ಅಪ್ಪನ ಸಾವಿನ ಸುದ್ದಿ ಮುಚ್ಚಿಟ್ಟು ಮಗಳ ಮದುವೆ  -ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಹೃದಯವಿದ್ರಾವಕ ಘಟನೆ

ಅಪ್ಪನ ಸಾವಿನ ಸುದ್ದಿ ಮುಚ್ಚಿಟ್ಟು ಮಗಳ ಮದುವೆ  -ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಹೃದಯವಿದ್ರಾವಕ ಘಟನೆ

ಮಗಳ ಮದುವೆಯ ಸಂಭ್ರಮದಲ್ಲಿದ್ದ ತಂದೆಯೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಮದುವೆಯ ಬಳಿಕ ತಂದೆ ಸಾವಿನ ಸುದ್ದಿ ಕುಟುಂಬಸ್ಥರಿಗೆ ತಿಳಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಆಪ್ತಮಿತ್ರನಿಗೆ ಮಗಳ ಮದುವೆಯ ಲಗ್ನಪತ್ರಿಕೆ ಕೊಡಲು ಹೋದ ತಂದೆ ಮಾರ್ಗ ಮಧ್ಯೆ ಅಪಘಾತದಿಂದ ಸಾವನ್ನಪ್ಪಿದ ವಿಷಯವೇ ಗೊತ್ತಿಲ್ಲದ ಮಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.

ನಿನ್ನೆ ಹಾಗೂ ಇವತ್ತು ತರೀಕೆರೆ ಪಟ್ಟಣದ ನಾಗಪ್ಪ ಕಾಲೋನಿ ನಿವಾಸಿ ಚಂದ್ರು ಎಂಬವರ ಮಗಳ ಮದುವೆ ನಿಶ್ಚಯವಾಗಿತ್ತು. ಮಗಳು ಎಂದು ಚಂದ್ರು ಅದ್ಧೂರಿಯಾಗಿ ಮದುವೆಗೆ ತಯಾರಿ ಮಾಡಿದ್ದರು. ಆದರೆ, ಮಗಳ ಆರತಕ್ಷತೆಯ ದಿನ ಆತ್ಮೀಯ ಸ್ನೇಹಿತರೊಬ್ಬರಿಗೆ ಲಗ್ನಪತ್ರಿಕೆ ಕೊಟ್ಟಿಲ್ಲ ಎಂದು ತರೀಕೆರೆ ತಾಲೂಕಿನ ಹುಲಿತಿಮ್ಮಾಪುರಕ್ಕೆ ಹೋಗಿ ಕಾರ್ಡ್ ಕೊಟ್ಟು ಬರುವ ವೇಳೆ ಮಾರ್ಗ ಮಧ್ಯೆ ಬೈಕ್ ಅಪಘಾತವಾಗಿತ್ತು. ತೀವ್ರ ಗಂಭೀರ ಗಾಯವಾಗಿದ್ದ ಚಂದ್ರುರನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಚಂದ್ರು ಭಾನುವಾರ ಮಧ್ಯಾಹ್ನನವೇ ಮರಣ ಹೊಂದಿದ್ದರು.

ವಿಷಯ ಮನೆಯವರಿಗೆ ತಿಳಿದರೆ ಮದುವೆ ನಿಲ್ಲುತ್ತೆ ಎಂದು ಕುಟುಂಬಸ್ಥರು ವಿಷಯವನ್ನ ಮೃತ ಚಂದ್ರು ಪತ್ನಿ ಹಾಗೂ ಮಗಳು ದೀಕ್ಷಾಗೆ ಹೇಳಲೇ ಇಲ್ಲ. ಅಪಘಾತವಾಗಿದೆ ಆಸ್ಪತ್ರೆಯಲ್ಲಿದ್ದಾರೆ ಎಂದು ಹೇಳಿ ಭಾನುವಾರ ಸಂಜೆ ಆರತಕ್ಷತೆ ಮುಗಿಸಿ, ಇಂದು ಬೆಳಗ್ಗೆ ಮುಹೂರ್ತವನ್ನೂ ಮುಗಿಸಿದ್ದಾರೆ. ಮುಹೂರ್ತ ಮುಗಿದ ಬಳಿಕ ವಿಷಯವನ್ನ ಮನೆಯವರಿಗೆ ತಿಳಿಸಲಾಗಿದೆ.

ವಿಷಯ ಕೇಳಿ ಮೃತನ ಪತ್ನಿ ಹಾಗೂ ಮಗಳಿಗೆ ಬರಸಿಡಿಲು ಬಡಿದಂತಾಗಿ ಕುಟುಂಬಸ್ಥರ ನೋವಿನ ಆಕ್ರಂದನ ಮುಗಿಲುಮುಟ್ಟಿದೆ.

ಕಡೂರು ಪಟ್ಟಣದ ಬೀರೂರಿನ ತರಳಬಾಳು ಕಲ್ಯಾಣ ಮಂಟಪದಲ್ಲಿ ಮದುವೆಯಾಗಿದ್ದು, ಗಂಡು-ಹೆಣ್ಣು ಮನೆಗೆ ಬರುವ ವೇಳೆ ಮನೆಗೆ ತಂದೆಯ ಮೃತದೇಹ ಕೂಡ ಬಂದಿತ್ತು. ಮನೆಯವರು ಮಗಳ ಮದುವೆಯಾಯ್ತು ಅಂತ ಸಂತೋಷ ಪಡಬೇಕೋ ಅಥವಾ ಮನೆಯ ಯಜಮಾನ ಸಾವನ್ನಪ್ಪಿದ್ದಾನೆ ಎಂದು ಕಣ್ಣೀರಡಬೇಕೋ ತಿಳಿಯದಂತೆ ಕುಟುಂಬಸ್ಥರು ಶೋಕಸಾಗರದಲ್ಲಿ ಮುಳುಗಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ

ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ Minister Madhu Bangarappa visits…

5 hours ago

ಸಾಗರದಲ್ಲಿ ನಕಲಿ ನೋಟುಗಳ ಹಾವಳಿ ಆರೋಪ: ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟ

ಸಾಗರದಲ್ಲಿ ನಕಲಿ ನೋಟುಗಳ ಹಾವಳಿ ಆರೋಪ: ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟ Fake currency circulation allegedly increasing in Sagara,…

5 hours ago

ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ? ಮೊಬೈಲ್‌ನಲ್ಲೇ ಪರಿಶೀಲಿಸಿ; ಇಲ್ಲಿದೆ ಸುಲಭ ವಿಧಾನ

ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ? ಮೊಬೈಲ್‌ನಲ್ಲೇ ಪರಿಶೀಲಿಸಿ; ಇಲ್ಲಿದೆ ಸುಲಭ ವಿಧಾನ Check whether your name…

6 hours ago

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…

1 day ago

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…

1 day ago

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra…

1 day ago