ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಬದಲಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ
ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಎರಡು ಮೂರು ಸ್ಥಾನ ಬದಲಾವಣೆಗಳು ಆಗುವ ನಿರೀಕ್ಷೆಯಿದೆ ಎಂದು ಶಾಸಕ ಗೋಪಾಲ ಕೃಷ್ಣ ಬೇಳೂರು ಹೇಳಿದರು.
ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಿಗಂದೂರು ದೇವಿ ದರ್ಶನ ಮಾಡಿಕೊಂಡು ಬಂದ ಶಾಸಕರು ಮಾಧ್ಯಮಗಳ ಜೊತೆ ಮಾತನಾಡಿ, ಸಂಕ್ರಾಂತಿ ಹಬ್ಬದ ನಂತರ ಯಾವುದೇ ಬದಲಾವಣೆಗಳು ಇಲ್ಲ. ಬದಲಿಗೆ ನಾಗೇಂದ್ರ ಅವರ ಸ್ಥಾನ ಸೇರಿದಂತೆ ಎರಡು ಮೂರು ಸಚಿವರ ಸ್ಥಾನ ಬದಲಾಗುವ ನಿರೀಕ್ಷೆ ಇದೆ ಎಂದರು.
ನಮ್ಮಲ್ಲಿ ಹೆಚ್ಚಿನ ಗೊಂದಲದ ಕಾರಣ ಇಷ್ಟೆ 140 ಸ್ಥಾನದ ಹತ್ತಿರ ಹತ್ತಿರ ಸಚಿವರು ಇರುವುದರಿಂದ ನಮಲ್ಲಿ ಗೊಂದಲ ಇರುವುದು ಕಂಡು ಬರುತ್ತದೆ. ಆದರೆ ನಮಗಿಂತ ಬಿಜೆಪಿಯಲ್ಲಿ ಹೆಚ್ಚಿನ ಗೊಂದಲವಿದೆ. ವಿಜೇಂದ್ರ ಒಂದು ಹೇಳಿದರೆ ಯತ್ನಾಳ್ ಮತ್ತೊಂದು ಹೇಳ್ತಾರೆ. ಡಿನ್ನರ್ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಹೈಕಮಾಂಡ್ ಸುರ್ಜೇವಾಲರವರು ಬ್ರೇಕ್ ಹಾಕಿದ್ದಾರೆ ಎಂದರು.
ನಮ್ಮಲ್ಲಿ ಎಲ್ಲವೂ ಹೈಕಮಾಂಡ್ ಹೇಳಿದಂತೆ ನಡೆಯುತ್ತದೆ. ಅಸಮಾಧಾನದ ಮಾತುಗಳೆ ಇಲ್ಲ. ನಾನು ಸಹ 20 ತಿಂಗಳಿಗೊಮ್ಮೆ ಸಚಿವ ಸ್ಥಾನ ಬದಲಾಗಬೇಕು ಎಂದಿದ್ದೆ. ಅದು ನನ್ನ ವೈಯುಕ್ತಿಕ. ಸಿಎಂ ಸಹ ತ್ಯಾಗದ ಮಾತನಾಡಿದ್ದಾರೆ. ಹೈಕಮಾಂಡ್ ಸೂಚನೆಯನ್ನ ಎಲ್ಲರೂ ಪಾಲಿಸಿ ನಡೆದುಕೊಂಡು ಹೋಗುವಾಗ ಗೊಂದಲದ ಮಾತುಗಳು ಹೇಳುವುದು ಸರಿಯಲ್ಲ ಎಂದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…