3ನೇ ತರಗತಿ ವಿದ್ಯಾರ್ಥಿನಿಗೆ ಹೃದಯಾಘಾತ! ಏಕಾಏಕಿ ಕುಸಿದು ಬಿದ್ದು ಬಾಲಕಿ ಸಾವು
ಚಾಮರಾಜನಗರ | ಲೋಬಿಪಿ ಹಾಗೂ ಹೃದಯಾಘಾತದಿಂದ 3 ನೇ ತರಗತಿಯ 8 ವರ್ಷದ ಬಾಲಕಿ ತೇಜಸ್ಬಿನಿ ಅಂಬ ಪುಟ್ಟ ಬಾಲಕಿ ಅಸ್ವಸ್ಥಗೊಂಡು ಶಾಲಾ ಆವರಣದಲ್ಲಿ ಮೃತಳಾಗಿದ್ದಾಳೆ. ಚಾಮರಾಜನಗರ ತಾಲೂಕಿನ ಬದನಗುಪ್ಪೆ ಗ್ರಾಮದ ಲಿಂಗರಾಜು ಹಾಗೂ ಶೃತಿ ದಂಪತಿಯ ಪುಟ್ಟ ಮಗಳು8 ವರ್ಷದ ತೇಜಸ್ವಿನಿ ಶಾಲೆಯ ತರಗತಿಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಚಾಮರಾಜನಗರ ಪಟ್ಟಣದ ಸೆಂಟ್ ಪ್ರಾನ್ಸಿಸ್ ಶಾಲೆಯ ಮೂರನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ತೇಜಸ್ವಿನಿ ಎಂದಿನಂತೆ ಸೋಮವಾರ ಬೆಳಗ್ಗೆ ಶಾಲೆಗೆ ಆಗಮಿಸಿ, ಮದ್ಯಾಂತರದಲ್ಲಿ ಮೂತ್ರ ವಿಸರ್ಜನೆಗೆ ತೆರಳಿದಾಗ ಇದ್ದಕ್ಕಿದ್ದ ಹಾಗೆ ಗೋಡೆ ಹಿಡಿದುಕೊಂಡು ಕುಸಿತಗೊಂಡಳು.
ಕೂಡಲೇ ಶಾಲೆಯ ಸಿಬ್ಬಂದಿಗಳು ಕುಸಿತಗೊಂಡ ಬಾಲಕಿಯನ್ನು ಸ್ಥಳೀಯ ಜೆಎಸ್ಎಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಆದರೆ ವಿಧಿಯಾಟವೇ ಬೇರೆಯಾಗಿತ್ತು ಅಸ್ವಸ್ಥಗೊಂಡ ಶಾಲಾ ಬಾಲಕಿ ತೇಜಸ್ವಿನಿಯ ಪ್ರಾಣ ಪಕ್ಷಿ ಹಾರಿಹೋಗಿತ್ತು. ತೇಜಸ್ವಿನಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರ ಆಕ್ರಂಧನ ಮುಗಿಲು ಮುಟ್ಟುವಂತಿತ್ತು.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…