10 ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿರುವ ಮುಸ್ಲಿಂ ವ್ಯಕ್ತಿ
ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಗೌರಂಪೇಟೆ ನಿವಾಸಿ ಬಾಬು ಎಂಬ ಮುಸ್ಲಿಂ ಸಮುದಾಯದ ವ್ಯಕ್ತಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಯ ದರ್ಶನ ಪಡೆದಿದ್ದಾರೆ. 10 ವರ್ಷಗಳಿಂದಲೂ ಇವರು ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿದ್ದಾರೆ.
ಈ ವರ್ಷ ಡಿ.28ರಂದು ಶಬರಿಮಲೆ ಹತ್ತಿರದ ಪಂಪ ಸರೋವರದ ಬಳಿ ಸಂಪ್ರದಾಯದಂತೆ ಮಾಲೆ ಧರಿಸಿ, ಇರುಮುಡಿ ಕಟ್ಟಿಕೊಂಡು ಡಿ.31ರಂದು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ.
2014ರಿಂದ ಇಲ್ಲಿಯವರೆಗೆ ಪ್ರತಿವರ್ಷ ತಮ್ಮ ವಾರ್ಡ್ನ ಗೆಳೆಯರ ಬಳಗದವರೊಂದಿಗೆ ಬಾಬು ಅವರು ಮಾಲೆ ಧರಿಸಿಕೊಂಡು ಬರುತ್ತಿದ್ದಾರೆ., ”ನಮ್ಮ ಧರ್ಮದ ಆಚರಣೆಗಳನ್ನು ಮಾಡುವುದರ ಜೊತೆಗೆ 2014ರಿಂದ ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸುತ್ತಾ ಇರುಮುಡಿಯೊಂದಿಗೆ ಸ್ವಾಮಿಯ ದರ್ಶನ ಪಡೆಯುತ್ತಿದ್ದೇನೆ. ಇದರಿಂದ ನನಗೆ ಸುಖ ಶಾಂತಿ, ನೆಮ್ಮದಿ ಹಾಗೂ ಒಳ್ಳೆಯದಾಗಿದೆ” ಎಂದರು.
‘ಧರ್ಮದ ಮೇಲಿನ ಅತಿಯಾದ ಪ್ರೀತಿಯಿಂದ ಭಾವೈಕ್ಯತೆ ದೂರ’:
”ಪ್ರತೀ ಗ್ರಾಮದಲ್ಲಿ ಭಾವೈಕ್ಯತೆ ಇರಬೇಕು. ಗತಕಾಲದಿಂದಲೂ ನಾವು ಭಾವೈಕ್ಯತೆಯಿಂದ ಬದುಕುತ್ತಿದ್ದೇವೆ. ಆದರೆ, ಇತ್ತೀಚೆಗೆ ಮನುಷ್ಯ ತನ್ನ ಧರ್ಮವನ್ನು ಅತಿಯಾಗಿ ಪ್ರೀತಿಸುತ್ತಿರುವುದರಿಂದ ಭಾವೈಕ್ಯತೆ ದೂರವಾಗುತ್ತಿದೆ. ಇದು ಸಮಾಜಕ್ಕೆ ಮಾರಕ ಎನ್ನುವುದು ನನ್ನ ಅಭಿಪ್ರಾಯ. ಅತಿಹೆಚ್ಚು ಯಾರು ತನ್ನ ಧರ್ಮವನ್ನು ಪ್ರೀತಿಸುತಾರೋ ಅವರು ಮೊದಲನೇ ಕೋಮುವಾದಿ ಎಂದು ಮಹಮ್ಮದ್ ಪೈಗಂಬರ್ ಕೂಡಾ ಹೇಳಿದ್ದಾರೆ. ನಾವು ಎಲ್ಲ ಧರ್ಮಗಳ ಬಗ್ಗೆ ಗೌರವ ಹೊಂದಿದರೆ ಮಾತ್ರ ಭಾವೈಕ್ಯತೆ ಉಳಿಯುತ್ತದೆ” ಎಂದು ಬಾಬು ಹೇಳಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್