Headlines

PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹಾಗೂ ವಿವಿಧ ಇಲಾಖೆಗಳ ಗ್ರೂಪ್‌ ಸಿ ಹುದ್ದೆಗಳು ಸೇರಿದಂತೆ ಒಟ್ಟು 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಚಾಲನೆ ದೊರೆತಿದೆ. ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿದಂತೆ ಒಟ್ಟು 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ…

Read More

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..! | BREAKING

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..! | BREAKING ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ನಿರ್ಮಾಪಕಿ ಗೀತಾ ಶಿವರಾಜ್​ಕುಮಾರ್ ಅವರ ಪರವಾಗಿ ಪತಿ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಬೇಸಿಗೆಯ ತೀವ್ರತೆಯಿಂದಾಗಿ ಶಿವರಾಜ್​ ಕುಮಾರ್​ ಸುಸ್ತಾಗಿದ್ದರು. ಶಿವಣ್ಣ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆಪ್ತ ಮೂಲಗಳು ತಿಳಿಸಿವೆ….

Read More

Ripponpete | ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯ 117 ನೇ ಜನ್ಮ ದಿನಾಚರಣೆ

ರಿಪ್ಪನ್‌ಪೇಟೆ – ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯ 117 ನೇ ಜನ್ಮ ದಿನಾಚರಣೆ ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 117ನೇ ಜನ್ಮ ದಿನಾಚರಣೆಯನ್ನು ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಆಚರಿಸಲಾಯಿತು‌. ಪಟ್ಟಣದ ಗ್ರಾಪಂ ಸಭಾಭವನದಲ್ಲಿ ಡಾ.ಶಿವಕುಮಾರ ಸ್ವಾಮೀಜಿರವರ ಭಕ್ತ ವೃಂದ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಳಲಿ ಮಠದ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಜಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಆಶೀರ್ವಚನ ನೀಡಿ ಕಲಿಯುಗದ ನಡೆದಾಡುವ ದೇವರಾದ…

Read More

14 ಮಕ್ಕಳನ್ನು ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮುಶಿಯಾ (ಲಂಗೂರ್) – ಅರವಳಿಕೆ ಕೊಟ್ಟು ಸೆರೆ | Hanuman langur

14 ಮಕ್ಕಳನ್ನು ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮುಶಿಯಾ (ಲಂಗೂರ್) – ಅರವಳಿಕೆ ಕೊಟ್ಟು ಸೆರೆ ಸೊರಬ ತಾಲ್ಲೂಕಿನ ಶಕುನವಳ್ಳಿಯಲ್ಲಿ ಕಳೆದೊಂದು ವಾರದಲ್ಲಿ 14 ಮಕ್ಕಳಿಗೆ ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮೂರು ಮುಶಿಯಾಗಳ (ಹನುಮಾನ್‌ ಲಂಗೂರ್‌) ಪೈಕಿ ಒಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಸೆರೆಹಿಡಿದಿದ್ದಾರೆ. ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅರವಳಿಕೆ ಮದ್ದು ನೀಡಿ ಮುಶಿಯಾ ಸೆರೆ ಹಿಡಿಯಲಾಗಿದೆ. ಗ್ರಾಮದಲ್ಲಿ ಮುಶಿಯಾಗಳ ತಂಡ ಬೀಡು ಬಿಟ್ಟಿದೆ. ಅದರಲ್ಲಿ ಮೂರು ಮುಶಿಯಾ ಮಕ್ಕಳ ಮೇಲೆ ದಾಳಿ ಮಾಡುತ್ತಿವೆ…

Read More

Hombuja | ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ , ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ – ಮುನಿಶ್ರೀಗಳವರು

ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ , ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ – ಮುನಿಶ್ರೀಗಳವರು ಹೊಂಬುಜ : ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ, ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ ಹೊಂಬುಜ ಶ್ರೀಕ್ಷೇತ್ರದಲ್ಲಿ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಆರಾಧನಾ ಪುಣ್ಯಪ್ರದಾಯಿನಿ ಸನ್ನಿಧಿಯಾಗಿದೆ ಎಂದು ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ತಿಳಿಸಿದರು.  ವಾರ್ಷಿಕ ರಥೋತ್ಸವ ಅಂಗವಾಗಿ ‘ಸಿದ್ಧಾಂತಕೀರ್ತಿ’ ಗೌರವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುನಿಶ್ರೀಗಳವರು ಜೈನ…

Read More

Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ

Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ  ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ ಮಲಗಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಶಿನ್ಸ್ ಜೋಸೇಫ್ ಎನ್ನಲಾಗುತಿದ್ದು ಈತನು ಕಳೆದ 20 ವರ್ಷಗಳ ಹಿಂದೆ ರಿಪ್ಪನ್‌ಪೇಟೆಯಲ್ಲಿ ವಾಸವಾಗಿದ್ದು ಪ್ರಸ್ತುತ ಎನ್ ಆರ್ ಪುರ ನಿವಾಸಿಯಾಗಿದ್ದಾನೆ. ಕಳೆದೆರಡು ತಿಂಗಳುಗಳಿಂದ ರಿಪ್ಪನ್‌ಪೇಟೆಯಲ್ಲಿ ಸ್ನೇಹಿತರೊಂದಿಗೆ ಇದ್ದ ಈತನು ಭಾನುವಾರ ರಾತ್ರಿ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ…

Read More

hombuja | “ಆರೋಗ್ಯದಾಯಕ ಪರಿಸರ ಪಸರಿಸಲಿ” – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ

“ಆರೋಗ್ಯದಾಯಕ ಪರಿಸರ ಪಸರಿಸಲಿ” –  ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಸಂಪ್ರದಾಯದAತೆ ವಾರ್ಷಿಕ ರಥಯಾತ್ರಾ ಮಹೋತ್ಸವದ ಅಂಗವಾಗಿ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಜಿನಾಗಮ ಪೂರ್ವ ಪದ್ಧತಿಯಂತೆ ವಿಶೇಷ ಪೂಜಾವಿಧಿ ನೆರವೇರಿತು.  ಪೂಜ್ಯ ಮುನಿಶ್ರೀ 108 ಅಮೋಘಕೀರ್ತಿ ಮಹಾರಾಜರು ಹಾಗೂ ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ಪೂಜಾ ವಿಧಿ-ವಿಧಾನ, ಕಲಿಕುಂಡ ಯಂತ್ರಾರಾಧನೆ ಸಾನಿಧ್ಯ ನೀಡಿದರು. ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ…

Read More

Sagara | ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು

Sagara | ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು ಸಾಗರ: ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.  ಜೋಸೆಫ್ ನಗರದಲ್ಲಿ  ಬಾಡಿಗೆ ಮನೆಯಲ್ಲಿ ವಾಸವಿದ್ದ  ಅಸೀಫ್ ಹಾಗೂ ಅನಜುಂ ಅವರ ಪುತ್ರಿ ಆನಮ್ ಫಾತಿಮಾ (1.5 ವರ್ಷ) ಮೃತಪಟ್ಟ ದುರ್ದೈವಿ ಸಾಗರ ನಗರಸಭೆ ವ್ಯಾಪ್ತಿಯ ಜೋಸೆಫ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಸೀಫ್ ಹಾಗೂ ಅನಜುಂ ಅವರ ಒಂದೂವರೆ ವರ್ಷದ ಪುತ್ರಿ ಆನಮ್ ಫಾತಿಮಾ ಭಾನುವಾರ…

Read More

ರಿಪ್ಪನ್‌ಪೇಟೆಯಲ್ಲಿ ಸೈಟ್ ಕೊಡಿಸುವುದಾಗಿ ಬಡ ವೃದ್ದೆಯನ್ನು ಕರೆಸಿ ಹತ್ಯೆಗೈದ ಕೋಡೂರಿನ ಮಯೂರ್ ಭಟ್ – ಖತರ್ನಾಕ್ ಕ್ರಿಮಿಯನ್ನು ಪೊಲೀಸರು ಭೇಟೆಯಾಡಿದ್ದೇ ರೋಚಕ..!!!| Crime News

ರಿಪ್ಪನ್‌ಪೇಟೆಯಲ್ಲಿ ಸೈಟ್ ಕೊಡಿಸುವುದಾಗಿ ಬಡ ವೃದ್ದೆಯನ್ನು ಕರೆಸಿ ಹತ್ಯೆಗೈದ ಕೋಡೂರಿನ ಮಯೂರ್ ಭಟ್ – ಖತರ್ನಾಕ್ ಕ್ರಿಮಿಯನ್ನು ಪೊಲೀಸರು ಭೇಟೆಯಾಡಿದ್ದೇ ರೋಚಕ..!!! ಅದು ಅಪರಿಚಿತ ಮಹಿಳೆಯ ಕೊಲೆ ಪ್ರಕರಣ. ಪೊಲೀಸರಿಗೆ ಸವಾಲಾಗಿದ್ದ ಈ ಪ್ರಕರಣವನ್ನು ಕೇವಲ ಹತ್ತು ದಿನಗಳೊಳಗೆ ಬೇಧಿಸಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ರಿಪ್ಪನ್‌ಪೇಟೆಯ ಚಾಣಾಕ್ಷ ಪೊಲೀಸರ ತಂಡ. ಚಾಣಾಕ್ಷತನದಿಂದ ಕೊಲೆಗೈದು ಮೃತ ದೇಹವನ್ನು ಕೆರೆಗೆ ಬಿಸಾಡಿದ್ದ ಕೋಡೂರು ಗ್ರಾಮದ ಮಯೂರ್ ಭಟ್ ಹಾಗೂ ಕಾನೂನು ಸಂಘರ್ಷಕ್ಕೊಳ್ಳಗಾದ ಸ್ನೇಹಿತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ… ಹೌದು… ಶಿವಮೊಗ್ಗ…

Read More

Accident | ಜನನಿಬಿಡ ಪ್ರದೇಶದಲ್ಲಿ ಬಸ್ ಟೈರ್ ಬ್ಲಾಸ್ಟ್ | ಕೆಳಕ್ಕೆ ಬಿದ್ದ ಬಾಲಕಿ

ಜನನಿಬಿಡ ಪ್ರದೇಶದಲ್ಲಿ ಸಿಟಿ ಬಸ್ ಟೈರ್ ಬ್ಲಾಸ್ಟ್ | ಕೆಳಕ್ಕೆ ಬಿದ್ದ ಬಾಲಕಿ | ಜನರಲ್ಲಿ ಆತಂಕ ಶಿವಮೊಗ್ಗ: ನಗರದ ನೆಹರೂ ರಸ್ತೆಯಲ್ಲಿ ಸಿಟಿ ಬಸ್ ಟೈರ್ ಸ್ಪೋಟಗೊಂಡ ಪರಿಣಾಮ ಬಸ್ ಒಳಗಿದ್ದ ಬಾಲಕಿ ಕೆಳಕ್ಕೆ ಬಿದ್ದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ನೆಹರೂ ರಸ್ತೆಯಲ್ಲಿ ವೀರಭದ್ರೇಶ್ವರ ಸಿಟಿ ಬಸ್ ಟೈರ್ ಸ್ಪೋಟಗೊಂಡಿದೆ. ಪರಿಣಾಮವಾಗಿ ಬಸ್ ತೂತ ಬಿದ್ದಿದ್ದು ಬಾಲಕಿ ಕೆಳಕ್ಕೆ ಬಿದ್ದಿದ್ದಾಳೆ. ಚಾಲಕನ ಹಿಂಬದಿಯ ಸೀಟಿನಲ್ಲಿ ಬಾಲಕಿ ಕುಳಿತಿದ್ದಳು. ಟೈರ್ ಬ್ಲಾಸ್ಟ್ ಆದ…

Read More
Exit mobile version