ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು
ರಿಪ್ಪನ್ಪೇಟೆ;-ಸರ್ಕಾರ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡುವ ಮೂಲಕ ಕಡ್ಡಾಯ ಶಿಕ್ಷಣ ನೀಡುವುದು ಮತ್ತು ಸಾಕಷ್ಟು ಉಪಯುಕ್ತವಾದಂತಹ ಯೋಜನೆಗಳ ಮೂಲಕ ನಮ್ಮ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡದಂತೆ ಯೋಜನೆ ರೂಪಿಸಿದೆ ಇದನ್ನು ಬಳಸಿಕೊಂಡು ಪೋಷಕರು ಶಿಕ್ಷಕ ಸಮೂಹ ಮಕ್ಕಳಗೆ ಶಿಕ್ಷಣ ನೀಡುವಂತೆ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ನ ಪ್ರೌಢಶಾಲಾ ವಿಭಾಗದ 2024-25 ನೇ ಸಾಲಿನ ಶಾಲಾ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪೊಷಕರು ಆಗಾಗ ಶಾಲೆಗೆ ಭೇಟಿ ನೀಡಿ ತಮ್ಮ ಮಕ್ಕಳ ಕಲಿಕೆ ಗುಣಮಟ್ಟವನ್ನು ವಿಚಾರಿಸುತ್ತಿರಬೇಕು ಆಗ ಮಕ್ಕಳಲ್ಲಿ ಸಹ ಭಯ ಮೂಡುತ್ತದೆ.ಸರ್ಕಾರ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಒಂದರಿಂದ ಪಿ.ಯು.ಸಿ ವರೆಗೆ ಉಚಿತ ಶಿಕ್ಷಣ, ಸಮವಸ್ತç, ಪಠ್ಯಪುಸ್ತಕ, ಬಿಸಿಯೂಟ,ಭಾಳೆಹಣ್ಣು,ಚಿಕ್ಕಿ ರಾಗಿಮಾಲ್ಟ್ ಹೀಗೆ ಹತ್ತು ಹಲವು ಯೋಜನೆಗಳನ್ನು ಅನುಷ್ಟಾನಗೊಳಿಸುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರ್ಕಾರ ಒತ್ತು ನೀಡಲಾಗಿದ್ದು ಈ ಸೌಲಭ್ಯದ ಸದುಪಯೋಗಪಡೆಯಲು ಕರೆ ನೀಡಿದರು.
ಬರುವ ಶೈಕ್ಷಣಿಕ ವರ್ಷದಲ್ಲಿ ರಿಪ್ಪನ್ಪೇಟೆಗೆ ಕೆಪಿಎಸ್ಸಿ ಶಾಲೆ ಮಂಜೂರಾತಿಯಾಗಿದ್ದು ಸರ್ಕಾರ 60 ಕೋಟಿ ವೆಚ್ಚದ ಸುಸಜ್ಜಿತ ಕಟ್ಟಡ ನಿರ್ಮಾಣ ಕಾರ್ಯಕ್ಕೆ ನೀಲನಕ್ಷೆ ಸಿದ್ದಗೊಳಿಸಲಾಗಿ ಸರ್ಕಾರ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಇದರೊಂದಿಗೆ ಎಲ್.ಕೆ.ಜಿ.ಯಿಂದ ಪಿ.ಯು.ಸಿ ಒಂದೇ ಸೂರಿನಡಿ ನಡೆಸುವ ಸರ್ಕಾರದ ಯೋಜನೆಯಾಗಿದ್ದು ಹೊಸನಗರ ತಾಲ್ಲೂಕಿನ ರಿಪ್ಪನ್ಪೇಟೆ ಮತ್ತು ಮಾರುತಿಪುರ ಎರಡು ಕಡೆಯಲ್ಲಿ ಪ್ರಾರಂಭಗೊಳ್ಳಲಿದೆ ಎಂದ ಅವರು ಸಾಕಷ್ಟು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡಿದರೂ ಕೂಡಾ ನಮ್ಮ ಶಿಕ್ಷಕರು ಇರುವ ವ್ಯವಸ್ಥೆಯಲ್ಲಿ ಉತ್ತಮ ಶಿಕ್ಷಣ ನೀಡುತ್ತಿರುವ ಮೂಲಕ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ.ಪಬ್ಲಿಕ್ ಪರೀಕ್ಷೆಯಲ್ಲಿ ಹೊಸನಗರ ತಾಲ್ಲೂಕ್ ಎರಡನೇ ಸ್ಥಾನದಲ್ಲಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಎಸ್.ಡಿ.ಎಂ.ಸಿ.ಅಧ್ಯಕ್ಷ ಡಿ.ಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುಸ್ಕಾರ ವಿತರಿಸಿದರು.
ಗ್ರಾಮ ಪಂಚಾಯ್ತಿ ಆಧ್ಯಕ್ಷ ಧನಲಕ್ಷಿ,ಉಪಾಧ್ಯಕ್ಷ ಸುದೀಂದ್ರಪೂಜಾರಿ,ಗ್ರಾಮ ಪಂಚಾಯ್ತಿ ಸದಸ್ಯರಾದ ಡಿ.ಈ.ಮಧುಸೂದನ್,ಎನ್.ಚಂದ್ರೇಶ್, ಆಶೀಫ್ಭಾಷಾ,ಕೆರೆಹಳ್ಳಿ ರವೀಂದ್ರ,ಹನೀಫ್ ಭಾಷಾ, ಸಾರಾಭಿ, ವೇದಾವತಿ, ಹೆಚ್.ಎಸ್.ಗಣಪತಿ,ಕೆ.ಪ್ರಕಾಶ ಪಾಲೇಕರ್,ಟಿ.ಸುಂದರೇಶ್,ಎಸ್.ಡಿ.ಎಂ ಸಿ.ಸದಸ್ಯರಾದ ಲೀಲಾವತಿ,ಪುಣ್ಣೋಜಿರಾವ್, ಈಶ್ವರ,ನಿರಂಜನಮೂರ್ತಿ, ಆಶಾ,ಎಂ ರಫೀಕ್,ಉಷಾ,ಶೇಷಾಚಲ ಇನ್ನಿತರರು ಹಾಜರಿದ್ದರು.
ಉಪಪ್ರಾಚಾರ್ಯ ಕೆಸವಿನಮನೆ ರತ್ನಾಕರ್ ಸ್ವಾಗತಿಸಿದರು.ಸಹ ಶಿಕ್ಷಕ ಚಂದ್ರಪ್ಪ ನಿರೂಪಿಸಿದರು
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…