ಎಟಿಎಂನಲ್ಲಿ ರೈತನಿಗೆ ಸಹಾಯ ಮಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯಿಂದ ವಂಚನೆ
ಆಯನೂರು : ಎಟಿಎಂ ಕೇಂದ್ರದಲ್ಲಿ ಹಣ ಬಿಡಿಸಲು ನೆರವು ನೀಡುವಂತೆ ನಟಿಸಿ, ATM ಕಾರ್ಡ್ ಬದಲಿಸಿ ರೈತರೊಬ್ಬರಿಗೆ ವಂಚಿಸಲಾಗಿದೆ. ಎಟಿಎಂ ಕಾರ್ಡ್ ಅದಲು ಬದಲಾಗಿ 20 ನಿಮಿಷದ ಒಳಗೆ 40 ಸಾವಿರ ರೂ. ಹಣ ಡ್ರಾ ಮಾಡಿ ವಂಚಿಸಿರುವ ಘಟನೆ ನಡೆದಿದೆ.
ಹಾರ್ನಳ್ಳಿ ಗ್ರಾಮದ ದೇವಪ್ಪ, ಆಯನೂರಿನ ಬ್ಯಾಂಕ್ ಒಂದರ ಎಟಿಎಂ ಸೆಂಟರ್ನಲ್ಲಿ ಹಣ ಬಿಡಿಸಲು ತೆರಳಿದ್ದಾಗ ಘಟನೆ ಸಂಭವಿಸಿದೆ. ಅಪರಿಚಿತರು ದೇವಪ್ಪ ಅವರಿಗೆ ಹಣ ಬಿಡಿಸಲು ನೆರವಾಗಿದ್ದರು. ದೇವಪ್ಪ ಅವರು ಸೂಚಿಸಿದಂತೆ 10 ಸಾವಿರ ರೂ. ಬಿಡಿಸಿ ಕೊಟ್ಟಿದ್ದರು. ಎಟಿಎಂ ಮೆಷಿನ್ನಿಂದ ಕಾರ್ಡ್ ಹೊರತೆಗೆದು ಕೊಡುವಾಗ ಆ ಅಪರಿಚಿತರು, ದೇವಪ್ಪ ಅವರ ಕಾರ್ಡ್ ಬದಲು ಬೇರೊಂದು ಕಾರ್ಡ್ ಕೊಟ್ಟಿದ್ದರು.
ಎಟಿಎಂ ಕಾರ್ಡ್ ಬದಲಾದ ವಿಚಾರ ಕೇವಲ 20 ನಿಮಿಷದಲ್ಲಿ ದೇವಪ್ಪ ಅವರಿಗೆ ಗೊತ್ತಾಗಿತ್ತು. ಕೂಡಲೆ ಬ್ಯಾಂಕ್ನ ಕಾಲ್ ಸೆಂಟರ್ಗೆ ಕರೆ ಮಾಡಿ ಕಾರ್ಡ್ ಬ್ಲಾಕ್ ಮಾಡಿಸಿದ್ದರು. ಅಷ್ಟರಲ್ಲಾಗಲೆ ವಂಚಕರು ಹಾರನಹಳ್ಳಿ ಮತ್ತು ಸವಳಂಗದ ಎಟಿಎಂ ಕೇಂದ್ರಗಳಿಂದ 40 ಸಾವಿರ ರೂ. ಹಣ ವಿತ್ ಡ್ರಾ ಮಾಡಿದ್ದರು ಎಂದು ಆರೋಪಿಸಲಾಗಿದೆ.
ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…
ರಿಪ್ಪನ್ಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ಸಾಮೂಹಿಕ ಋಗ್ವೇದ ಉಪಾಕರ್ಮ ಯಜ್ಞ ಮಹೋತ್ಸವ Rituals of Rigveda Upakarma and Vishwakarma Yajna were…
ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…
ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…