ಅಪ್ಪನ ಸಾವಿನ ಸುದ್ದಿ ಮುಚ್ಚಿಟ್ಟು ಮಗಳ ಮದುವೆ -ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಹೃದಯವಿದ್ರಾವಕ ಘಟನೆ
ಮಗಳ ಮದುವೆಯ ಸಂಭ್ರಮದಲ್ಲಿದ್ದ ತಂದೆಯೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಮದುವೆಯ ಬಳಿಕ ತಂದೆ ಸಾವಿನ ಸುದ್ದಿ ಕುಟುಂಬಸ್ಥರಿಗೆ ತಿಳಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಆಪ್ತಮಿತ್ರನಿಗೆ ಮಗಳ ಮದುವೆಯ ಲಗ್ನಪತ್ರಿಕೆ ಕೊಡಲು ಹೋದ ತಂದೆ ಮಾರ್ಗ ಮಧ್ಯೆ ಅಪಘಾತದಿಂದ ಸಾವನ್ನಪ್ಪಿದ ವಿಷಯವೇ ಗೊತ್ತಿಲ್ಲದ ಮಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
ನಿನ್ನೆ ಹಾಗೂ ಇವತ್ತು ತರೀಕೆರೆ ಪಟ್ಟಣದ ನಾಗಪ್ಪ ಕಾಲೋನಿ ನಿವಾಸಿ ಚಂದ್ರು ಎಂಬವರ ಮಗಳ ಮದುವೆ ನಿಶ್ಚಯವಾಗಿತ್ತು. ಮಗಳು ಎಂದು ಚಂದ್ರು ಅದ್ಧೂರಿಯಾಗಿ ಮದುವೆಗೆ ತಯಾರಿ ಮಾಡಿದ್ದರು. ಆದರೆ, ಮಗಳ ಆರತಕ್ಷತೆಯ ದಿನ ಆತ್ಮೀಯ ಸ್ನೇಹಿತರೊಬ್ಬರಿಗೆ ಲಗ್ನಪತ್ರಿಕೆ ಕೊಟ್ಟಿಲ್ಲ ಎಂದು ತರೀಕೆರೆ ತಾಲೂಕಿನ ಹುಲಿತಿಮ್ಮಾಪುರಕ್ಕೆ ಹೋಗಿ ಕಾರ್ಡ್ ಕೊಟ್ಟು ಬರುವ ವೇಳೆ ಮಾರ್ಗ ಮಧ್ಯೆ ಬೈಕ್ ಅಪಘಾತವಾಗಿತ್ತು. ತೀವ್ರ ಗಂಭೀರ ಗಾಯವಾಗಿದ್ದ ಚಂದ್ರುರನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಚಂದ್ರು ಭಾನುವಾರ ಮಧ್ಯಾಹ್ನನವೇ ಮರಣ ಹೊಂದಿದ್ದರು.
ವಿಷಯ ಮನೆಯವರಿಗೆ ತಿಳಿದರೆ ಮದುವೆ ನಿಲ್ಲುತ್ತೆ ಎಂದು ಕುಟುಂಬಸ್ಥರು ವಿಷಯವನ್ನ ಮೃತ ಚಂದ್ರು ಪತ್ನಿ ಹಾಗೂ ಮಗಳು ದೀಕ್ಷಾಗೆ ಹೇಳಲೇ ಇಲ್ಲ. ಅಪಘಾತವಾಗಿದೆ ಆಸ್ಪತ್ರೆಯಲ್ಲಿದ್ದಾರೆ ಎಂದು ಹೇಳಿ ಭಾನುವಾರ ಸಂಜೆ ಆರತಕ್ಷತೆ ಮುಗಿಸಿ, ಇಂದು ಬೆಳಗ್ಗೆ ಮುಹೂರ್ತವನ್ನೂ ಮುಗಿಸಿದ್ದಾರೆ. ಮುಹೂರ್ತ ಮುಗಿದ ಬಳಿಕ ವಿಷಯವನ್ನ ಮನೆಯವರಿಗೆ ತಿಳಿಸಲಾಗಿದೆ.
ವಿಷಯ ಕೇಳಿ ಮೃತನ ಪತ್ನಿ ಹಾಗೂ ಮಗಳಿಗೆ ಬರಸಿಡಿಲು ಬಡಿದಂತಾಗಿ ಕುಟುಂಬಸ್ಥರ ನೋವಿನ ಆಕ್ರಂದನ ಮುಗಿಲುಮುಟ್ಟಿದೆ.
ಕಡೂರು ಪಟ್ಟಣದ ಬೀರೂರಿನ ತರಳಬಾಳು ಕಲ್ಯಾಣ ಮಂಟಪದಲ್ಲಿ ಮದುವೆಯಾಗಿದ್ದು, ಗಂಡು-ಹೆಣ್ಣು ಮನೆಗೆ ಬರುವ ವೇಳೆ ಮನೆಗೆ ತಂದೆಯ ಮೃತದೇಹ ಕೂಡ ಬಂದಿತ್ತು. ಮನೆಯವರು ಮಗಳ ಮದುವೆಯಾಯ್ತು ಅಂತ ಸಂತೋಷ ಪಡಬೇಕೋ ಅಥವಾ ಮನೆಯ ಯಜಮಾನ ಸಾವನ್ನಪ್ಪಿದ್ದಾನೆ ಎಂದು ಕಣ್ಣೀರಡಬೇಕೋ ತಿಳಿಯದಂತೆ ಕುಟುಂಬಸ್ಥರು ಶೋಕಸಾಗರದಲ್ಲಿ ಮುಳುಗಿದ್ದಾರೆ.
ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ Minister Madhu Bangarappa visits…
ಸಾಗರದಲ್ಲಿ ನಕಲಿ ನೋಟುಗಳ ಹಾವಳಿ ಆರೋಪ: ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟ Fake currency circulation allegedly increasing in Sagara,…
ವೋಟರ್ ಲಿಸ್ಟ್ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ? ಮೊಬೈಲ್ನಲ್ಲೇ ಪರಿಶೀಲಿಸಿ; ಇಲ್ಲಿದೆ ಸುಲಭ ವಿಧಾನ Check whether your name…
ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…
ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…
ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra…