2025ನೇ ಸಾಲಿಗೆ ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ: ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ
2024-25ನೇ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯುವ ಸಂಬಂಧ, ಇದೀಗ ಪ್ರವೇಶಾತಿ ಅರ್ಹತಾ ಪರೀಕ್ಷೆಗೆ ಅಧಿಸೂಚನೆ ಪ್ರಕಟವಾಗಿದೆ. ಪ್ರಸ್ತುತ 5ನೇ ತರಗತಿ ಓದುತ್ತಿರುವವರು, ಮುಂದಿನ ವರ್ಷದಲ್ಲಿ ಈ ಕೆಳಗಿನ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಬಯಸಿದಲ್ಲಿ ಅರ್ಜಿ ಸಲ್ಲಿಸಿ. ಎಂಟ್ರ್ಯಾನ್ಸ್ ಪರೀಕ್ಷೆ ಬರೆಯುವ ಮೂಲಕ ಅರ್ಹತೆ ಪಡೆದು, ಈ ಶಾಲೆಗಳಲ್ಲಿ ಅಡ್ಮಿಷನ್ ಪಡೆಯಲು ಅವಕಾಶ ಗಿಟ್ಟಿಸಿಕೊಳ್ಳಿ.
ಯಾವೆಲ್ಲ ಶಾಲೆಗಳಲ್ಲಿ ಪ್ರವೇಶಕ್ಕಾಗಿ ಎಂಟ್ರಾನ್ಸ್ ಎಕ್ಸಾಮ್ ಎಂದು ಪಟ್ಟಿ ಕೆಳಗಿನಂತಿದೆ.
1.ಮೊರಾರ್ಜಿ ದೇಸಾಯಿ ವಸತಿ ಶಾಲೆ
2.ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ
3.ಏಕಲವ್ಯ ಮಾದರಿ ವಸತಿ ಶಾಲೆ
4.ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ
5.ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ
6.ಡಾ ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ
7.ಮಾಸ್ತಿ ವೆಂಕಟೇಶ ಅಯ್ಯಂಗಾರ್ ವಸತಿ ಶಾಲೆ
8.ಸಂಗೊಳ್ಳಿ ರಾಯಣ್ಣ ವಸತಿ ಶಾಲೆ
9.ಕವಿರನ್ನ ವಸತಿ ಶಾಲೆ
10.ಗಾಂಧಿತತ್ವ ವಸತಿ ಶಾಲೆ
11.ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳು
ಈ ಮೇಲಿನ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿದೆ.
ಪರೀಕ್ಷೆ ತೆಗೆದುಕೊಳ್ಳಲು ಅರ್ಹತೆಗಳು :
ಪ್ರಸಕ್ತ ಸಾಲಿನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅಥವಾ ಅವರ ಪೋಷಕರು ತಮ್ಮ ಮಕ್ಕಳ ಪರವಾಗಿ ಅರ್ಜಿ ಸಲ್ಲಿಸಬಹುದು.
1. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.2,50,000 ಮೀರಿರಬಾರದು.
2. ಹಿಂದುಳಿದ ವರ್ಗದ ಪ್ರವರ್ಗ-1 ರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.2,50,000 ಮೀರಿರಬಾರದು.
3. ಹಿಂದುಳಿದ ವರ್ಗದ 2A, 2B, 3A, 3B ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.1,00,000 ಮೀರಿರಬಾರದು
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 11-01-2025 ರ ಬೆಳಿಗ್ಗೆ 11 ಗಂಟೆಯಿಂದ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 25-01-2025 ರ ರಾತ್ರಿ 11-59 ಗಂಟೆವರೆಗೆ.
ಪ್ರವೇಶ ಪರೀಕ್ಷೆಗೆ ಅಡ್ಮಿಟ್ ಕಾರ್ಡ್ ಬಿಡುಗಡೆ ಮಾಡುವ ದಿನಾಂಕ : 06-02-2025
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರವೇಶ ಪರೀಕ್ಷೆ : 15-02-2025
ವಿದ್ಯಾರ್ಥಿಗಳು / ಪೋಷಕರು ಅರ್ಜಿಯನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ / ಕಾಲೇಜುಗಳ ಮೂಲಕ ಆನ್ಲೈನ್ ನಲ್ಲಿ ಸಲ್ಲಿಸಲು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಸೂಚನೆಗಳು :
1. ವಿದ್ಯಾರ್ಥಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ, ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿತ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರನ್ನು ಸಂಪರ್ಕಿಸಿ ಅರ್ಜಿಗಳನ್ನು ಸಲ್ಲಿಸಬೇಕು.
2. ಅರ್ಜಿಗಳನ್ನು ಸಲ್ಲಿಸುವಾಗ ಯಾವ ಶಾಲೆಗಳಲ್ಲಿ ದಾಖಲಾತಿ ಬಯಸುತ್ತಾರೋ, ಅಂತಹ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು.
3. ಆದ್ಯತಾ ಕ್ರಮದಲ್ಲಿ ದಾಖಲಿಸುವ ಶಾಲೆಗಳನ್ನು ಮಾತ್ರ ಹಂಚಿಕೆಗೆ ಪರಿಗಣಿಸಲಾಗುವುದು.
4. ಅಭ್ಯರ್ಥಿಗಳು ತಮ್ಮ ಸೀಟು ಹಂಚಿಕೆ ಅವಕಾಶ ಹೆಚ್ಚಿಸಿಕೊಳ್ಳಲು ತಮ್ಮ ಜಿಲ್ಲೆಯಲ್ಲಿರುವ KREIS ನ ಎಲ್ಲಾ ವಸತಿ ಶಾಲೆಗಳಲ್ಲಿ ಆದ್ಯತಾ ಕ್ರಮದಲ್ಲಿ ನಮೂದಿಸತಕ್ಕದು.
5. ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಮೆರಿಟ್, ಮೀಸಲಾತಿ ಹಾಗೂ ಅಭ್ಯರ್ಥಿಗಳು ಪ್ರವೇಶಾತಿಗಾಗಿ ನಮೂದಿಸಿರುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ ಕಂಪ್ಯೂಟರ್ ಮೂಲಕ ಸ್ವಯಂಕೃತ ಆಯ್ಕೆ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ, ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರದ ಸಂಸ್ಥಾಪಕರಾದ ಪ್ರಕಾಶ್ ಜೋಯ್ಸ್ – 9980463013 ರನ್ನು ಸಂಪರ್ಕಿಸಿ. ಹೊಸನಗರ ತಾಲ್ಲೂಕಿನ ಹುಂಚದಲ್ಲಿ ಉಚಿತ ತರಬೇತಿ ಕಳೆದ ನಾಲ್ಕು ವರ್ಷದಿಂದ ನೀಡುತ್ತಿದ್ದಾರೆ.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…