಚನ ನೀಡಿದರು. ದೇವಸ್ಥಾನ ಮುಖ್ಯಸ್ಥರಾದ ಸುನಂದಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮದರ್ಶಿಗಳಾದ ಎನ್.ಕೆ.ನಾಗರಾಜ್, ಚಂದ್ರಶೇಖರ್ (ಪುಟ್ಟಣ್ಣ), ಹುಂಚದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಆರ್.ವೆಂಕಟೇಶ್, ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಎಸ್.ಮಹೇಶ್, ಪ್ರಧಾನ ಅರ್ಚಕ ಸುರೇಶ್ ಭಟ್, ಸಂಚಾಲಕರಾದ ಗಣೇಶ್, ಪೊಲೀಸ್ ಸಬ್ ಇನ್ಸ್‌ಪೆ ಕ್ಟರ್ ಶ್ರೀನಿವಾಸ್ ಸೇರಿ ಅನೇಕರಿದ್ದರು. ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಕೆ.ವಿ.ಅರವಿಂದ್, ರಾಷ್ಟ್ರಮಟ್ಟದ ಯೋಗಪಟು ಕಾವ್ಯಾ, ಬನಶಂಕರಿ ಕಲಾತಂಡದ ದಿನೇಶ್ ಎಡಮೊಗೆ ಅವರನ್ನು ಸನ್ಮಾನಿಸಲಾಯಿತು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

4 hours ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

5 hours ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

7 hours ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

7 hours ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

7 hours ago

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

15 hours ago