SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು
ಶಿವಮೊಗ : ಸಾಗರ ರಸ್ತೆಯ ಎಪಿಎಂಸಿ ಬಳಿ ಹೊರಭಾಗದಲ್ಲಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು ಈ ಘಟನೆಯಲ್ಲಿ ಪಾದಚಾರಿಯೊಬ್ಬರು ಸಾವಿಗೀಡಾಗಿದ್ದಾರೆ.
ಸಾಗರದ ರಸ್ತೆಯಲ್ಲಿ ಬರುವ ಸಾನ್ವಿ ಹೋಟೆಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ವಾಹನವೊಂದು ಅಪಘಾತ ಪಡಿಸಿ ನಿಲ್ಲಿಸದೆ ಮುಂದೆ ಸಾಗಿದೆ. ಅಪಘಾತದಲ್ಲಿ ಗಾಯಗೊಂಡವನನ್ನು ಸುಧಾಕರ (55) ಎಂದು ಗುರುತಿಸಲಾಗಿದೆ.
ಸುಧಾಕರ್ ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ನಿವಾಸಿಯಾಗಿದ್ದು, ಶಿವಮೊಗ್ಗದಲ್ಲಿ ಪರಿಚಯಸ್ಥರು ಮನೆಕಟ್ಟಿಸುತ್ತಿದ್ದರಿಂದ ವಾಚರ್ ಕೆಲಸಕ್ಕೆ ಸುಧಾಕರ್ ನೇಮಕಗೊಂಡಿದ್ದರು.
ಗಾಜನೂರಿನಲ್ಲಿರುವ ತಂಗಿಯ ಮನೆಗೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋಗಿದ್ದರು. ತಂಗಿ ಮನೆಗೆ ಹೊರಟಿದ್ದ ಸುಧಾಕರ್ ಸಾಗರ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವಾಹನವೊಂದು ಅಪಘಾತಪಡಿಸಿದೆ.
ಸುಧಾಕರ್ ಅವರನ್ನು ತಕ್ಷಣ ಮೆಗ್ಗಾನ್ ಗೆ ದಾಖಲಿಸಲಾಗಿತ್ತು. ಡಿ.30 ರಂದು ಅವರು ಅಸುನೀಗಿದ್ದಾರೆ. ಸುಧಾಕರ್ ಅವರ ಪತ್ನಿ 5 ವರ್ಷದ ಹಿಂದೆ ತೀರಿಕೊಂಡಿದ್ದರೆ. ಇವರಿಗೆ ಇಬ್ಬರು ಮಕ್ಕಳಿದ್ದು,3 ವರ್ಷದ ಹಿಂದೆ ಹಿರಿಯ ಪುತ್ರ ಚಂದು ಹೃದಯಾಘಾತದಲ್ಲಿ ಸಾವನ್ಬಪ್ಪಿದ್ದರು.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…