ಆನೆ ದಾಳಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ,ಸಾಂತ್ವಾನ

ರಿಪ್ಪನ್‌ಪೇಟೆ : ಹಲವಾರು ದಿನಗಳ ಹಿಂದೆ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಕಮದೂರು ಬಳಿ ಸ.ನಂ. 115ರ ಜಮೀನಿನಲ್ಲಿ ಕಾಡಾನೆಗಳು ದಾಳಿ ಮಾಡಿ ಬಾಳೆ ಮತ್ತು ಅಡಿಕೆ ಬೆಳೆ ಧ್ವಂಸಗೊಳಿಸಿದ್ದು ಸ್ಥಳಕ್ಕೆ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿ ಜಮೀನಿನ ಮಾಲೀಕರಿಗೆ ವೈಯಕ್ತಿಕ ನೆರವು ನೀಡುವ ಮೂಲಕ ಸಾಂತ್ವನ ಹೇಳಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ಒಂದು ತಿಂಗಳುಗಳಿಂದ ಈ ಭಾಗದಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು ಒಂದು ಕಡೆಯಿಂದ ಮೊತ್ತೊಂದು ಭಾಗಕ್ಕೆ ಅನೆಗಳು ಸಂಚರಿಸುತ್ತಾ ಕರೆಯಲ್ಲಿ ನೀರು ಕುಡಿಯಲು ಬರುವುದರೊಂದಿಗೆ ರೈತರ ಬೆಳೆದ ಬಾಳೆ ಅಡಿಕೆ ತೋಟಗಳಿಗೆ ನುಗ್ಗಿ ಬೆಳೆ ಸಾಶಮಾಡುತ್ತಿದ್ದು ಆ ಕಾರಣದಿಂದಾಗಿ ತಕ್ಷಣ ಅರಣ್ಯ ಇಲಾಖೆಯವರು ಆನೆ ಪರಿಣಿತರನ್ನು ಕರೆಯಿಸಿ ಆನೆಗಳನ್ನು ಸ್ಥಳಾಂತರ ಮಾಡುವಂತೆ ಕ್ರಮ ವಹಿಸುವಂತೆ ಅರಸಾಳು ವಲಯ ಅರಣ್ಯಾಧಿಕಾರಿ ಶರಣಪ್ಪ ಮತ್ತು ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ನಾನು ಅರಣ್ಯ ಸಚಿವ ಈಶ್ವರ ಖಂಡ್ರೆಯವರೊಂದಿಗೆ ಈಗಾಗಲೇ ಚರ್ಚಿಸಲಾಗಿದ್ದು ಸಂಬಂಧಿಸಿದ ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೂ ತಿಳಿಸಿ ಕೂಡಲೇ ಈ ಭಾಗದಲ್ಲಿ ಆನೆಗಳ ಉಪಟಳದಿಂದಾಗಿ ರೈತರು ಹೈರಾಣಾಗಿ ಹೋಗಿದ್ದಾರೆ ಅವರಿಗೆ ಸರ್ಕಾರದಿಂದ ಸಮರ್ಪಕ ಪರಿಹಾರ ಕೊಡಿಸುವುದರ ಬಗ್ಗೆ ಸಹ ಗಮನಸೆಳೆಯಲಾಗಿದ್ದು ಪ್ರತಿ ಬಾಳೆ ಗಿಡಕ್ಕೆ 3.20 ರೂ. ನಂತೆ ಬೆಳೆ ಪರಿಹಾರ ಕೊಡಲು ಇಲಾಖೆಯವರು ಸ್ಥಳ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಹಲವು ರೈತರು ನಮಗೆ ರಾತ್ರಿ ವೇಳೆ 3 ಪೇಸ್ ವಿದ್ಯುತ್ ನೀಡಲಾಗುತ್ತಿದ್ದು ಆನೆ ಹಾವಳಿಯಿಂದಾಗಿ ರಾತ್ರಿ ವೇಳೆ ಜಮೀನಿಗೆ ಹೋಗುವವುದು ಕಷ್ಟ ಆದ್ದರಿಂದ ಹಗಲು ವೇಳೆಯಲ್ಲಿ 3 ಪೇಸ್ ವಿದ್ಯುತ್ ಸೌಲಭ್ಯ ಕೊಡಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು. ಆಗ ಶಾಸಕರು ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಇಂದಿನಿಂದಲೇ ಈ ರೀತಿ ಸೌಲಭ್ಯ ಕಲ್ಪಿಸುವಂತೆ ತಿಳಿಸಿದರು.

ಇದೇ ವೇಳೆ ಪತ್ರಕರ್ತರು ಸಾಗರ-ತೀರ್ಥಹಳ್ಳಿ-ರಿಪ್ಪನ್‌ಪೇಟೆ ರಾಜ್ಯ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಶಾಸಕರಲ್ಲಿ ಪ್ರಸ್ತಾಪಿಸಿದಾಗ ತಕ್ಷಣ ಗಮನಹರಿಸುವ ಭರವಸೆ ವ್ಯಕ್ತಪಡಿಸಿ, ಈಗಾಗಲೇ ಚಿಕ್ಕಮಗಳೂರಿನಿಂದ ತೀರ್ಥಹಳ್ಳಿ ಮಾರ್ಗವಾಗಿ ಹುಂಚದವರೆ ಕೆ.ಎಸ್.ಆರ್.ಟಿ. ಬಸ್ ಬಂದು ಹೋಗುತ್ತಿದ್ದು ಅದನ್ನು ರಿಪ್ಪನ್‌ಪೇಟೆವರೆಗೆ ವಿಸ್ತರಿಸಿ ಶಕ್ತಿಯೋಜನೆಯ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೆಂಚನಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಬೇದುಲ್ಲಾ ಷರೀಪ್, ಗ್ರಾಮ ಪಂಚಾಯ್ತಿ ಸದಸ್ಯರಾದ ಮಹಮ್ಮದ್ ಷರೀಫ್,ಕೃಷ್ಣೋಜಿ ರಾವ್ , ರಮ್ಯಾ , ಕೆಂಚನಾಲ ಘಟಕದ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಮಾದಾಪುರ, ಡಿ.ಈ.ಮಧುಸೂದನ್, ಗಣಪತಿ, ಎನ್. ಚಂದ್ರೇಶ್, ದಿವಾಕರ, ರವೀಂದ್ರ ಕೆರೆಹಳ್ಳಿ, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ ಹಾರೋಹಿತ್ತಲು, ಪ್ರಕಾಶಗೌಡ ಆಲವಳ್ಳಿ, ರಾಜಶೇಖರಗೌಡ, ಕಮದೂರು, ಸಣ್ಣಕ್ಕಿ ಮಂಜು, ಶಿವಪ್ಪ ವಡಾಹೊಸಳ್ಳಿ, ಅರಸಾಳು ವಲಯ ಅರಣ್ಯಾಧಿಕಾರಿ ಶರಣಪ್ಪ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

5 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

7 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

10 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

10 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

11 hours ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

11 hours ago