ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ
ಹೊಸನಗರ : ಇಲ್ಲಿನ ಮೇಲಿನ ಬೆಸಿಗೆ ಗ್ರಾಮದ ಯುವ ದಂಪತಿಗಳು ದಾರುಣ ಅಂತ್ಯ ಕಂಡಿರುವ ಘಟನೆ ನಡೆದಿದೆ.
ಹೊಸನಗರ ತಾಲೂಕು ಮೇಲಿನ ಬೆಸಿಗೆ ಗ್ರಾಮ ಪಂಚಾಯತಿಯ ಸುತ್ತ ಗ್ರಾಮದ ಕಿಲ್ಲೆ ಕ್ಯಾತರ ಕ್ಯಾಂಪಿನ 25ರ ಹರೆಯದ ಮಂಜುನಾಥ ಎಂಬುವವರು ಡಿಸೆಂಬರ್ 31ರ ಸಂಜೆ ಬೈಕಿನಲ್ಲಿ ಶಿಕಾರಿಪುರಕ್ಕೆ ಹೋಗಿದ್ದು ಶಿಕಾರಿಪುರದ ಬಳಿ ಬೈಕ್ ಅಪಘಾತವಾಗಿದ್ದು ಇಂದು ಬೆಳಿಗ್ಗೆ 9:30 ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ ಮೃತಪಟ್ಟಿದ್ದು ಸುದ್ದಿ ತಿಳಿದ ಆತನ ಪತ್ನಿ ಅಮೃತ(21) ಮನೆ ಶೆಡ್ಡಿನ ಜಂತಿಗೆ ತನ್ನ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೈಸೂರು ವಾಸಿಯಾಗಿದ್ದ ಅಮೃತ ರನ್ನು ಮಂಜುನಾಥ್ ಪ್ರೇಮಿಸಿ ಕೊಲ್ಲೂರಿನಲ್ಲಿ ವಿವಾಹವಾಗಿದ್ದರು.
ಸುದ್ದಿ ತಿಳಿದಾಕ್ಷಣ ಹೊಸನಗರ ಪೊಲೀಸ್ ನವರು ಸ್ಥಳಕ್ಕೆ ಭೇಟಿ ನೀಡಿ ಮಹಜರು ಕ್ರಮ ಜರುಗಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…