ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ
ಹೊಸನಗರ : ಇಲ್ಲಿನ ಮೇಲಿನ ಬೆಸಿಗೆ ಗ್ರಾಮದ ಯುವ ದಂಪತಿಗಳು ದಾರುಣ ಅಂತ್ಯ ಕಂಡಿರುವ ಘಟನೆ ನಡೆದಿದೆ.
ಹೊಸನಗರ ತಾಲೂಕು ಮೇಲಿನ ಬೆಸಿಗೆ ಗ್ರಾಮ ಪಂಚಾಯತಿಯ ಸುತ್ತ ಗ್ರಾಮದ ಕಿಲ್ಲೆ ಕ್ಯಾತರ ಕ್ಯಾಂಪಿನ 25ರ ಹರೆಯದ ಮಂಜುನಾಥ ಎಂಬುವವರು ಡಿಸೆಂಬರ್ 31ರ ಸಂಜೆ ಬೈಕಿನಲ್ಲಿ ಶಿಕಾರಿಪುರಕ್ಕೆ ಹೋಗಿದ್ದು ಶಿಕಾರಿಪುರದ ಬಳಿ ಬೈಕ್ ಅಪಘಾತವಾಗಿದ್ದು ಇಂದು ಬೆಳಿಗ್ಗೆ 9:30 ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ ಮೃತಪಟ್ಟಿದ್ದು ಸುದ್ದಿ ತಿಳಿದ ಆತನ ಪತ್ನಿ ಅಮೃತ(21) ಮನೆ ಶೆಡ್ಡಿನ ಜಂತಿಗೆ ತನ್ನ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೈಸೂರು ವಾಸಿಯಾಗಿದ್ದ ಅಮೃತ ರನ್ನು ಮಂಜುನಾಥ್ ಪ್ರೇಮಿಸಿ ಕೊಲ್ಲೂರಿನಲ್ಲಿ ವಿವಾಹವಾಗಿದ್ದರು.
ಸುದ್ದಿ ತಿಳಿದಾಕ್ಷಣ ಹೊಸನಗರ ಪೊಲೀಸ್ ನವರು ಸ್ಥಳಕ್ಕೆ ಭೇಟಿ ನೀಡಿ ಮಹಜರು ಕ್ರಮ ಜರುಗಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply
Cancel reply