ರಿಪ್ಪನ್‌ಪೇಟೆ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭ

ರಿಪ್ಪನ್‌ಪೇಟೆ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭ | ರಚನಾತ್ಮಕ ಸತ್ಕಾರ್ಯಗಳಿಂದ ಅಭಿವೃದ್ಧಿ ಸಾಧ್ಯ ; ರಂಭಾಪುರಿ ಜಗದ್ಗುರುಗಳು    


ರಿಪ್ಪನ್‌ಪೇಟೆ ; ಮಾನವನ ಬಾಳು ಉಜ್ವಲಗೊಳ್ಳಲು ನಿರಂತರ ಶ್ರಮ ಮತ್ತು ಪ್ರಯತ್ನ ಬೇಕು. ಕ್ರಿಯಾಶೀಲ ಜೀವನ ಶ್ರೇಯಸ್ಸಿಗೆ ಅಡಿಪಾಯ. ರಚನಾತ್ಮಕ ಸತ್ಕಾರ್ಯಗಳಿಂದ ಮಾತ್ರ ಸಮಾಜ ಮತ್ತು ಧರ್ಮ ಬಲಗೊಳ್ಳಲು ಸಾಧ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಬುಧವಾರ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಸಮಯ ಸ್ನೇಹ ಮತ್ತು ಆರೋಗ್ಯ ಇವುಗಳಿಗೆ ಬೆಲೆ ಕಟ್ಟಲಾಗದು. ಬಡತನ ಮನುಷ್ಯನಿಗೆ ಇರಬೇಕೇ ಹೊರತು ಮನಸ್ಸಿಗೆ ಇರಬಾರದು. ಶ್ರೀಮಂತಿಕೆ ಮನಸ್ಸಿಗಿರಬೇಕೇ ಹೊರತು ಮನುಷ್ಯನಿಗಿರಬಾರದು. ವೀರಶೈವ ಧರ್ಮ ಕಾಯಕ ತತ್ವಕ್ಕೆ ಬಹಳಷ್ಟು ಮಹತ್ವ ಕೊಟ್ಟಿದೆ. ಕಾಯಕವೇ ಕಳಾ ಚೈತನ್ಯವೆಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ಮತ್ತು ಕಾಯಕವೇ ಕೈಲಾಸವೆಂದು ಬಸವಣ್ಣನವರು ಹೇಳಿದ್ದಾರೆ. ಗುಣಾತ್ಮಕ ಚಿಂತನೆಗಳು ಶ್ರೇಯಸ್ಸಿಗೆ ಮೂಲ. ಮಾನಸಿಕವಾಗಿ ದೈಹಿಕವಾಗಿ ಸದೃಢನಾಗಿರುವ ವ್ಯಕ್ತಿ ಯಾರನ್ನೂ ಎಂದೂ ಅವಲಂಬಿಸಬೇಕಾಗಿಲ್ಲ. ಎಲ್ಲಾ ಕಡೆ ತಲೆ ಎತ್ತಿ ನಿಲ್ಲುವವನು ದೊಡ್ಡ ಮನುಷ್ಯ ಅಲ್ಲ. ಎಲ್ಲಿ ತಲೆ ತಗ್ಗಿಸಿ ನಿಲ್ಲಬೇಕು ಅಂತಾ ಗೊತ್ತಿರುವವನೇ ನಿಜವಾಗಿ ದೊಡ್ಡ ಮನುಷ್ಯ. ಆಹಾರ ಅರಿವೆ ಆವಾಸಗಳನ್ನು ಬದಲಾಯಿಸಿದಾಕ್ಷಣ ನೆಮ್ಮದಿ ಸಿಗುತ್ತದೆ ಎನ್ನಲಾಗದು. ರಿಪ್ಪನ್‌ಪೇಟೆ ವೀರಶೈವ ಸಮಾಜ ಬಾಂಧವರು “ಶಿವಮಂದಿರ” ನಿರ್ಮಾಣ ಮಾಡುವುದರ ಮೂಲಕ ಗೌರವ ತಂದಿದ್ದಾರೆ. ಈ ಸಭಾ ಭವನದ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಹಳಷ್ಟು ಸಹಕಾರ ಕೊಟ್ಟಿರುವುದು ಸಮಾಧಾನದ ಸಂಗತಿ. ಭವಿಷ್ಯತ್ತಿನಲ್ಲಿ ಇನ್ನಷ್ಟು ಜನ ಹಿತಾತ್ಮಕ ಅಭಿವೃದ್ಧಿ ಕಾರ್ಯಗಳು ನಡೆಯಲೆಂದು ಶ್ರೀ ರಂಭಾಪುರಿ ಜಗದ್ಗುರುಗಳು ಹಾರೈಸಿದರು.

ಸಮಾರಂಭ ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಮನುಷ್ಯ ಮನಸ್ಸು ಮಾಡಿದರೆ ಏನೆಲ್ಲ ಸಾಧನೆಯನ್ನು ಮಾಡಲು ಸಾಧ್ಯ. ದೇಹವನ್ನು ದುಡಿಮೆಗೆ ಮನಸ್ಸನ್ನು ಭಗವಂತನಿಗೆ ಅರ್ಪಿಸಿ ನಡೆದಾಗ ಜೀವನ ಸಾರ್ಥಕ. ಬಿ.ಎಸ್.ಯಡಿಯೂರಪ್ಪನವರು ಈ ಸಭಾಭವನ ನಿರ್ಮಾಣಕ್ಕೆ ಅಮೂಲ್ಯ ಕೊಡುಗೆ ಕೊಟ್ಟಿದ್ದಾರೆ. ವೀರಶೈವ ಸಮಾಜ ಬಾಂಧವರು ಸಾಮರಸ್ಯ ಸದ್ಭಾವನೆಗಳನ್ನು ಹೊಂದಿ ಸಮಾಜ ಕಟ್ಟಿ ಬೆಳೆಸುವ ಮತ್ತು ರಚನಾತ್ಮಕ ಕಾರ್ಯಗಳನ್ನು ಮಾಡಿದ್ದು ಹೆಮ್ಮೆಯ ಸಂಗತಿ. ಶ್ರೀ ರಂಭಾಪುರಿ ಜಗದ್ಗುರುಗಳವರು ಧರ್ಮ ಸಂಸ್ಕೃತಿ ಪರಂಪರೆ ಕಾಯಕ ಜೀವನ ಶ್ರೇಯಸ್ಸಿಗಾಗಿ ಸದಾ ಶ್ರಮಿಸುತ್ತಿರುವುದು ಭಕ್ತ ಸಂಕುಲಕ್ಕೆ ಹರುಷ ತಂದಿದೆ ಎಂದರು.

ಶ್ರೀ ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಡಾ|| ಕೆ.ಬಿ.ಕಮಲಾಕರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಮನುಷ್ಯ ಜೀವನದಲ್ಲಿ ಹಣ ಗಳಿಕೆ ಒಂದೇ ಗುರಿಯಲ್ಲ. ಅದರೊಂದಿಗೆ ಸಂಸ್ಕೃತಿ ಮತ್ತು ಆದರ್ಶಗಳನ್ನು ಬೆಳೆಸುವ ನಿಟ್ಟಿನಲ್ಲಿ ಶ್ರಮಿಸಬೇಕು. ರಿಪ್ಪನ್‌ಪೇಟೆ ವೀರಶೈವ ಸಮಾಜ ಬಾಂಧವರು ಶಿವಮಂದಿರ ನಿರ್ಮಾಣಗೊಳಿಸಿ ಇಂದು ಉದ್ಘಾಟಿಸುತ್ತಿರುವುದು ಸಂತೋಷದ ಸಂಗತಿ ಎಂದರು.

ಮುಖ್ಯ ಅತಿಥಿಗಳಾಗಿ ಶಾಸಕ, ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ಡಿಸಿಸಿ ಬ್ಯಾಂಕ ಅಧ್ಯಕ್ಷ ಡಾ|| ಆರ್.ಎಂ.ಮಂಜುನಾಥಗೌಡ, ಮಾಜಿ ಸಚಿವ ಹರತಾಳು ಹಾಲಪ್ಪ, ಗ್ರಾಮ ಪಂ. ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಭಾಗವಹಿಸಿದ್ದರು.

ಶ್ರೀ ಬಸವೇಶ್ವರ ವೀರಶೈವ ಸಮಾಜದ ಹಿರಿಯ ಉಪಾಧ್ಯಕ್ಷ ಜಿ.ಎಂ. ದುಡರಾಜಪ್ಪಗೌಡ, ಉಪಾಧ್ಯಕ್ಷ ಎಂ.ಆರ್.ಶಾಂತವೀರಪ್ಪಗೌಡ, ಅ.ಭಾ.ವೀ.ಮಹಾಸಭೆ ಹೊಸನಗರ ತಾಲೂಕು ಘಟಕದ ಅಧ್ಯಕ್ಷ ಎಂ.ಎಸ್.ಉಮೇಶ್ ಹಾಗೂ ಗ್ರಾಮ ಪಂಚಾಯತಿ ಉಪಾಧ್ಯಕ್ಷರು ಹಾಗೂ ಎಲ್ಲ ಸದಸ್ಯರು ಉಪಸ್ಥಿತರಿದ್ದರು.

ನೇತೃತ್ವ ವಹಿಸಿದ ಶ್ರೀಮದ್ ರಂಭಾಪುರಿ ಖಾಸಾ ಶಾಖಾ ಮಳಲಿ ಸಂಸ್ಥಾನ ಮಠದ ಡಾ|| ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಶಿವಮಂದಿರ ಇತಿಹಾಸದಲ್ಲಿ ಇಂದು ಅವಿಸ್ಮರಣೀಯ ದಿನ. ಸಕಲ ಸದ್ಭಕ್ತರ ಸಹಕಾರ ಮತ್ತು ಅಭಿಮಾನದಿಂದಾಗಿ ಬಹು ದೊಡ್ಡ ಕಾರ್ಯ ಮಾಡಿದ್ದು ಮರೆಯಲಾಗದು. ಶಿವಮಂದಿರ ಉದ್ಘಾಟನೆಗಾಗಿ ಶ್ರೀ ರಂಭಾಪುರಿ ಜಗದ್ಗುರುಗಳವರನ್ನು ಬರಮಾಡಿಕೊಂಡು ಮತ್ತೊಂದು ದಾಖಲೆಯನ್ನು ನಿರ್ಮಿಸಿದ ಶ್ರೇಯಸ್ಸು ತಮ್ಮದಾಗಿದೆ ಎಂದರು.

ಹಲವಾರು ಗಣ್ಯರಿಗೆ ಮತ್ತು ದಾನಿಗಳಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆಯಿತ್ತು ಶುಭ ಹಾರೈಸಿದರು. ಎಲ್ಲಾ ಭಕ್ತರಿಗೆ ಪ್ರಸಾದ ವಿನಿಯೋಗ ಜರುಗಿತು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

18 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

18 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

18 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

24 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago