Headlines

ರಿಪ್ಪನ್‌ಪೇಟೆಯಲ್ಲಿ ಲೇಔಟ್‌ಗಳು ನಕಲಿ ದಾಖಲೆ ಸೃಷ್ಟಿಸಿ ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಪಂ ಸದಸ್ಯರ ಆರೋಪಕ್ಕೆ ಸ್ಪಷ್ಟನೆ | Ripponpet

ರಿಪ್ಪನ್‌ಪೇಟೆಯಲ್ಲಿ ಲೇಔಟ್‌ಗಳು ನಕಲಿ ದಾಖಲೆ ಸೃಷ್ಟಿಸಿ ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಪಂ ಸದಸ್ಯರ ಆರೋಪಕ್ಕೆ ಸ್ಪಷ್ಟನೆ ರಿಪ್ಪನ್‌ಪೇಟೆ;-ಇಲ್ಲಿನ ಗ್ರಾಮಪಂಚಾಯ್ತಿ ವಸತಿ ನಿವೇಶನ ಉದ್ದೇಶಕ್ಕಾಗಿ ಭೂಪರಿವರ್ತನೆಯನ್ನು ಮಾಡಿರುವ ಕೆಲವು ಲೇಔಟ್‌ಗಳು ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಮ ಪಂಚಾಯ್ತಿ ಸದಸ್ಯ ಜಿ.ಡಿ.ಮಲ್ಲಿಕಾರ್ಜುನ ಆರೋಪದಲ್ಲಿ ಯಾವುದೇ ಹುರುಳಿಲ್ಲ ಗ್ರಾಪಂ ಸದಸ್ಯನಾಗಿ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚಕಾರವೆತ್ತದೇ ಈಗ ಬಹಿರಂಗವಾಗಿ ಆರೋಪಿಸುತ್ತಿರುವುದು ಖಂಡನೀಯ ಎಂದು ಗ್ರಾಮ ಪಂಚಾಯ್ತಿ ಸದಸ್ಯ  ನಿರೂಪ್ ಕುಮಾರ್ ಹೇಳಿದರು. ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಗವಟೂರು ಗ್ರಾಮದ…

Read More

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ  ವೇಶ್ಯವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಶಿವಮೊಗ್ಗದ ವಿನೋಬನಗರ ಪೊಲೀಸರಿಂದ ‌ದಾಳಿ ನಡೆದಿದೆ. ಬಾಡಿಗೆಗೆ ಮನೆ ಪಡೆದು ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇಲೆ ದಾಳಿ ನಡೆದಿದೆ. ಶಿವಮೊಗ್ಗದ ಆಲ್ಕೊಳ ವೃತ್ತ ಸಮೀಪದ ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆದಿದೆ. ವೇಶ್ಯವಾಟಿಕೆ ನಡೆಸುತ್ತಿದ್ದ ಮಹಿಳೆ ಹಾಗು ಮನೆಯಲ್ಲಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ವೇಶ್ಯವಾಟಿಕೆಯಲ್ಲಿ ತೊಡಗಿದ್ದ ಯುವತಿಯನ್ನು ರಕ್ಷಿಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Ripponpete | ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಪೋಷಕರ ಸಹಕಾರ ಅಗತ್ಯ : ಧನಲಕ್ಷ್ಮಿ ಗಂಗಾಧರ್

ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಪೋಷಕರ ಸಹಕಾರ ಅಗತ್ಯ : ಧನಲಕ್ಷ್ಮಿ ಗಂಗಾಧರ್  ರಿಪ್ಪನ್ ಪೇಟೆ :- ಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಿ, ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಎಲ್ಲ ಪೋಷಕರು  ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು  ಹೇಳಿದರು ಪಟ್ಟಣದ ಸರಕಾರಿ  ಆಸ್ಪತ್ರೆಯಲ್ಲಿ ಪಲ್ಸ್ ಪೊಲೀಯೊ ಕಾರ್ಯಕ್ರಮಕ್ಕೆ  ಚಾಲನೆ ನೀಡಿ ಮಾತನಾಡಿ ಪೋಲಿಯೋದಿಂದ…

Read More

ಅಜ್ಜ ಅಜ್ಜಿಯರ ಪಾದ ಪೂಜೆ ಮಾಡಿ ಸಂತಸಪಟ್ಟ ಮೊಮ್ಮಕ್ಕಳು – ಹೃದಯಸ್ಪರ್ಶಿ ಕಾರ್ಯಕ್ರಮಕ್ಕೆ ಸಾಕ್ಷಿಯಾಯ್ತು ಸಮಟಗಾರು ಶಾಲೆ | SAMATAGARU

ಅಜ್ಜ ಅಜ್ಜಿಯರ ಪಾದ ಪೂಜೆ ಮಾಡಿ ಸಂತಸಪಟ್ಟ ಮೊಮ್ಮಕ್ಕಳು ಅಕ್ಷತೆಯನಿಕ್ಕಿ ಹರಸಿದ ಅಜ್ಜ ಅಜ್ಜಿಯರು ; ಹೃದಯಸ್ಪರ್ಶಿ ಕಾರ್ಯಕ್ರಮಕ್ಕೆ ಸಾಕ್ಷಿಯಾಯ್ತು ಸಮಟಗಾರು ಶಾಲೆ ರಿಪ್ಪನ್‌ಪೇಟೆ : ಪ್ರತಿ ಮನೆಯ ಆಸ್ತಿ ಅಲ್ಲಿನ ಹಿರಿಯ ಜೀವಗಳು. ಸದಾ ಕಿರಿಯರ ಶ್ರೇಯೋಭಿವೃದ್ಧಿಯನ್ನು ಬಯಸುವ ಈ ಹಿರಿಯ ಜೀವಗಳಾದ ಅಜ್ಜ ಅಜ್ಜಿಯನ್ನು ಗೌರವಿಸುವ ಒಂದು ವಿನೂತನ ಕಾರ್ಯಕ್ರಮಕ್ಕೆ ಹೊಸನಗರ ತಾಲೂಕಿನ ಸ.ಹಿ.ಪ್ರಾಥಮಿಕ ಶಾಲೆ ಸಮಟಗಾರುವಿನಲ್ಲಿ ನಡೆಯಿತು. ಏಳನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಜೊತೆ ನಡೆದ ಈ ಕಾರ್ಯಕ್ರಮದಲ್ಲಿ ಅಜ್ಜ ಅಜ್ಜಿಯರ…

Read More

ಹೊಸನಗರ ಅಗ್ನಿಶಾಮಕ ಠಾಣೆಯ ರಮೀಜ್’ರಾಜ ಶೇಖ್ ರವರಿಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಹಾಗೂ ಕಂಚಿನ ಪದಕ | Hosanagara

ಹೊಸನಗರ ಅಗ್ನಿಶಾಮಕ ಠಾಣೆಯ ರಮೀಜ್’ರಾಜ ಶೇಖ್ ರವರಿಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಹಾಗೂ ಕಂಚಿನ ಪದಕ ಹೊಸನಗರ : ಇಲ್ಲಿನ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ರಮೀಜ್’ರಾಜ ಶೇಖ್ ರವರಿಗೆ ಅಹ್ಮದಾಬಾದ್ ನಲ್ಲಿ ನಡೆದ ಎರಡನೇ ಆಲ್ ಇಂಡಿಯಾ ಫೈರ್ ಸರ್ವಿಸ್ ಅಂಡ್ ಫೈರ್ ಸರ್ವಿಸ್ ಸ್ಪೋರ್ಟ್ಸ್‌ ಕ್ರೀಡಾಕೂಟದಲ್ಲಿ ಭಾಗವಹಿಸಿ ಕಬಡ್ಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕವನ್ನು ಹಾಗೂ 4X100 ಮೀಟರ್ಸ್ ರಿಲೇ ಓಟದಲ್ಲಿ ಕಂಚಿನ ಪದಕವನ್ನು ಗಳಿಸಿ ಮಲೆನಾಡಿನ ಕೀರ್ತಿಪತಾಕೆಯನ್ನು ಉತ್ತುಂಗಕ್ಕೇರಿಸಿದ್ದಾರೆ‌‌. ಅಗ್ನಿಶಾಮಕ ಮತ್ತು ತುರ್ತು ಸೇವಾ ಮಹಾ…

Read More

ಕೋಡೂರಿನ ಬೇಕರಿಯಲ್ಲಿ ಮಾರಾಮಾರಿ – ಬೇಕರಿ ಮಾಲೀಕಳ ಮೇಲೆ ಹಲ್ಲೆ | ಎರಡು ಪ್ರತ್ಯೇಕ ಪ್ರಕರಣ ದಾಖಲು | ಅಷ್ಟಕ್ಕೂ ದೂರಿನಲ್ಲೇನಿದೆ..?? ಈ ಸುದ್ದಿ ನೋಡಿ | Crime News

ಕೋಡೂರಿನ ಬೇಕರಿಯಲ್ಲಿ ಮಾರಾಮಾರಿ – ಬೇಕರಿ ಮಾಲೀಕಳ ಮೇಲೆ ಹಲ್ಲೆ | ಎರಡು ಪ್ರತ್ಯೇಕ ಪ್ರಕರಣ ದಾಖಲು | ಅಷ್ಟಕ್ಕೂ ದೂರಿನಲ್ಲೇನಿದೆ..?? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಸಮೀಪದ ಕೋಡೂರಿನ ಬೇಕರಿಯೊಂದರಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಗಿದೆ. ಘಟನೆ 1 : ಕೋಡೂರಿನ ಲಕ್ಷ್ಮಿ ಮಲ್ನಾಡ್ ಬೇಕರಿಯಲ್ಲಿ ಶುಕ್ರವಾರ ಸಂಜೆ ಗುಂಪೊಂದು ಏಕಾಏಕಿ ಬೇಕರಿಗೆ ನುಗ್ಗಿ ಬೇಕರಿ ಮಾಲೀಕನ ಪತ್ನಿ , ತಾಯಿ ಹಾಗೂ ಬೇಕರಿಯ…

Read More

ರಿಪ್ಪನ್‌ಪೇಟೆಯಲ್ಲಿ ಭೂ ದಲ್ಲಾಳಿಗಳಿಂದ ಲೇಔಟ್ ಮಾಫಿಯ : ಗ್ರಾಪಂ ಸದಸ್ಯನಿಂದಲೇ ಗಂಭೀರ ಆರೋಪ

ರಿಪ್ಪನ್‌ಪೇಟೆಯಲ್ಲಿ ಭೂ ದಲ್ಲಾಳಿಗಳಿಂದ ಲೇಔಟ್ ಮಾಫಿಯ : ಗ್ರಾಪಂ ಸದಸ್ಯನಿಂದಲೇ ಗಂಭೀರ ಆರೋಪ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮಧ್ಯವರ್ತಿಗಳ ಹಾವಳಿಯಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮ ಲೇಔಟ್ ನಿರ್ಮಾಣವಾಗುತಿದ್ದು ಈ ಮಾಫಿಯಾದಲ್ಲಿ ಕೆಲವು ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಪಟ್ಟಣದ ಗ್ರಾಪಂ ಹಿರಿಯ ಸದಸ್ಯ ಜಿ ಡಿ ಮಲ್ಲಿಕಾರ್ಜುನ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ಗ್ರಾಪಂ ಸಭಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ರಿಪ್ಪನ್ ಪೇಟೆ ಪಟ್ಟಣವು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಬಹಳಷ್ಟು ಬೆಳೆಯುತ್ತಿರುವುದರಿಂದ ನಗರ ಭಾಗದಲ್ಲಿ…

Read More

Ripponpete | ವಿಷ ಸೇವಿಸಿ ಮೂಗೂಡ್ತಿಯ ಯುವಕ ಆತ್ಮಹತ್ಯೆ

ವಿಷ ಸೇವಿಸಿ ಯುವಕ ಆತ್ಮಹತ್ಯೆ ರಿಪ್ಪನ್‌ಪೇಟೆ : ಪಟ್ಟಣದ ಸಮೀಪದ ಮೂಗೂಡ್ತಿ ಗ್ರಾಮದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನಡೆದಿದೆ. ಮೂಗೂಡ್ತಿ ಗ್ರಾಮದ ನಿವಾಸಿ ಕೀರ್ತಿ (22) ಮೃತಪಟ್ಟ ಯುವಕನಾಗಿದ್ದು ಈತನು ಬೆಂಗಳೂರಿನಲ್ಲಿ ಕ್ಯಾಟರಿಂಗ್ ವೃತ್ತ್ತಿ ಮಾಡಿಕೊಂಡಿದ್ದನು. ಗುರುವಾರ ಸಂಜೆ ಬೆಂಗಳೂರಿನಿಂದ ಸ್ವಗ್ರಾಮ ಮೂಗೂಡ್ತಿಗೆ ಬಂದು ತನ್ನ ಅಣ್ಣನಿಗೆ ಮೊಬೈಲ್ ಮೂಲಕ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತಿದ್ದೇನೆ ಎಂದು ಸ್ವತೋಟಕ್ಕೆ ತೆರಳಿ ವಿಷ ಸೇವಿಸಿದ್ದಾನೆ.ಗಾಬರಿಗೊಂಡ ಅಣ್ಣ ತಮ್ಮನಿಗಾಗಿ ಹುಡುಕಾಟ ಪ್ರಾರಂಭಿಸಿದ್ದಾನೆ. ಕೆಲಸಮಯದ ನಂತರ ಆತನಿಗೆ…

Read More

ಉದ್ಯೋಗವಿಲ್ಲದೇ ಮನನೊಂದ ವ್ಯಕ್ತಿ ಮನೆಯ ಟೆರೇಸ್ ಮೇಲೆ ನೇಣುಬಿಗಿದುಕೊಂಡು ಆತ್ಮಹತ್ಯೆ |Crime News

ಉದ್ಯೋಗವಿಲ್ಲದೇ ಮನನೊಂದ ವ್ಯಕ್ತಿ ಮನೆಯ ಟೆರೇಸ್ ಮೇಲೆ ನೇಣುಬಿಗಿದುಕೊಂಡು ಆತ್ಮಹತ್ಯೆ | Crime News SaGara | ಮನೆಯ ಟೆರೇಸ್‌ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರು ನಗರದಲ್ಲಿ ನಡೆದಿದೆ. ಮಧುಸೂದನ್(55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಸಾಗರದ ಹೆಸರಾಂತ ಬೇಕರಿ ಒಂದರ ಉದ್ಯೋಗಿಯಾಗಿದ್ದ ಮಧುಸೂದನ್ ಇತ್ತಿಚೆಗೆ ಕೆಲಸ ಬಿಟ್ಟಿದ್ದ ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಬಿಟ್ಟ ಬಳಿಕ ಬೇರೆಡೆ ಸಿಕ್ಕಿರಲಿಲ್ಲ. ಉದ್ಯೋಗಕ್ಕಾಗಿ ಸಿರ್ಸಿಗೆ ಹೋಗಬೇಕಾಗಿತ್ತು.ಉದ್ಯೋಗ ಅರಸಿಕೊಂಡು ಸಿರ್ಸಿಗೆ ಹೋಗಲಾಗದೆ,…

Read More

ಒಡಹುಟ್ಟಿದ ಅಣ್ಣನನ್ನೇ ಸ್ಕೆಚ್ ಹಾಕಿ ಬರ್ಬರವಾಗಿ ಹತ್ಯೆಗೈದ ತಮ್ಮ – ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..!! ಈ ಸುದ್ದಿ ನೋಡಿ | Crime News

ಒಡಹುಟ್ಟಿದ ಅಣ್ಣನನ್ನೇ ಸ್ಕೆಚ್ ಹಾಕಿ ಬರ್ಬರವಾಗಿ ಹತ್ಯೆಗೈದ ತಮ್ಮ – ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..!! ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ಗುರುವಾರ ಸಂಜೆ ಓರ್ವ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಹೆದ್ದಾರಿ ಪಕ್ಕದಲ್ಲಿ ಕೊಲೆ ನೋಡಿದ ಜನರು ಗಾಬರಿಯಾಗಿದ್ದರು.   ಕೊಲೆಯಾದ ವ್ಯಕ್ತಿ ಸೊರಬ ತಾಲೂಕಿನ ಉಡಿನೀರು ಗ್ರಾಮದ ರಫಿಕ್ (39) ಎನ್ನುವುದು ಪೊಲೀಸರಿಗೆ ತನಿಖೆ ವೇಳೆ ತಿಳಿದುಬಂದಿದೆ. ನಡೆದಿದ್ದೇನು..???? ಮೃತ ರಫ಼ಿಕ್ ನನ್ನು ಅವನ…

Read More
Exit mobile version