ಮಾಂಸದಂಗಡಿ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತದಿಂದ ತಾರತಮ್ಯ – ಗ್ರಾಪಂ ಸದಸ್ಯ ಸುಂದರೇಶ್ ಆರೋಪ

ಮಾಂಸದಂಗಡಿ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತದಿಂದ ತಾರತಮ್ಯ – ಗ್ರಾಪಂ ಸದಸ್ಯ ಸುಂದರೇಶ್ ಆರೋಪ

ರಿಪ್ಪನ್‌ಪೇಟೆ : ಮಾಂಸದ ಅಂಗಡಿಯ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತ ತಾರತಮ್ಯ ಎಸಗುವುದರೊಂದಿಗೆ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿದೆ ಎಂದು ಗ್ರಾಪಂ ಸದಸ್ಯ ಸುಂದರೇಶ್ ಆರೋಪಿಸಿದ್ದಾರೆ.

ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಪತ್ರೀಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಸರ್ಕಾರದ ನಿಯಮಾವಳಿಗಳ ಪ್ರಕಾರ ಯಾವುದೇ ಹರಾಜು ಪ್ರಕ್ರಿಯೆಯನ್ನು ನಡೆಸದೆ ಬೇಕಾಬಿಟ್ಟಿ ಮಾಂಸದ ಅಂಗಡಿಗಳ ಲೈಸೆನ್ಸ್ ಗಳನ್ನು ಕಾನೂನು ಬಾಹಿರವಾಗಿ ವಿತರಿಸುತ್ತಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇನೆ ಎಂದರು

ಇನ್ನು ಜನನಿಬಿಡ ಪ್ರದೇಶದಲ್ಲಿರುವ ಮಾಂಸದ ಅಂಗಡಿಗಳ ಸುತ್ತಮುತ್ತ ಯಾವುದೇ ಸ್ವಚ್ಛತೆ ಇಲ್ಲದೆ ಇರುವುದು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಮಾಂಸದ ಅಂಗಡಿಗಳನ್ನು ಜನನಿಬಿಡ ಇಲ್ಲದೇ ಇರುವ ಪ್ರದೇಶದಲ್ಲಿ ನಿರ್ಮಿಸುವಂತೆ ಈಗಾಗಲೇ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯಲ್ಲಿ ತಿಳಿಸಿದ್ದು ಇದಕ್ಕೆ ಯಾವುದೇ ರೀತಿಯ ಸ್ಪಂದನೆ ದೊರಕಿಲ್ಲವೆಂದರು.

ನಾಲ್ಕು ವರ್ಷಗಳ ಅವಧಿಯಲ್ಲಿ ಮಾಂಸದಂಗಡಿಯ ಹರಾಜು ಪ್ರಕ್ರಿಯೆಯ ಬಗ್ಗೆ ಪ್ರಶ್ನಿಸದೇ ಈಗ ದಿಡೀರ್ ಯಾಕೆ ಪ್ರಶ್ನಿಸುತಿದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಸೆಪ್ಟೆಂಬರ್ ತಿಂಗಳಿನಲ್ಲಿ ಗವಟೂರು ಗ್ರಾಮದ ವ್ಯಕ್ತಿಯೊಬ್ಬರು ಮಾಂಸದಂಗಡಿ ಲೈಸೆನ್ಸ್ ಗೆ ಅರ್ಜಿ ಸಲ್ಲಿಸಿದಾಗ ಸಾಮಾನ್ಯ ಸಭೆಯಲ್ಲಿ ಅರ್ಜಿ ತಿರಸ್ಕರಿಸಲಾಗಿತ್ತು ಆದರೆ ಡಿಸೆಂಬರ್ ತಿಂಗಳಿನಲ್ಲಿ ಇನ್ನೊಬ್ಬರಿಗೆ ಲೈಸೆನ್ಸ್ ವಿತರಿಸಿದ್ದಾರೆ ಹಾಗಾಗಿ ಪ್ರಶ್ನಿಸುತಿದ್ದೇನೆ ಎಂದರು.

ಪ್ರಭಾವಿ ಮಾಂಸದಂಗಡಿಯ ಮಾಲೀಕನ ಪರ ಬ್ಯಾಟ್ ಬೀಸುವ ಉದ್ದೇಶದಿಂದ ಈಗ ವಿರೋಧಿಸುತಿದ್ದೀರಾ ಎಂಬ ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಅವರು “ನಾನು ಯಾರ ಪರವೂ ಇಲ್ಲ ಯಾರ ವಿರುದ್ದವೂ ಇಲ್ಲ ” ಬೇಕಾದರೇ ಸಂತೆ ಮಾರ್ಕೆಟ್ ನಲ್ಲಿರುವ ಎಲ್ಲಾ ಅಂಗಡಿಗಳನ್ನು ತೆರವುಗೊಳಿಸಲಿ ಇಲ್ಲದಿದ್ದರೆ ಸೂಕ್ತ ಇಂಗು ಗುಂಡಿ ಹಾಗೂ ಚರಂಡಿ ವ್ಯವಸ್ಥೆ ನಿರ್ಮಿಸಲಿ ಎನ್ನುವುದು ನನ್ನ ಆಗ್ರಹವೆಂದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

41 minutes ago

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

9 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

22 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

23 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

1 day ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

1 day ago