ರಿಪ್ಪನ್‌ಪೇಟೆ : ಹಿರಿಯ ಸಾಹಿತಿ ನಾ ಡಿಸೋಜ ಅಂತಿಮ ದರ್ಶನ ಪಡೆದ ಅಭಿಮಾನಿಗಳು

ರಿಪ್ಪನ್‌ಪೇಟೆ : ಭಾನುವಾರ ಅಸ್ತಂಗತರಾದ ನಾಡಿನ ಹೆಸರಾಂತ ಸಾಹಿತಿ ,‌ಜನಪ್ರಿಯ ಕಾದಂಬರಿಕಾರ ಡಾ.ನಾ ಡಿಸೋಜಾ ಪಾರ್ಥಿವ ಶರೀರವನ್ನು ಪಟ್ಟಣದ ವಿನಾಯಕ ವೃತ್ತದಲ್ಲಿ ಅಭಿಮಾನಿಗಳು, ಹಿತೈಷಿಗಳು, ಅಂತಿಮ ದರ್ಶನ ಪಡೆದರು.

ಮಂಗಳೂರಿನಿಂದ ಸಾಗರಕ್ಕೆ ಪ್ರಾರ್ಥೀವ ಶರೀರ ತೆರಳುತಿದ್ದ ಸಂಧರ್ಭದಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ಕನ್ನಡಪರ ಸಂಘಟನೆಗಳು ,ಅಭಿಮಾನಿಗಳು ಹಾಗೂ ಹಿತೈಶಿಗಳು ನಾಡಿನ ಹೆಸರಾಂತ ಸಾಹಿತಿಯ ಅಂತಿಮ ದರ್ಶನ ಪಡೆದರು.

ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಸಾಹಿತಿ ಹ ಅ ಪಾಟೀಲ್ ನಾ ಡಿಸೋಜ ಹಾಗೂ ರಿಪ್ಪನ್‌ಪೇಟೆ ಪಟ್ಟಣಕ್ಕೂ ಅವಿನಾಭಾವ ಸಂಬಂಧವಿದ್ದು ಅವರು ನಮ್ಮೂರಿನ ಮಾಣಿಕ್ಯವಾಗಿದ್ದರು , ಅವರು ಸರಳ ಮತ್ತು ಸಾಮಾಜಿಕ ಕಳಕಳಿಯ ಬರಹಗಾರರಾಗಿದ್ದರು. ಕಥಾಸಂಕಲನ,ಕಾದಂಬರಿಗಳನ್ನ ಪ್ರಕಟಿಸಿದ್ದರು. ನಾಡಿನ ಖ್ಯಾತ ಪತ್ರಿಕೆಗಳಲ್ಲಿ ಅವರ ಬರಹಗಳು ಜನಮನ ರಂಜಿಸಿದ್ದವು ಎಂದು ಹೇಳಿದರು.

ಪ್ರಾರ್ಥೀವ ಶರೀರ ವಿನಾಯಕ ವೃತ್ತಕ್ಕೆ ಆಗಮಿಸುವುದಕ್ಕಿಂತ ಮುಂಚೆ ಮೃತರ ಆತ್ಮಕ್ಕೆ ಶಾಂತಿ ಕೋರಿ‌ ಮೌನಾಚರಣೆ ನಡೆಸಲಾಯಿತು.

ಈ ಸಂಧರ್ಭದಲ್ಲಿ ಕಲಾ ಕೌಸ್ಥುಭ ಕನ್ನಡ ಸಂಘದ ಅಧ್ಯಕ್ಷ ರವೀಂದ್ರ ಕೆರೆಹಳ್ಳಿ , ಕಸಾಪ ನಿಕಟ ಪೂರ್ವ ಅಧ್ಯಕ್ಷ ತ ಮ ನರಸಿಂಹ ,ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ಮುಖಂಡರಾದ ಎನ್ ವರ್ತೇಶ್ , ಎಂ ಬಿ ಮಂಜುನಾಥ್ , ಆಸೀಫ಼್ ಭಾಷಾ , ಸುರೇಶ್ ಸಿಂಗ್ , ಗಣಪತಿ , ಸೋಮನಾಥ್ , ಪಿಯೂಸ್ ರೋಡ್ರಿಗಸ್ , ಶ್ರೀಧರ್ ಹಾಗೂ ಇನ್ನಿತರರಿದ್ದರು.

ರಿಪ್ಪನ್‌ಪೇಟೆ : ಹಿರಿಯ ಸಾಹಿತಿ ನಾ ಡಿಸೋಜ ಅಂತಿಮ ದರ್ಶನ ಪಡೆದ ಅಭಿಮಾನಿಗಳು

ರಿಪ್ಪನ್‌ಪೇಟೆ : ಭಾನುವಾರ ಅಸ್ತಂಗತರಾದ ನಾಡಿನ ಹೆಸರಾಂತ ಸಾಹಿತಿ ,‌ಜನಪ್ರಿಯ ಕಾದಂಬರಿಕಾರ ಡಾ.ನಾ ಡಿಸೋಜಾ ಪಾರ್ಥಿವ ಶರೀರವನ್ನು ಪಟ್ಟಣದ ವಿನಾಯಕ ವೃತ್ತದಲ್ಲಿ ಅಭಿಮಾನಿಗಳು, ಹಿತೈಷಿಗಳು, ಅಂತಿಮ ದರ್ಶನ ಪಡೆದರು.

ಮಂಗಳೂರಿನಿಂದ ಸಾಗರಕ್ಕೆ ಪ್ರಾರ್ಥೀವ ಶರೀರ ತೆರಳುತಿದ್ದ ಸಂಧರ್ಭದಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ಕನ್ನಡಪರ ಸಂಘಟನೆಗಳು ,ಅಭಿಮಾನಿಗಳು ಹಾಗೂ ಹಿತೈಶಿಗಳು ನಾಡಿನ ಹೆಸರಾಂತ ಸಾಹಿತಿಯ ಅಂತಿಮ ದರ್ಶನ ಪಡೆದರು.

ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಸಾಹಿತಿ ಹ ಅ ಪಾಟೀಲ್ ನಾ ಡಿಸೋಜ ಹಾಗೂ ರಿಪ್ಪನ್‌ಪೇಟೆ ಪಟ್ಟಣಕ್ಕೂ ಅವಿನಾಭಾವ ಸಂಬಂಧವಿದ್ದು ಅವರು ಹಲವಾರು ಕಾರ್ಯಕ್ರಮ ಹಾಗೂ ಹೋರಾಟಗಳಲ್ಲಿ ನಿಸ್ವಾರ್ಥವಾಗಿ ಭಾಗವಹಿಸಿದ್ದರು , ಅವರು ಸರಳ ಮತ್ತು ಸಾಮಾಜಿಕ ಕಳಕಳಿಯ ಬರಹಗಾರರಾಗಿದ್ದರು. ಕಥಾಸಂಕಲನ,ಕಾದಂಬರಿಗಳನ್ನ ಪ್ರಕಟಿಸಿದ್ದರು. ನಾಡಿನ ಖ್ಯಾತ ಪತ್ರಿಕೆಗಳಲ್ಲಿ ಅವರ ಬರಹಗಳು ಜನಮನ ರಂಜಿಸಿದ್ದವು ಎಂದು ಹೇಳಿದರು.

ಪ್ರಾರ್ಥೀವ ಶರೀರ ವಿನಾಯಕ ವೃತ್ತಕ್ಕೆ ಆಗಮಿಸುವುದಕ್ಕಿಂತ ಮುಂಚೆ ಮೃತರ ಆತ್ಮಕ್ಕೆ ಶಾಂತಿ ಕೋರಿ‌ ಮೌನಾಚರಣೆ ನಡೆಸಲಾಯಿತು.

ಈ ಸಂಧರ್ಭದಲ್ಲಿ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ , ಕಲಾ ಕೌಸ್ಥುಭ ಕನ್ನಡ ಸಂಘದ ಅಧ್ಯಕ್ಷ ರವೀಂದ್ರ ಕೆರೆಹಳ್ಳಿ , ಕಸಾಪ ನಿಕಟ ಪೂರ್ವ ಅಧ್ಯಕ್ಷ ತ ಮ ನರಸಿಂಹ ,ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ಮುಖಂಡರಾದ ಎನ್ ವರ್ತೇಶ್ , ಎಂ ಬಿ ಮಂಜುನಾಥ್ , ಆಸೀಫ಼್ ಭಾಷಾ , ಸುರೇಶ್ ಸಿಂಗ್ , ಗಣಪತಿ , ಸೋಮನಾಥ್ , ಪಿಯೂಸ್ ರೋಡ್ರಿಗಸ್ , ಶ್ರೀಧರ್ ಹಾಗೂ ಇನ್ನಿತರರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ

ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ Minister Madhu Bangarappa visits…

11 hours ago

ಸಾಗರದಲ್ಲಿ ನಕಲಿ ನೋಟುಗಳ ಹಾವಳಿ ಆರೋಪ: ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟ

ಸಾಗರದಲ್ಲಿ ನಕಲಿ ನೋಟುಗಳ ಹಾವಳಿ ಆರೋಪ: ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟ Fake currency circulation allegedly increasing in Sagara,…

11 hours ago

ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ? ಮೊಬೈಲ್‌ನಲ್ಲೇ ಪರಿಶೀಲಿಸಿ; ಇಲ್ಲಿದೆ ಸುಲಭ ವಿಧಾನ

ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ? ಮೊಬೈಲ್‌ನಲ್ಲೇ ಪರಿಶೀಲಿಸಿ; ಇಲ್ಲಿದೆ ಸುಲಭ ವಿಧಾನ Check whether your name…

11 hours ago

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…

1 day ago

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…

1 day ago

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra…

2 days ago