Headlines

ದಾರಿಹೋಕನನ್ನು ವಂಚಿಸಿ ಉಂಗುರ ದೋಚಿದ ಬೈಕ್ ಸವಾರರು

ದಾರಿಹೋಕನನ್ನು ವಂಚಿಸಿ ಉಂಗುರ ದೋಚಿದ ಬೈಕ್ ಸವಾರರು ಶಿವಮೊಗ್ಗ: ದಾರಿಯಲ್ಲಿ ಸಿಗುವ ವ್ಯಕ್ತಿಗಳು ನಂಬಿಕೆಯನ್ನು ಬಂಡವಾಳ ಮಾಡಿಕೊಂಡು ಹೇಗೆಲ್ಲಾ ಯಾಮಾರಿಸುತ್ತಾರೆ ಎಂಬುದಕ್ಕೆ ಸಾಕ್ಷಿ ಎನ್ನುವಂತಹ ಪ್ರಕರಣವೊಂದು ಶಿವಮೊಗ್ಗದ ದೊಡ್ಡಪೇಟೆ ಪೊಲೀಸಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ವೀರಶೈವ ರುದ್ರಭೂಮಿಯ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನ ಸ್ಕೂಟರ್‌ನಲ್ಲಿ ಬಂದ ಇಬ್ಬರು ಮಾತನಾಡಿಸಿದ್ದಾರೆ. ಕರುಬರಪಾಳ್ಯದ ದುರ್ಗಮ್ಮನ ದೇವಸ್ಥಾನದ ಹುಂಡಿಗೆ ಹಣ ಹಾಕಬೇಕು. ಆದರೆ ದೇವಸ್ಥಾನದ ಬಾಗಿಲು ಹಾಕಿದೆ. ಆ ದುಡ್ಡನ್ನ ನಿಮಗೆ ಕೊಡುತ್ತೇವೆ. ಸಂಜೆ ನೀವೆ ಹಾಕಬಹುದಾ ಎಂದು ಕೇಳಿದ್ದಾರೆ….

Read More

ಕಸ ಎಸೆಯುವವರಿಗೆ ವಿಭಿನ್ನ ಬ್ಯಾನರ್ ಮೂಲಕ ಪಿಂಡ ಪ್ರಧಾನದ ಎಚ್ಚರಿಕೆ ಕೊಟ್ಟ ಸ್ಥಳೀಯರು

ಕಸ ಎಸೆಯುವವರಿಗೆ ವಿಭಿನ್ನ ಬ್ಯಾನರ್ ಮೂಲಕ ಪಿಂಡ ಪ್ರದಾನದ ಎಚ್ಚರಿಕೆ ಕೊಟ್ಟ ಸ್ಥಳೀಯರು ಮಂಗಳೂರು: ಸಾರ್ವಜನಿಕರು ಕಸ ಎಸೆಯುವ ಎಷ್ಟು  ಏರಿಯಾಗಳಿವೆಯೋ ಅದರಷ್ಟೇ ಗಲೀಜಾದ ಏರಿಯಾಗಳೂ ಇವೆ. ಕಸವನ್ನು ಜನ ಎಲ್ಲಿ ಬೇಕೆಂದರಲ್ಲಿ ಎಸೆದು ಪರಿಸರವನ್ನು ಹಾಳುಮಾಡುತ್ತಿದ್ದಾರೆ. ಇದನ್ನು ನಿಲ್ಲಿಸಲು ಹಾಕಿರುವಂಥ ಬ್ಯಾನರ್ ಒಂದು ಇದೀಗ  ಮಂಗಳೂರಿನ ಹಳ್ಳಿಯೊಂದರಲ್ಲಿ  ಕಂಡುಬಂದಿದೆ. ಎಲ್ಲೆಡೆ ವೈರಲ್ ಆಗುತ್ತಿದೆ. “ಕಸದೊಂದಿಗೆ ನಿಮ್ಮ ಪಿಂಡ ಪ್ರದಾನವನ್ನು ಸಹ ಇಲ್ಲೇ ಮಾಡುವ, ಕಸ ಬಿಸಾಡುವ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ” ಎಂದು ಬರೆದಿರುವ ಬ್ಯಾನರ್ ಒಂದನ್ನು…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದ್ದು ಇನ್ನೊಂದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ರಿಪ್ಪನ್‌ಪೇಟೆ ಪೊಲೀಸರು…

Read More

ರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ನಗರದ  ಮೊಹಮದ್ ಬಿಲಾಲ್ ಆಯ್ಕೆ

ರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ನಗರದ  ಮೊಹಮದ್ ಬಿಲಾಲ್ ಆಯ್ಕೆ ಶಿವಮೊಗ್ಗ: SGFI ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಗೆ  ಶಿವಮೊಗ್ಗದ  ಮೊಹಮದ್ ಬಿಲಾಲ್ ಆಯ್ಕೆಯಾಗಿದ್ದಾರೆ. ಮಧ್ಯಪ್ರದೇಶದ ಇಂದೋರ್‌ ನಲ್ಲಿ ಡಿಸೆಂಬರ್ 19ರಿಂದ 24ರವರೆಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಲು ತೆರಳುತ್ತಿದ್ದಾನೆ. ದಾವಣಗೆರೆಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ಪೈಕಿ ಮಹಮದ್ ಬಿಲಾಲ್ ಪದಕ ಪಡೆದಿರುವ ಏಕೈಕ ಕ್ರೀಡಾಪಟುವಾಗಿದ್ದಾನೆ. ಕಳೆದ ವರ್ಷ ಸಹ ಶಾಲಾ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸಹ ಬಿಲಾಲ್ ಪ್ರಥಮ ಸ್ಥಾನ…

Read More

ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಹಾಕಲು ಮುಂದಾದ ರಿಪ್ಪನ್‌ಪೇಟೆ ಪೊಲೀಸರು

ಬಿಡಾಡಿ ಜಾನುವಾರುಗಳಿಗೆ ರೇಡಿಯಂ ಬೆಲ್ಟ್ ಅಳವಡಿಸಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ರಾತ್ರಿ ವೇಳೆ ಅಪಘಾತದಲ್ಲಿ ಮೂಕ ಜಾನುವಾರುಗಳು ಗಾಯಗೊಳ್ಳುವುದು, ಕೆಲವೊಮ್ಮೆ ಸಾಯುವುದು, ವಾಹನ ಸವಾರರು ಸಹ ತೊಂದರೆಗೀಡಾಗುವುದು, ವಾಹನ ಜಖಂಗೊಳ್ಳುವುದನ್ನು ತಪ್ಪಿಸುವ ಉದ್ದೇಶದಿಂದ ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಕಟ್ಟುವ ಕೆಲಸವನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಪ್ರಾರಂಭಿಸಲಾಗಿದೆ. ಈ ಮೂಲಕ ರಾತ್ರಿ ವೇಳೆ ವಾಹನ ಸವಾರರಿಗೆ ಕತ್ತಲೆಯಲ್ಲಿದ್ದರು ಜಾನುವಾರುಗಳು ಕಾಣುವಂತೆ ಮಾಡಲಾಗುತ್ತಿದ್ದು,ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಬಿಡಾಡಿ ದನಗಳು…

Read More

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಹೊಟೇಲ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಮನೆ ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸುತ್ತಿದ್ದರೂ ತಾಲೂಕಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ನಮಗೆ ಬರುವುದು ಬಂದರೆ ಸಾಕು ಊರು ಹಾಳಾಗಿ ಹೋಗಲಿ ಎನ್ನುತ್ತಿರುವ ಹಾಗೆ ಇರುವುದನ್ನು ಕಂಡು ಸಾರ್ವಜನಿಕರು ಹಿಡಿ…

Read More

ಕೆರೆ ಹಾವನ್ನು ಅಟ್ಟಾಡಿಸಿಕೊಂಡು ಬಂದು ಸೂಟ್ ಕೇಸ್ ನಲ್ಲಿ ಅವಿತು ಕುಳಿತ ಬೃಹತ್ ಕಾಳಿಂಗ ಸರ್ಪ

ಕೆರೆ ಹಾವನ್ನು ಅಟ್ಟಾಡಿಸಿಕೊಂಡು ಬಂದು ಸೂಟ್ ಕೇಸ್ ನಲ್ಲಿ ಅವಿತು ಕುಳಿತ ಬೃಹತ್ ಕಾಳಿಂಗ ಸರ್ಪ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ 11 ಅಡಿ ಉದ್ದದ ಕಾಳಿಂಗ ಸರ್ಪವೊಂದು ಮನೆಯೊಂದರಲ್ಲಿಟ್ಟಿದ್ದ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ಮನೆಯ ಟ್ರಂಕ್‌ನಲ್ಲಿದ್ದ ಹಾವನ್ನು ಕಂಡು ಗಾಬರಿಯಾದ ಮನೆಯವರು ಆ ಬಳಿಕ ಉರಗ ಸಂರಕ್ಷಕರ ಮೂಲಕ ಸರ್ಪವನ್ನು ಸುರಕ್ಷಿತವಾಗಿ ಹಿಡಿಸಿದ್ದಾರೆ.. ತೀರ್ಥಹಳ್ಳಿಯ ಊಂಟೂರುಕಟ್ಟೆ ಸಮೀಪದ ಕಟ್ಟೆಕೊಪ್ಪದ ಬಳಿ ಇರುವ ಮುನಿಯಮ್ಮ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಇವರ ಮನೆಯಲ್ಲಿದ್ದ ಟ್ರಂಕ್‌ನಲ್ಲಿ ಕಳೆದ ಭಾನುವಾರ ರಾತ್ರಿ…

Read More

RIPPONPETE | ಸಮುದಾಯ ಆಸ್ಪತ್ರೆಯ ಜಾಗ ಒತ್ತುವರಿ ಆರೋಪ – ಸರ್ವೆಯಿಂದ ಹೊರಬಿತ್ತು ಸತ್ಯಾಂಶ

RIPPONPETE | ಸಮುದಾಯ ಆಸ್ಪತ್ರೆಯ ಜಾಗ ಒತ್ತುವರಿ ಆರೋಪ – ಸರ್ವೆಯಿಂದ ಹೊರಬಿತ್ತು ಸತ್ಯಾಂಶ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಗವಟೂರಿನಲ್ಲಿ ಸಮುದಾಯ ಆಸ್ಪತ್ರೆಗೆ ಮೀಸಲಿಟ್ಟಿದ್ದ 5 ಎಕರೆ ಜಾಗ ಖಾಸಗಿಯವರಿಂದ ಒತ್ತುವರಿಯಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಸರ್ವೆ ಕಾರ್ಯ ಇಂದು ನಡೆದು ಯಾವುದೇ ಒತ್ತುವರಿಯಾಗದೇ ಇರುವ ವಿಚಾರ ಬೆಳಕಿಗೆ ಬಂದಿದೆ. ಹೊಸನಗರ ರಸ್ತೆಯ ಗವಟೂರು ಗ್ರಾಮದಲ್ಲಿರುವ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಾಯ್ದಿರಿಸಲಾಗಿರುವ ಜಾಗದಲ್ಲಿ ಸರ್ಕಾರದಿಂದ 30 ಲಕ್ಷ ರೂ. ವೆಚ್ಚದ ಬೇಲಿ ನಿರ್ಮಾಣ…

Read More

ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ

ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ ಶಿವಮೊಗ್ಗ ಜಿಲ್ಲೆಮಟ್ಟದ ವಿವಿಧ ಬ್ಲಾಕ್‍‍ಗಳ ಗ್ರಾಮೀಣ ಭಾಗದ 5ನೇ ತರಗತಿಯ 130 ವಿದ್ಯಾರ್ಥಿಗಳು ಪಿಎಂ ಶ್ರೀ ನವೋದಯ ವಿದ್ಯಾಲಯಕ್ಕೆ ಪ್ರವಾಸ ಕೈಗೊಂಡರು. ಪಿಎಂ ಶ್ರೀ ನವೋದಯ ಶಿವಮೊಗ್ಗ ಹಾಗೂ ಹಳೆ ವಿದ್ಯಾರ್ಥಿಗಳ – ಮಿಲನ ಅಲ್ಯೂಮ್ನಿ ಅಸೋಸಿಯೇಷನ್‍ನ ಮಾರ್ಗದರ್ಶನದಲ್ಲಿ ಈ ಪ್ರವಾಸ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಕ್ಯಾಂಪಸ್‍ನ  ನೋಟ, ಶಾಲೆಯ ವ್ಯವಸ್ಥೆಗಳು ಮತ್ತು ಸೌಲಭ್ಯಗಳನ್ನು ಪರಿಶೀಲಿಸಿದರು. ಅತ್ಯುತ್ತಮ ಶಿಕ್ಷಣದ ಕೇಂದ್ರ ಬಿಂದುವಾದ ಶಾಲೆಯ ಅನುಭವ ಪಡೆದು,…

Read More

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಟ್ರ್ಯಾಕ್ಟರ್ ಹಾಗೂ ಇಂದು ಬೈಕ್ ಗೆ ಕಿಡಿಗೇಡಿಗಳು ರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಸಗದ್ದೆ ಗ್ರಾಮದಲ್ಲಿ ನಡೆದಿದೆ. ಹೊಸಗದ್ದೆ ಗ್ರಾಮದ ಲತೇಶ್ ಎಂಬುವವರು ತಮ್ಮ ಮನೆಯ ಮುಂಭಾಗದಲ್ಲಿ ಎರಡು ಟ್ರ್ಯಾಕ್ಟರ್ ಹಾಗೂ ಒಂದು ಬೈಕ್ ನ್ನು ಬುಧವಾರ ರಾತ್ರಿ ನಿಲ್ಲಿಸಿದ್ದರು.ತಡರಾತ್ರಿ ಯಾರೋ ಕಿಡಿಗೇಡಿಗಳು…

Read More