ಬಸ್ ಹತ್ತುವಾಗ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ಎಟಿಎಂ ಕಾರ್ಡ್ ಕಳ್ಳತನ
ಶಿವಮೊಗ್ಗ : ಬಸ್ ಹತ್ತುವಾಗ ಮಹಿಳೆಯರ ವ್ಯಾನಿಟಿ ಬ್ಯಾಗ್ನಿಂದ ಚಿನ್ನಾಭರಣ, ನಗದು ಕಳ್ಳತನ ಮುಂದುವರೆದಿದೆ. ನಗರದ KSRTC ಬಸ್ ನಿಲ್ದಾಣದಲ್ಲಿ ಶಿಕಾರಿಪುರ ಬಸ್ ಹತ್ತುವಾಗ ವ್ಯಾನಿಟಿ ಬ್ಯಾಗ್ನಿಂದ ಕಳ್ಳತನವಾಗಿದೆ.
ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಸಂಬಂಧಿಯ ಆರೋಗ್ಯ ವಿಚಾರಿಸಿದ್ದ ಗೀತಾ ಎಂಬುವವರು ನ್ಯಾಮತಿಗೆ ಹಿಂತಿರುಗುತ್ತಿದ್ದರು. ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಿಕಾರಿಪುರ ಬಸ್ ಹತ್ತಿದ್ದರು. ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ಗಮನಿಸಿದಾಗ ಜಿಪ್ ತೆರೆದಿರುವುದು ಗೊತ್ತಾಗಿದೆ. ಒಳಗಿದ್ದ ಪರ್ಸ್ ನಾಪತ್ತೆಯಾಗಿತ್ತು. ಅದರಲ್ಲಿ 75 ಸಾವಿರ ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರ, 1500 ರೂ. ನಗದು, ವಿವಿಧೆ ಬ್ಯಾಂಕುಗಳ ಎಟಿಎಂ ಕಾರ್ಡುಗಳಿದ್ದವು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಬಸ್ ಹತ್ತುವಾಗ ಹೆಚ್ಚು ಜನ ದಟ್ಟಣೆ ಇತ್ತು. ಈ ಸಂದರ್ಭ ಕಳ್ಳರು ವ್ಯಾನಿಟಿ ಬ್ಯಾಗ್ ಜಿಪ್ ತೆಗೆದು ಕಳ್ಳತನ ಮಾಡಿದ್ದಾರೆ ಎಂದು ಗೀತಾ ಅವರು ಆರೋಪಿಸಿದ್ದಾರೆ.
ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…