ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಬದಲಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ
ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಎರಡು ಮೂರು ಸ್ಥಾನ ಬದಲಾವಣೆಗಳು ಆಗುವ ನಿರೀಕ್ಷೆಯಿದೆ ಎಂದು ಶಾಸಕ ಗೋಪಾಲ ಕೃಷ್ಣ ಬೇಳೂರು ಹೇಳಿದರು.
ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಿಗಂದೂರು ದೇವಿ ದರ್ಶನ ಮಾಡಿಕೊಂಡು ಬಂದ ಶಾಸಕರು ಮಾಧ್ಯಮಗಳ ಜೊತೆ ಮಾತನಾಡಿ, ಸಂಕ್ರಾಂತಿ ಹಬ್ಬದ ನಂತರ ಯಾವುದೇ ಬದಲಾವಣೆಗಳು ಇಲ್ಲ. ಬದಲಿಗೆ ನಾಗೇಂದ್ರ ಅವರ ಸ್ಥಾನ ಸೇರಿದಂತೆ ಎರಡು ಮೂರು ಸಚಿವರ ಸ್ಥಾನ ಬದಲಾಗುವ ನಿರೀಕ್ಷೆ ಇದೆ ಎಂದರು.
ನಮ್ಮಲ್ಲಿ ಹೆಚ್ಚಿನ ಗೊಂದಲದ ಕಾರಣ ಇಷ್ಟೆ 140 ಸ್ಥಾನದ ಹತ್ತಿರ ಹತ್ತಿರ ಸಚಿವರು ಇರುವುದರಿಂದ ನಮಲ್ಲಿ ಗೊಂದಲ ಇರುವುದು ಕಂಡು ಬರುತ್ತದೆ. ಆದರೆ ನಮಗಿಂತ ಬಿಜೆಪಿಯಲ್ಲಿ ಹೆಚ್ಚಿನ ಗೊಂದಲವಿದೆ. ವಿಜೇಂದ್ರ ಒಂದು ಹೇಳಿದರೆ ಯತ್ನಾಳ್ ಮತ್ತೊಂದು ಹೇಳ್ತಾರೆ. ಡಿನ್ನರ್ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಹೈಕಮಾಂಡ್ ಸುರ್ಜೇವಾಲರವರು ಬ್ರೇಕ್ ಹಾಕಿದ್ದಾರೆ ಎಂದರು.
ನಮ್ಮಲ್ಲಿ ಎಲ್ಲವೂ ಹೈಕಮಾಂಡ್ ಹೇಳಿದಂತೆ ನಡೆಯುತ್ತದೆ. ಅಸಮಾಧಾನದ ಮಾತುಗಳೆ ಇಲ್ಲ. ನಾನು ಸಹ 20 ತಿಂಗಳಿಗೊಮ್ಮೆ ಸಚಿವ ಸ್ಥಾನ ಬದಲಾಗಬೇಕು ಎಂದಿದ್ದೆ. ಅದು ನನ್ನ ವೈಯುಕ್ತಿಕ. ಸಿಎಂ ಸಹ ತ್ಯಾಗದ ಮಾತನಾಡಿದ್ದಾರೆ. ಹೈಕಮಾಂಡ್ ಸೂಚನೆಯನ್ನ ಎಲ್ಲರೂ ಪಾಲಿಸಿ ನಡೆದುಕೊಂಡು ಹೋಗುವಾಗ ಗೊಂದಲದ ಮಾತುಗಳು ಹೇಳುವುದು ಸರಿಯಲ್ಲ ಎಂದರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…