ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು

ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು

ಶಿವಮೊಗ್ಗ: ತಂದೆ ಮಾಡಿದ್ದ ಸಾಲಕ್ಕೆ ಮಗನನ್ನು ಅಪಹರಣ ಮಾಡಿ, ಆತನಿಗೆ ಹಲ್ಲೆ ನಡೆಸಿದ್ದಲ್ಲದೆ ಆತನ ಕಾರು ಮಾರಾಟಕ್ಕೆ ದಾಖಲೆಪತ್ರಕ್ಕೆ  ಸಹಿ ಹಾಕಿಸಿಕೊಂಡ  ಘಟನೆ  ಬಗ್ಗೆ  ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆಯ ವಿವರ:

ಚಿಕ್ಕಲ್ ನಿವಾಸಿ ನಾಗೇಶ್ ಅಪರಹಣಕ್ಕೊಳಗಾಗಿ ದೂರು ನೀಡಿದವರು. ಅವರ ತಂದೆ ಸಿದ್ದೇಗೌಡ ಅಡಿಕೆ ವ್ಯಾಪಾರ ಮಾಡುತ್ತಿದ್ದು, ಕೊರೊನ ಹಿನ್ನೆಲೆಯಲ್ಲಿ   ಮೃತಪಟ್ಟಿದ್ದರು. ಈ ಮಧ್ಯೆ  ತಂದೆಯಿಂದ ಅಡಿಕೆ ಖರೀದಿ ಮಾಡಿದವರು ಸರಿಯಾಗಿ ಹಣವನ್ನು ವಾಪಾಸ್ ನೀಡಿರಲಿಲ್ಲ. ಇದರಿಂದ ಹಣದ ಅಡಚಣೆ ಆಗಿತ್ತು. ಸಿದ್ದೇಗೌಡರಿಗೆ ಅಡಿಕೆ ಕೊಟ್ಟವರಿಗೂ ಹಣ ಕೊಡುವುದು ಬಾಕಿ ಇತ್ತು,   ಇವರಿಗೆ ಮಗ ನಾಗೇಶ್ ಹಣವನ್ನು ಕೊಡಬೇಕಾಗಿತ್ತು.  ಹಿರಿಯ ಸಮ್ಮುಖದಲ್ಲಿ ಈ ಬಗ್ಗೆ ಮಾತುಕತೆ ಮಾಡಿ ಗ್ರಾಹಕರಿಗೆ ಸ್ವಲ್ಪ ಸ್ವಲ್ಪ ಹಣವನ್ನು ಕೊಟ್ಟು ತೀರಿಸಲಾಗಿತ್ತು,ಈ ಪೈಕಿ ,  ಖಾಸೀಫ್ ಎನ್ನುವವರು  ನಾಗೇಶ್‌ಗೆ ನಿಮ್ಮ  ತಂದೆ ೧೭ ಲಕ್ಷ ಹಣ ಕೊಡಬೇಕೆಂದು ಹೇಳಿದ್ದನು. ಅಷ್ಟೊಂದು ಹಣ ಕೊಡಲು ಆಗುವುದಿಲ್ಲ. ಎಂದು ನಾಗೇಶ್ ಹೇಳಿ  ೧೧ ಲಕ್ಷ ಹಣವನ್ನು ಕೊಟ್ಟು ಇಷ್ಟೇ ಹಣ ಸಾಧ್ಯ ಎಂದಿದ್ದರು. ನಂತರದ ದಿನಗಳಲ್ಲಿ ಖಾಸೀಫ್ ಉಳಿದ ಹಣ ಕೊಡು  ಎಂದು ಬೆನ್ನುಬಿದ್ದಿದ್ದರು.

ಜನವರಿ  ೧೪ ರಂದು ನಾಗೇಶ್ ನೆಹರು ಸ್ಟೇಡಿಯಂ ಪಕ್ಕದ  ಪೆಟ್ ಪ್ಲಾನೆಟ್ ಆಸ್ಪತ್ರೆಯಲ್ಲಿ  ನಾಯಿಮರಿಗೆ ಚಿಕಿತ್ಸೆ ಕೊಡಿಸಲು ಬಂದಿದ್ದರು. ಆಸ್ಪತ್ರೆಯ ಹೊರಗಡೆ ಮೊಬೈಲ್‌ನಲ್ಲಿ ಮಾತನಾಡುತಿದ್ದಾಗ ಖಾಸೀಫ್ ಇಬ್ಬರ ಜೊತೆ ಕಾರಿನಲ್ಲಿ ಆತನನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ   ಹಾಯ್‌ಹೊಳೆ ಹತ್ತಿರದ ಒಂದು ತೋಟದ ಬಳಿ ಶೆಡ್‌ಗೆ ಕರೆದುಕೊಂಡು ಹೋಗಿ ಹಣ ಕೊಡು ಅಂದರೆ ಕೊಡುತ್ತಿಲ್ಲ. ಈ ದಿನ ನಿನ್ನನ್ನು ಜೀವಂತವಾಗಿ ಬಿಡುವುದಿಲ್ಲ ಎಂದು ಕೈಗಳಿಂದ ಹೊಡೆದು ಅವಾಚ್ಯವಾಗಿ ಬೈದು ಬಲವಂತವಾಗಿ ನಾಗೇಶ್ ಬಳಿಯಿದ್ದ ಕಾರಿನ ಕೀ ಯನ್ನು ಕಿತ್ತುಕೊಂಡು ಕಾರನ್ನು ತನ್ನ ಹೆಸರಿಗೆ ಮಾರಾಟ ಮಾಡಿದಂತೆ ಫಾರಂಗಳಿಗೆ ಸಹಿ ಹಾಕಿಸಿಕೊಂಡು ಆತನ್ನು ಬಿಟ್ಟಿದ್ದರು.

ಈ ಘಟನೆ ನಂತರ ಮನೆಗೆ ಬಂದ ನಾಗೇಶ್ ಇವರ  ವಿರುದ್ಧ ಕಠಿಣ ಕ್ರಮಜರುಗಿಸುವಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

9 hours ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

10 hours ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

10 hours ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

10 hours ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

18 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

1 day ago