ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ
ರಿಪ್ಪನ್ಪೇಟೆ : ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿ ಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಆಹ್ವಾನಿಸುತ್ತಿದ್ದಾರೆಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ನ 2024 -25ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ನಾನು ಸಾಗರ ಸರ್ಕಾರಿ ಕಾಲೇಜ್ನಲ್ಲಿ ವ್ಯಾಸಂಗ ಮಾಡುವ ವೇಳೆ ಜಾನುವಾರು ದೊಡ್ಡಿಯೆಂದು ಹೀಯಾಳಿಸುತ್ತಿದ್ದ ಕಾಲ ಇತ್ತು ನಾನು ಶಾಸಕನಾದ ಮೇಲೆ ಆ ದೊಡ್ಡಿ ಪದವನ್ನು ಕಿತ್ತು ಹಾಕಿ ಈಗ ರಾಜ್ಯದಲ್ಲಿಯೇ ಅತ್ಯುತ್ತಮ ಕಾಲೇಜ್ ಎಂಬ ಹೆಗ್ಗಳಿಕೆಯೊಂದಿಗೆ 2700 ಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವಂತೆ ಸುಸಜ್ಜಿತ ಕಟ್ಟಡ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದ ಅವರು, ಅದೇ ರೀತಿಯಲ್ಲಿ ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿನ ರಿಪ್ಪನ್ಪೇಟೆ ಕಾಲೇಜ್ಗೂ ಹೆಚ್ಚಿನ ಸೌಲಭ್ಯವನ್ನು ನೀಡಲಾಗಿದ್ದು ಯಾವುದೇ ವಿದ್ಯಾರ್ಥಿ ವ್ಯಾಸಂಗದಿಂದ ವಂಚಿತರಾಗದಂತೆ ಉಪನ್ಯಾಸಕ ವೃಂದ ಗಮನಹರಿಸಿ ಅವರನ್ನು ಕಾಲೇಜ್ಗೆ ಕರೆತರುವ ಕೆಲಸ ಮಾಡುವಂತೆ ಕರೆ ನೀಡಿದರು.
ಮೂಢನಂಬಿಕೆಯಿಂದ ಮುಗ್ದ ಜನರನ್ನು ವಂಚಿಸುವವರು ಹೆಚ್ಚಾಗಿದ್ದು ಅದಕ್ಕೆ ಅವಕಾಶ ನೀಡದೆ ಸ್ವಚ್ಚತೆಯ ಕಡೆ ಹೆಚ್ಚು ಒತ್ತು ನೀಡಬೇಕು ಎನ್.ಎಸ್.ಎಸ್.ಶಿಬಿರಗಳ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ಎಂದ ಅವರು, ವಿದ್ಯಾರ್ಥಿಗಳು ಗುರು-ಹಿರಿಯರನ್ನು ಗೌರವದಿಂದ ಕಾಣುವಂತೆ ಕರೆ ನೀಡಿದರು.
ಇದೇ ಸಂಧರ್ಭದಲ್ಲಿ ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿ ಪಡೆದ ಕಾಲೇಜಿನ ಪ್ರಭಾರಿ ಪ್ರಾಚಾರ್ಯ ವಾಸುದೇವ್ ರವರನ್ನು ಈ ಸಂಧರ್ಭದಲ್ಲಿ ಕಾಲೇಜಿನ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಗ್ರಾಪಂ ಸದಸ್ಯ ಆಸೀಫ಼್ ಭಾಷಾ , ಮಹಾಲಕ್ಷ್ಮಿ ಅಣ್ಣಪ್ಪ ಹಾಗೂ ಸಿಡಿಸಿ ಸಮಿತಿ ಉಪಾಧ್ಯಕ್ಷ ಜಿ ಆರ್ ಗೋಪಾಲಕೃಷ್ಣ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಕಾಲೇಜ್ ಪ್ರಾಚಾರ್ಯ ಹೆಚ್.ಕೆ.ವಾಸುದೇವ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸಿಡಿಸಿ ಸಮಿತಿ ಸದಸ್ಯರಾದ ರಫಿ ರಿಪ್ಪನ್ಪೇಟೆ, ಕಟ್ಟೆ ನಾಗಪ್ಪ, ಬೋರಪ್ಪ, ಷಣ್ಮುಖ,ಗ್ರಾಪಂ ಸದಸ್ಯರಾದ ಡಿ.ಈ.ಮಧುಸೂಧನ್, ಗಣಪತಿ, ಅಶ್ವಿನಿ ರವಿಶಂಕರ್ ಇನ್ನಿತರರು ಹಾಜರಿದ್ದರು.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…