ನಾಳೆ(27-12-2024) ರಿಪ್ಪನ್ಪೇಟೆಯಲ್ಲಿ ನಾರಸಿಂಹ ನೃತ್ಯ ರೂಪಕ –
ರಿಪ್ಪನ್ಪೇಟೆ : ಭರತನಾಟ್ಯವನ್ನು ಕೇಂದ್ರವಾಗಿಟ್ಟುಕೊಂಡು ಶಾಸ್ತ್ರೀಯ ನೃತ್ಯದ ಎಲ್ಲ ಪ್ರಾಕಾರಗಳ ಬೆಳವಣಿಗೆಗೆ ಶ್ರಮಿಸುತ್ತಿರುವ ನೃತ್ಯ ನಿಕೇತನ ಕೊಡವೂರು ಸಂಸ್ಥೆಯ ನೃತ್ಯ ರೂಪಕ ಕಾರ್ಯಕ್ರಮವನ್ನು ನಾಳೆ ಶುಕ್ರವಾರ (27-13-2024) ರಂದು ಪಟ್ಟಣದಲ್ಲಿ ಆಯೋಜಿಸಲಾಗಿದೆ.
ಪಟ್ಟಣದ ಜಯಶ್ರೀ ಮತ್ತು ಶ್ರೀನಿವಾಸ್ ಆಚಾರ್ ದಂಪತಿಗಳು ದುರ್ಗಾಂಬಿಕ ಸಾಮಿಲ್ ಆವರಣದಲ್ಲಿ ಹಮ್ಮಿಕೊಂಡಿರುವ ಪಂಚಮಾ ನವ ಚಂಡಿಕಾ ಹೋಮ ಧಾರ್ಮಿಕ ಕಾರ್ಯದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಶುಕ್ರವಾರ ಮಧ್ಯಾಹ್ನ 12-30ಕ್ಕೆ ಪಂಚಮಾ ನವ ಚಂಡಿಕಾ ಹೋಮ, ಸಂಜೆ 6 ಗಂಟೆಗೆ ಸರೋಜಮ್ಮ ಎಸ್ ಎಸ್ ಹೊನ್ನಪ್ಪಚಾರ್ ವೇದಿಕೆಯಲ್ಲಿ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು 07 ಗಂಟೆಗೆ ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ರಾತ್ರಿ 08 ಗಂಟೆಗೆ ಕಾಂತಾರ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಿದ ಉಡುಪೊ ಕೊಡವೂರಿನ ನೃತ್ಯ ನಿಕೇತನ ತಂಡದವರಿಂದ ನೃತ್ಯರೂಪಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ದುರ್ಗಾಂಬಿಕಾ ಸಾಮಿಲ್ ಮಾಲೀಕರಾದ ಶ್ರೀನಿವಾಸ್ ಆಚಾರ್ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ರಿಪ್ಪನ್ಪೇಟೆ ಪೊಲೀಸ್ ಜೀಪ್ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…
ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…
ಹಿಟ್ ಅಂಡ್ ರನ್; ಬೈಕ್ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies…
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…