ವಿದ್ಯುತ್ ಶಾಕ್ ನಿಂದ ಬಿಕಾಂ ವಿದ್ಯಾರ್ಥಿ ಸಾವು ಶಂಕೆ – ಕೇಸ್ ದಾಖಲು
ಹೊಳೆಹೊನ್ನೂರು , ಜ. 6: ಅಡಕೆ ತೋಟದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಅಸುನೀಗಿದ ಘಟನೆ, ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಕನಸಿನಕಟ್ಟೆ ಗ್ರಾಮದಲ್ಲಿ ಜ. 5 ರ ಸಂಜೆ ನಡೆದಿದೆ.
ದರ್ಶನ್ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಹೊಳೆಹೊನ್ನೂರು ಸರ್ಕಾರಿ ಕಾಲೇಜ್ ನಲ್ಲಿ, ಅಂತಿಮ ವರ್ಷದ ಬಿಕಾಂ ಅಭ್ಯಾಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.
ಭಾನುವಾರ ಕಾಲೇಜ್ ಗೆ ರಜೆಯಿದ್ದ ಕಾರಣದಿಂದ, ಸಂಜೆ 4. 30 ರ ಸುಮಾರಿಗೆ ತಮ್ಮ ಅಡಕೆ ತೋಟಕ್ಕೆ ನೀರು ಹಾಯಿಸಲೆಂದು ದರ್ಶನ್ ತೆರಳಿದ್ದು, ನಂತರ ಮನೆಗೆ ಆಗಮಿಸಿರಲಿಲ್ಲ.ಈ ನಡುವೆ ಸಂಜೆ 6. 50 ರ ಸುಮಾರಿಗೆ ತೋಟಕ್ಕೆ ಅವರ ಸಂಬಂಧಿಯೋರ್ವರು ತೆರಳಿದ್ದ ವೇಳೆ, ಪಂಪ್ ಸೆಟ್ ಸ್ವಿಚ್ ಬೋರ್ಡ್ ಬಳಿ ದರ್ಶನ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ.
ತಕ್ಷಣವೇ ದರ್ಶನ್ ನನ್ನು ವಾಹನವೊಂದರಲ್ಲಿ ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರೀಕ್ಷಿಸಿದ ವೈದ್ಯರು ದರ್ಶನ್ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.
ತೋಟದಲ್ಲಿ ಪಂಪ್ ಸೆಟ್ ಆನ್ ಮಾಡುವ ವೇಳೆ, ವಿದ್ಯುತ್ ಶಾಕ್ ನಿಂದ ದರ್ಶನ್ ಮೃತಪಟ್ಟಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ Minister Madhu Bangarappa visits…
ಸಾಗರದಲ್ಲಿ ನಕಲಿ ನೋಟುಗಳ ಹಾವಳಿ ಆರೋಪ: ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟ Fake currency circulation allegedly increasing in Sagara,…
ವೋಟರ್ ಲಿಸ್ಟ್ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ? ಮೊಬೈಲ್ನಲ್ಲೇ ಪರಿಶೀಲಿಸಿ; ಇಲ್ಲಿದೆ ಸುಲಭ ವಿಧಾನ Check whether your name…
ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…
ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…
ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra…