ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ!
ಪಟಾಕಿ ಸಿಡಿದ ಪರಿಣಾಮ 9 ವರ್ಷದ ಬಾಲಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಪಟಾಕಿ ಸಿಡಿದ ಪರಿಣಾಮ ಬಾಲಕನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. ಬಾಲಕನ ಮೈ, ಕೈಗಳಿಗೆ ಹಾಗೂ ಎರಡು ಕಣ್ಣುಗಳಿಗೆ ಗಾಯಗಳಗಿವೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಗಾಯಗೊಂಡಿರುವ 9 ವರ್ಷದ ಬಾಲಕ ತೇಜು ಎಂದು ತಿಳಿದುಬಂದಿದೆ. ಜನವರಿ 1ರಂದು ತೀರ್ಥಹಳ್ಳಿಯಲ್ಲಿ ತೆಪ್ಪೋತ್ಸವ ನಡೆದಿತ್ತು. ತೆಪೋತ್ಸವದ ಅಂಗವಾಗಿ ಸಿಡಿಮದ್ದು ಪ್ರದರ್ಶನ ಆಯೋಜನೆ ಮಾಡಲಾಗಿತ್ತು.ಈ ಸಂದರ್ಭದಲ್ಲಿ ಸಿಡಿಯದ ಪಟಾಕಿಗಳನ್ನು ಬಾಲಕರು ಒಟ್ಟುಗೂಡಿಸಿದ್ದಾರೆ.ಈ ವೇಳೆ ಏಕಾಏಕಿ ಪಟಾಕಿ ಸ್ಫೂಟಗೊಂಡು ತೇಜು ಗಂಭೀರವಾಗಿ ಗಾಯಗೊಂಡಿದ್ದಾನೆ.
ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಡಿಮದ್ದು ಪ್ರದರ್ಶನ ಮಾಡಲಾಗಿದ್ದು, ಸುರಕ್ಷತಾ ಕ್ರಮ ಕೈಗೊಳ್ಳದಿದ್ದರಿಂದ ದುರಂತಕ್ಕೆ ಕಾರಣ ಮತ್ತು ಸಿಡಿಮದ್ದು ಪ್ರದರ್ಶನ ಕಾರ್ಯಕ್ರಮ ಮುಗಿದು 4 ದಿನಗಳಾದರೂ ಪ್ರದೇಶ ಸ್ವಚ್ಛ ಮಾಡದಿರುವುದು ಘಟನೆಗೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್