ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು
ಬಿರಿಯಾನಿ ತಿನ್ನಲು ಹೊಟೇಲ್ ಗೆ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಮಚ್ಚು ಮತ್ತು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿರುವ ಘಟನೆ ಹೊಳೆಹೊನ್ನೂರಿನ ಕನಸಿನಕಟ್ಟೆ ರಸ್ತೆಯ ಬಾರ್ ನಲ್ಲಿ ನಡೆದಿದೆ.
ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿ, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೊಳೆಹೊನ್ನೂರಿನ ಉಪ್ಪಾರರ ಬೀದಿಯ ರವಿ ಹಲ್ಲೆಗೊಳಗಾದವರು. ಕನಸಿನಕಟ್ಟೆ ರಸ್ತೆಯಲ್ಲಿರುವ ಬಾರ್ನಲ್ಲಿ ಘಟನೆ ಸಂಭವಿಸಿದೆ.
ರವಿ ತಮ್ಮ ಚಿಕ್ಕಮ್ಮನ ಮಗನೊಂದಿಗೆ ಬಾರ್ನಲ್ಲಿ ಬಿರಿಯಾನಿ ತಿನ್ನಲು ತೆರಳಿದ್ದರು. ಈ ಸಂದರ್ಭ ಬಾರ್ನಲ್ಲಿದ್ದ ಇಬ್ಬರು ಯುವಕರು ರವಿ ಮೇಲೆ ದಾಳಿ ನಡೆಸಿದ್ದಾರೆ.
ಮಚ್ಚು ಮತ್ತು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.