2025ನೇ ಸಾಲಿಗೆ ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ: ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ
2024-25ನೇ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯುವ ಸಂಬಂಧ, ಇದೀಗ ಪ್ರವೇಶಾತಿ ಅರ್ಹತಾ ಪರೀಕ್ಷೆಗೆ ಅಧಿಸೂಚನೆ ಪ್ರಕಟವಾಗಿದೆ. ಪ್ರಸ್ತುತ 5ನೇ ತರಗತಿ ಓದುತ್ತಿರುವವರು, ಮುಂದಿನ ವರ್ಷದಲ್ಲಿ ಈ ಕೆಳಗಿನ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಬಯಸಿದಲ್ಲಿ ಅರ್ಜಿ ಸಲ್ಲಿಸಿ. ಎಂಟ್ರ್ಯಾನ್ಸ್ ಪರೀಕ್ಷೆ ಬರೆಯುವ ಮೂಲಕ ಅರ್ಹತೆ ಪಡೆದು, ಈ ಶಾಲೆಗಳಲ್ಲಿ ಅಡ್ಮಿಷನ್ ಪಡೆಯಲು ಅವಕಾಶ ಗಿಟ್ಟಿಸಿಕೊಳ್ಳಿ.
ಯಾವೆಲ್ಲ ಶಾಲೆಗಳಲ್ಲಿ ಪ್ರವೇಶಕ್ಕಾಗಿ ಎಂಟ್ರಾನ್ಸ್ ಎಕ್ಸಾಮ್ ಎಂದು ಪಟ್ಟಿ ಕೆಳಗಿನಂತಿದೆ.
1.ಮೊರಾರ್ಜಿ ದೇಸಾಯಿ ವಸತಿ ಶಾಲೆ
2.ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ
3.ಏಕಲವ್ಯ ಮಾದರಿ ವಸತಿ ಶಾಲೆ
4.ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ
5.ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ
6.ಡಾ ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ
7.ಮಾಸ್ತಿ ವೆಂಕಟೇಶ ಅಯ್ಯಂಗಾರ್ ವಸತಿ ಶಾಲೆ
8.ಸಂಗೊಳ್ಳಿ ರಾಯಣ್ಣ ವಸತಿ ಶಾಲೆ
9.ಕವಿರನ್ನ ವಸತಿ ಶಾಲೆ
10.ಗಾಂಧಿತತ್ವ ವಸತಿ ಶಾಲೆ
11.ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳು
ಈ ಮೇಲಿನ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿದೆ.
ಪರೀಕ್ಷೆ ತೆಗೆದುಕೊಳ್ಳಲು ಅರ್ಹತೆಗಳು :
ಪ್ರಸಕ್ತ ಸಾಲಿನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅಥವಾ ಅವರ ಪೋಷಕರು ತಮ್ಮ ಮಕ್ಕಳ ಪರವಾಗಿ ಅರ್ಜಿ ಸಲ್ಲಿಸಬಹುದು.
1. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.2,50,000 ಮೀರಿರಬಾರದು.
2. ಹಿಂದುಳಿದ ವರ್ಗದ ಪ್ರವರ್ಗ-1 ರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.2,50,000 ಮೀರಿರಬಾರದು.
3. ಹಿಂದುಳಿದ ವರ್ಗದ 2A, 2B, 3A, 3B ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.1,00,000 ಮೀರಿರಬಾರದು
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 11-01-2025 ರ ಬೆಳಿಗ್ಗೆ 11 ಗಂಟೆಯಿಂದ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 25-01-2025 ರ ರಾತ್ರಿ 11-59 ಗಂಟೆವರೆಗೆ.
ಪ್ರವೇಶ ಪರೀಕ್ಷೆಗೆ ಅಡ್ಮಿಟ್ ಕಾರ್ಡ್ ಬಿಡುಗಡೆ ಮಾಡುವ ದಿನಾಂಕ : 06-02-2025
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರವೇಶ ಪರೀಕ್ಷೆ : 15-02-2025
ವಿದ್ಯಾರ್ಥಿಗಳು / ಪೋಷಕರು ಅರ್ಜಿಯನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ / ಕಾಲೇಜುಗಳ ಮೂಲಕ ಆನ್ಲೈನ್ ನಲ್ಲಿ ಸಲ್ಲಿಸಲು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಸೂಚನೆಗಳು :
1. ವಿದ್ಯಾರ್ಥಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ, ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿತ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರನ್ನು ಸಂಪರ್ಕಿಸಿ ಅರ್ಜಿಗಳನ್ನು ಸಲ್ಲಿಸಬೇಕು.
2. ಅರ್ಜಿಗಳನ್ನು ಸಲ್ಲಿಸುವಾಗ ಯಾವ ಶಾಲೆಗಳಲ್ಲಿ ದಾಖಲಾತಿ ಬಯಸುತ್ತಾರೋ, ಅಂತಹ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು.
3. ಆದ್ಯತಾ ಕ್ರಮದಲ್ಲಿ ದಾಖಲಿಸುವ ಶಾಲೆಗಳನ್ನು ಮಾತ್ರ ಹಂಚಿಕೆಗೆ ಪರಿಗಣಿಸಲಾಗುವುದು.
4. ಅಭ್ಯರ್ಥಿಗಳು ತಮ್ಮ ಸೀಟು ಹಂಚಿಕೆ ಅವಕಾಶ ಹೆಚ್ಚಿಸಿಕೊಳ್ಳಲು ತಮ್ಮ ಜಿಲ್ಲೆಯಲ್ಲಿರುವ KREIS ನ ಎಲ್ಲಾ ವಸತಿ ಶಾಲೆಗಳಲ್ಲಿ ಆದ್ಯತಾ ಕ್ರಮದಲ್ಲಿ ನಮೂದಿಸತಕ್ಕದು.
5. ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಮೆರಿಟ್, ಮೀಸಲಾತಿ ಹಾಗೂ ಅಭ್ಯರ್ಥಿಗಳು ಪ್ರವೇಶಾತಿಗಾಗಿ ನಮೂದಿಸಿರುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ ಕಂಪ್ಯೂಟರ್ ಮೂಲಕ ಸ್ವಯಂಕೃತ ಆಯ್ಕೆ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ, ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರದ ಸಂಸ್ಥಾಪಕರಾದ ಪ್ರಕಾಶ್ ಜೋಯ್ಸ್ – 9980463013 ರನ್ನು ಸಂಪರ್ಕಿಸಿ. ಹೊಸನಗರ ತಾಲ್ಲೂಕಿನ ಹುಂಚದಲ್ಲಿ ಉಚಿತ ತರಬೇತಿ ಕಳೆದ ನಾಲ್ಕು ವರ್ಷದಿಂದ ನೀಡುತ್ತಿದ್ದಾರೆ.
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…