ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ : ಆರೋಪಿಯ ಬಂಧನ

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ: ಕಳ್ಳನ ಬಂಧನ

ಎಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಕಾರ್ಡ್ ಬದಲಿಸಿ, ಹಣ ಡ್ರಾ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳನನ್ನು ಬಂಕಾಪುರ ಠಾಣೆಯ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಸಿಂದ ಗ್ರಾಮದ ಕಿರಣ್ ಕುಮಾರ್ ಎಂದು ಗುರುತಿಸಲಾಗಿದೆ.

ದಿನಾಂಕ: 06-082025 ರಂದು ಗುಡ್ಡದ ಚನ್ನಾಪೂರ ಗ್ರಾಮದ ಮಲ್ಲೇಶಪ್ಪ ದೊಡ್ಡಮನಿ ಇತನು ಎಟಿಎಮ್‌ಲ್ಲಿ ಹಣ ತೆಗೆದುಕೊಳ್ಳವ ಕಾಲಕ್ಕೆ ಆಪಾದಿತ ಕಾರ್ಡು ತೆಗೆದುಕೊಡುವಂತೆ ನಟನೆ ಮಾಡಿ ಮೋಸದಿಂದ ಎಟಿಎಮ್ ಕಾರ್ಡ ಬದಲಾಯಿಸಿ ಅದರಿಂದ ಬೇರೆ ಎಟಿಎಮ್ ಕೇಂದ್ರದಲ್ಲಿ ಒಟ್ಟು 75000/- ರೂಗಳನ್ನು ತೆಗೆದುಕೊಂಡು ಮೋಸ ಮಾಡಿದ ಬಗ್ಗೆ ಬಂಕಾಪುರ ಪೊಲೀಸ ಠಾಣೆ ಅಪರಾಧ ಸಂಖ್ಯೆ 109/2024 ಕಲಂ 318(4) ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ತನಿಖೆ ನಡೆಸಿದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆತನಿಂದ 81000 ರೂ ನಗದು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಆರೋಪಿತನು ಕುಖ್ಯಾತ ಅಂತರ ಜಿಲ್ಲಾ ಮತ್ತು ಅಂತರ ರಾಜ್ಯದಲ್ಲಿ ಮೋಸ, ವಂಚನೆ, ಕಳ್ಳತನ, ಷೇರು ಮಾರುಕಟ್ಟೆಯಲ್ಲಿ ಹಣ ದ್ವಿಗುಣಗೊಳಿಸುತ್ತೇನೆ ಅಂತಾ ಹೊಟೆಲ್ ಮಾಲಿಕರಿಗೆ ಮತ್ತು ಇತರರಿಗೆ ವಂಚಿಸುತ್ತಾ ಹೆಚ್ಚಾಗಿ ಅನಕ್ಷರಸ್ತರು, ಮಹಿಳೆಯರು, ಮಕ್ಕಳು, ಅಮಾಯಕರು, ವಯೋವೃದ್ದರನ್ನು ಗುರಿಯಾಗಿಸಿಕೊಂಡು ಅವರಿಗೆ ಸಹಾಯ ಮಾಡುವ ನೆಪದಲ್ಲಿ ಪಿನ್ ನಂಬರ ತಿಳಿದುಕೊಂಡು ಎಟಿಎಮ್ ಕಾರ್ಡ ಬದಲಾಯಿಸಿ ಮೋಸ ಮಾಡಿ ಹಣ ತೆಗೆಯುತ್ತಾ ವಿಲಾಸಿ ಜೀವನ ನಡೆಸುತ್ತಾ ಬಂದಿದ್ದು ಈ ಬಗ್ಗೆ 1 ಚಿಕ್ಕಬಳ್ಳಾಪೂರ ಪೊಲೀಸ್ ಠಾಣೆ, 2]ಹಾಸನ ದುಡ್ಡಾ ಪೊಲೀಸ್ ಠಾಣೆ 3] ಕೊಡಗು ಸಿ ಇ ಎನ್ ಪೊಲೀಸ್ ಠಾಣೆ, 4]ಚಾಮರಾಜ ನಗರ ಪೊಲೀಸ್ ಠಾಣೆ, 5] ಕುಮಟಾ ಪೊಲೀಸ್ ಠಾಣೆ, 6] ಉಡುಪಿ ಪೊಲೀಸ್ ಠಾಣೆ, 7] ಶಿರಾಳಕೊಪ್ಪ ಪೊಲೀಸ್ ಠಾಣೆ, 8] ಡಾವಣಗೇರಿ ಶಹರ ಪೊಲೀಸ್ ಠಾಣೆ, 9]ಮುಂಡಗೋಡ ಪೊಲೀಸ್ ಠಾಣೆ, 10] ಹಳಿಯಾಳ ಪೊಲೀಸ್‌ ಠಾಣೆಗಳಲ್ಲಿ ಹೀಗೆ ಹತ್ತಕ್ಕೂ ಹೆಚ್ಚು ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದು  ಬಹಿರಂಗಗೊಂಡಿದೆ.

ಆರೋಪಿತನನ್ನು ಪತ್ತೆ ಮಾಡಿದ ಪಿಎಸ್‌ಐ ನಿಂಗರಾಜ ಕೆ ವೈ ಪಿಎಸ್‌ಐ- 2 ಎಸ್ ಎಮ್ ವನಹಳ್ಳಿ ಪತ್ತೆ ಕಾರ್ಯದಲ್ಲಿ ತೊಡಗಿದ ASI ಕೆ ರಜನಿ , ಹೆಡ್ ಕಾನಸ್ಟೆಬಲ್ ಎ ಕೆ ನದಾಪ, ಕಾನಸ್ಟೆಬಲ್‌ಗಳಾದ ಗೊವಿಂದ ಲಮಾಣಿ, ವೆಂಕಟೇಶ ಲಮಾಣಿ , ಬೀರಪ್ಪ ಕಳ್ಳಿಮನಿ, ನಿಂಗಪ್ಪ ಪೂಜಾರ ತಾಂತ್ರಿಕ ಸಿಬ್ಬಂದಿಗಳಾದ ಸತೀಶ ಮಾರಕಟ್ಟೆ, ಮಾರುತಿ ಹಾಲಬಾವಿ ರವರಿಗೆ ಮಾನ್ಯ ಪೊಲೀಸ ಅಧೀಕ್ಷಕರು ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

59 minutes ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

1 hour ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

1 hour ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

2 hours ago

ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಕೆದಲಗುಡ್ಡೆಯ ಲಕ್ಷ್ಮಣ ನಾಪತ್ತೆ: ಪತ್ತೆಗೆ ಸಹಕರಿಸುವಂತೆ ಪೊಲೀಸರ ಮನವಿ

ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಕೆದಲಗುಡ್ಡೆಯ ಲಕ್ಷ್ಮಣ ನಾಪತ್ತೆ: ಪತ್ತೆಗೆ ಸಹಕರಿಸುವಂತೆ ಪೊಲೀಸರ ಮನವಿ 30-year-old Lakshman from Kedalagudde, Kenchanala,…

2 hours ago

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

20 hours ago