SSLC ವಿಧ್ಯಾರ್ಥಿ ಶಾಲೆಯಿಂದ ನಾಪತ್ತೆ – ದೂರು ದಾಖಲು
ಹೊಸನಗರ ತಾಲೂಕು ಸೊನಲೆ ಸರ್ಕಾರಿ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಎನ್ ಆರ್ ಮನೋಜ ಅಲಿಯಾಸ್ ಮನು ಸೋಮವಾರ ಶಾಲೆಗೆ ತೆರಳಿದ್ದು ಮಧ್ಯಾಹ್ನ 12:45 ರ ವೇಳೆಗೆ ಶಾಲೆಯಿಂದ ಹೊರ ಬಂದಿದ್ದು ಶಾಲಾ ಅವಧಿ ಮುಗಿದು ಸಂಜೆಯಾದರೂ ಮನೆಗೆ ಬಾರದೇ ನಾಪತ್ತೆಯಾಗಿದ್ದಾನೆ.
ಮಗನು ಮನೆಗೆ ಬಾರದ ಕಾರಣ ಅವನ ತಂದೆ ತಾಯಿ ಮುಂಬಾರು ಗ್ರಾಮ ಪಂಚಾಯಿತಿಯ ಮಾವಿನಕಟ್ಟೆ ಬೇಹಳ್ಳಿಯ ರವಿ ಹಾಗೂ ಶಶಿಕಲಾ ಶಾಲೆಯಲ್ಲೂ ಅಕ್ಕ ಪಕ್ಕದ ಸಹಪಾಠಿಗಳ ಮನೆಗಳಲ್ಲಿ ವಿಚಾರಿಸಿದಾಗ ಮಧ್ಯಾಹ್ನದವರಿಗೂ ಶಾಲೆಗೆ ಬಂದಿದ್ದು ಮಧ್ಯಾಹ್ನ ನಂತರ ನಾಪತ್ತೆಯಾಗಿದ್ದು ತಿಳಿದು ಆತಂಕಗೊಂಡು ಸಂಬಂಧಿಕರಲ್ಲಿ ಪರಿಚಯಸ್ತರಲ್ಲಿ ವಿಚಾರಿಸಿದಾಗ ಆತನ ಬಗೆ ಎಲ್ಲೂ ಸುಳಿವು ಸಿಕ್ಕದೆ ವಿಚಲಿತರಾಗಿ ಮಂಗಳವಾರ ಮಧ್ಯಾಹ್ನ ಹೊಸನಗರ ಪೊಲೀಸ್ ಠಾಣೆಗೆ ತೆರಳಿ ಮಗ ಮನು ನಾಪತ್ತೆಯಾದ ಬಗ್ಗೆ ತಾಯಿ ಶಶಿಕಲಾ ಮಗನನ್ನು ಹುಡುಕಿ ಕೊಡುವಂತೆ ದೂರು ನೀಡಿದ್ದಾರೆ
5.7 ಅಡಿ ಎತ್ತರದ ಮನೋಜ ಅಲಿಯಾಸ್ ಮನು ಶಾಲೆಗೆ ಹೋಗುವಾಗ ಕಪ್ಪು ಬಿಳಿ ಬಣ್ಣದ ರೌಂಡ್ ನೆಕ್ ಟಿ-ಶರ್ಟ್ ತಿಳಿ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದು ಕೋಲು ಮುಖ ಸಾಧಾರಣ ಮೈಕಟ್ಟು ಹೊಂದಿದ್ದು ಬಿಳಿಯ ಮೈಬಣ್ಣ ಹೊಂದಿದ್ದಾಗಿ ದೂರಿನಲ್ಲಿ ತಿಳಿಸಿ ಮಗನನ್ನು ಪತ್ತೆ ಮಾಡಿಕೊಡುವಂತೆ ಕೋರಿದ್ದಾರೆ
ಹೊಸನಗರ ಆರಕ್ಷಕ ಠಾಣೆಯ ಪೊಲೀಸರು ಮಿಸ್ಸಿಂಗ್ ದೂರು ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಈತನ ಬಗ್ಗೆ ಸುಳಿವು ಸಿಕ್ಕವರು. 86608 71194 77606 82542 95912 18245. 94816 76073 ಈ ಮೊಬೈಲ್ ನಂಬರ್ ಗಳಿಗೆ ಮಾಹಿತಿ ನೀಡಬೇಕೆಂದು ಕೋರಿದ್ದಾರೆ
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…