SSLC ವಿಧ್ಯಾರ್ಥಿ ಶಾಲೆಯಿಂದ ನಾಪತ್ತೆ – ದೂರು ದಾಖಲು
ಹೊಸನಗರ ತಾಲೂಕು ಸೊನಲೆ ಸರ್ಕಾರಿ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಎನ್ ಆರ್ ಮನೋಜ ಅಲಿಯಾಸ್ ಮನು ಸೋಮವಾರ ಶಾಲೆಗೆ ತೆರಳಿದ್ದು ಮಧ್ಯಾಹ್ನ 12:45 ರ ವೇಳೆಗೆ ಶಾಲೆಯಿಂದ ಹೊರ ಬಂದಿದ್ದು ಶಾಲಾ ಅವಧಿ ಮುಗಿದು ಸಂಜೆಯಾದರೂ ಮನೆಗೆ ಬಾರದೇ ನಾಪತ್ತೆಯಾಗಿದ್ದಾನೆ.
ಮಗನು ಮನೆಗೆ ಬಾರದ ಕಾರಣ ಅವನ ತಂದೆ ತಾಯಿ ಮುಂಬಾರು ಗ್ರಾಮ ಪಂಚಾಯಿತಿಯ ಮಾವಿನಕಟ್ಟೆ ಬೇಹಳ್ಳಿಯ ರವಿ ಹಾಗೂ ಶಶಿಕಲಾ ಶಾಲೆಯಲ್ಲೂ ಅಕ್ಕ ಪಕ್ಕದ ಸಹಪಾಠಿಗಳ ಮನೆಗಳಲ್ಲಿ ವಿಚಾರಿಸಿದಾಗ ಮಧ್ಯಾಹ್ನದವರಿಗೂ ಶಾಲೆಗೆ ಬಂದಿದ್ದು ಮಧ್ಯಾಹ್ನ ನಂತರ ನಾಪತ್ತೆಯಾಗಿದ್ದು ತಿಳಿದು ಆತಂಕಗೊಂಡು ಸಂಬಂಧಿಕರಲ್ಲಿ ಪರಿಚಯಸ್ತರಲ್ಲಿ ವಿಚಾರಿಸಿದಾಗ ಆತನ ಬಗೆ ಎಲ್ಲೂ ಸುಳಿವು ಸಿಕ್ಕದೆ ವಿಚಲಿತರಾಗಿ ಮಂಗಳವಾರ ಮಧ್ಯಾಹ್ನ ಹೊಸನಗರ ಪೊಲೀಸ್ ಠಾಣೆಗೆ ತೆರಳಿ ಮಗ ಮನು ನಾಪತ್ತೆಯಾದ ಬಗ್ಗೆ ತಾಯಿ ಶಶಿಕಲಾ ಮಗನನ್ನು ಹುಡುಕಿ ಕೊಡುವಂತೆ ದೂರು ನೀಡಿದ್ದಾರೆ
5.7 ಅಡಿ ಎತ್ತರದ ಮನೋಜ ಅಲಿಯಾಸ್ ಮನು ಶಾಲೆಗೆ ಹೋಗುವಾಗ ಕಪ್ಪು ಬಿಳಿ ಬಣ್ಣದ ರೌಂಡ್ ನೆಕ್ ಟಿ-ಶರ್ಟ್ ತಿಳಿ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದು ಕೋಲು ಮುಖ ಸಾಧಾರಣ ಮೈಕಟ್ಟು ಹೊಂದಿದ್ದು ಬಿಳಿಯ ಮೈಬಣ್ಣ ಹೊಂದಿದ್ದಾಗಿ ದೂರಿನಲ್ಲಿ ತಿಳಿಸಿ ಮಗನನ್ನು ಪತ್ತೆ ಮಾಡಿಕೊಡುವಂತೆ ಕೋರಿದ್ದಾರೆ
ಹೊಸನಗರ ಆರಕ್ಷಕ ಠಾಣೆಯ ಪೊಲೀಸರು ಮಿಸ್ಸಿಂಗ್ ದೂರು ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಈತನ ಬಗ್ಗೆ ಸುಳಿವು ಸಿಕ್ಕವರು. 86608 71194 77606 82542 95912 18245. 94816 76073 ಈ ಮೊಬೈಲ್ ನಂಬರ್ ಗಳಿಗೆ ಮಾಹಿತಿ ನೀಡಬೇಕೆಂದು ಕೋರಿದ್ದಾರೆ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply