ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ!
ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ! ಶಿವಮೊಗ್ಗ : ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯ ನಿರತ ಚಾಲಕ-ಕಂ-ನಿರ್ವಾಹಕ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ. ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಎನ್ನಲಾಗಿದೆ. ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಘಟಕದಲ್ಲಿ ಕೆ.ರೇಣುಕಾ ಎಂಬುವರು ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಇಬ್ಬರ ನಡುವೆ…