ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ!

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ!

ಪಟಾಕಿ ಸಿಡಿದ ಪರಿಣಾಮ 9 ವರ್ಷದ ಬಾಲಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಪಟಾಕಿ ಸಿಡಿದ ಪರಿಣಾಮ ಬಾಲಕನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. ಬಾಲಕನ ಮೈ, ಕೈಗಳಿಗೆ ಹಾಗೂ ಎರಡು ಕಣ್ಣುಗಳಿಗೆ ಗಾಯಗಳಗಿವೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಗಾಯಗೊಂಡಿರುವ 9 ವರ್ಷದ ಬಾಲಕ ತೇಜು ಎಂದು ತಿಳಿದುಬಂದಿದೆ. ಜನವರಿ 1ರಂದು ತೀರ್ಥಹಳ್ಳಿಯಲ್ಲಿ ತೆಪ್ಪೋತ್ಸವ ನಡೆದಿತ್ತು. ತೆಪೋತ್ಸವದ ಅಂಗವಾಗಿ ಸಿಡಿಮದ್ದು ಪ್ರದರ್ಶನ ಆಯೋಜನೆ ಮಾಡಲಾಗಿತ್ತು.ಈ ಸಂದರ್ಭದಲ್ಲಿ ಸಿಡಿಯದ ಪಟಾಕಿಗಳನ್ನು ಬಾಲಕರು ಒಟ್ಟುಗೂಡಿಸಿದ್ದಾರೆ.ಈ ವೇಳೆ ಏಕಾಏಕಿ ಪಟಾಕಿ ಸ್ಫೂಟಗೊಂಡು ತೇಜು ಗಂಭೀರವಾಗಿ ಗಾಯಗೊಂಡಿದ್ದಾನೆ.

ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಡಿಮದ್ದು ಪ್ರದರ್ಶನ ಮಾಡಲಾಗಿದ್ದು, ಸುರಕ್ಷತಾ ಕ್ರಮ ಕೈಗೊಳ್ಳದಿದ್ದರಿಂದ ದುರಂತಕ್ಕೆ ಕಾರಣ ಮತ್ತು ಸಿಡಿಮದ್ದು ಪ್ರದರ್ಶನ ಕಾರ್ಯಕ್ರಮ ಮುಗಿದು 4 ದಿನಗಳಾದರೂ ಪ್ರದೇಶ ಸ್ವಚ್ಛ ಮಾಡದಿರುವುದು ಘಟನೆಗೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

2 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

9 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

10 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

14 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

18 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

21 hours ago