ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ ಗಂಭೀರ ಗಾಯ
ಸಿದ್ದಾಪುರ: ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ ದಲ್ಲಿ ಭಕ್ತರ ಮೇಲೆ ಕಾರು ಹರಿದ ಪರಿಣಾಮ ಓರ್ವ ಯುವತಿ ಸಾವಿಗೀಡಾಗಿ 08 ಭಕ್ತರಿಗೆ ದಲ್ಲಿ ಗಂಭೀರ ಗಾಯ ಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಸಿದ್ದಾ ಪುರದಲ್ಲಿ ನಿನ್ನೆ ಸಂಭವಿಸಿದೆ.
ಕಾರು ಚಾಲಕ ರೋಶನ್ ಫರ್ನಾಂಡಿಸ್ ನನ್ನು ಪೊಲೀಸರು ಬಂಧಿಸಿದ್ದಾರೆ.ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ಈತ ಜಾತ್ರೆಗೆ ನುಗ್ಗಿಸಿದ್ದಾನೆ.
ಪರಿಣಾಮ ಕಾರು ಭಕ್ತರ ಮೇಲೆ ಹರಿದಿದ್ದು, ಓರ್ವ ಯುವತಿ ಸಾವನ್ನಪ್ಪಿದ್ದಾಳೆ. ಇನ್ನು ಎಂಟು ಜನರಿಗೆ ಗಂಭೀರ ಗಾಯಗಳಾಗಿವೆ. ಸಿದ್ದಾಪುರದ ಅಯ್ಯಪ್ಪ ದೇಗುಲದ ಬಳಿ ಈ ದುರ್ಘಟನೆ ಸಂಭವಿಸಿದೆ. ಸಿದ್ದಾಪುರದ ಕವಲಕೊಪ್ಪ ನಿವಾಸಿ ದೀಪಾ ರಾಮಗೊಂಡ(21) ಮೃತ ಯುವತಿ.
ಕಲ್ಪನಾ, ಜಾನಕಿ, ಚೈತ್ರಾ, ಜ್ಯೋತಿ, ಮಾದೇವಿ, ಗೌರಿ, ರಾಮಪ್ಪ, ಗಜಾನನ್ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಪೈಕಿ ಕಲ್ಪನಾ ನಾಯ್ಕ್(5) ಸೇರಿ ಇಬ್ಬರನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಸಿದ್ದಾಪುರದ ರವೀಂದ್ರ ನಗರ ಸರ್ಕಲ್ ಬಳಿಯ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಜಾತ್ರೆ ನಡೆದಿದೆ. ಈ ಜಾತ್ರೆಯಲ್ಲಿ ನೂರಾರು ಜನರು ಸೇರಿದ್ದರು.
ಈ ವೇಳೆ ರೋಶನ್ ಫೆರ್ನಾಂಡಿಸ್ ಫುಲ್ ಟೈಟ್ ಆಗಿ ತನ್ನ ಇಕೋ ಸ್ಪೋರ್ಟ್ಸ್ ಕಾರನ್ನು ಯರ್ರಾಬಿರ್ರಿ ಚಲಾಯಿಸಿಕೊಂಡು ಬಂದಿದ್ದು, ಏಕಾಏಕಿ ಕಾರು ದೇಗುಲದ ಮಂಟಪಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಜನರ ಮೇಲೆ ಕಾರು ಹತ್ತಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಭಕ್ತಾದಿಗಳು ಕಾರಿನ ಮೇಲೆ ಕಲ್ಲು ಎಸೆದು ಅಡ್ಡಹಾಕಿದ್ದಾರೆ.
ಬಳಿಕ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…