ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು

ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು

ಶಿವಮೊಗ್ಗ: ತಂದೆ ಮಾಡಿದ್ದ ಸಾಲಕ್ಕೆ ಮಗನನ್ನು ಅಪಹರಣ ಮಾಡಿ, ಆತನಿಗೆ ಹಲ್ಲೆ ನಡೆಸಿದ್ದಲ್ಲದೆ ಆತನ ಕಾರು ಮಾರಾಟಕ್ಕೆ ದಾಖಲೆಪತ್ರಕ್ಕೆ  ಸಹಿ ಹಾಕಿಸಿಕೊಂಡ  ಘಟನೆ  ಬಗ್ಗೆ  ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆಯ ವಿವರ:

ಚಿಕ್ಕಲ್ ನಿವಾಸಿ ನಾಗೇಶ್ ಅಪರಹಣಕ್ಕೊಳಗಾಗಿ ದೂರು ನೀಡಿದವರು. ಅವರ ತಂದೆ ಸಿದ್ದೇಗೌಡ ಅಡಿಕೆ ವ್ಯಾಪಾರ ಮಾಡುತ್ತಿದ್ದು, ಕೊರೊನ ಹಿನ್ನೆಲೆಯಲ್ಲಿ   ಮೃತಪಟ್ಟಿದ್ದರು. ಈ ಮಧ್ಯೆ  ತಂದೆಯಿಂದ ಅಡಿಕೆ ಖರೀದಿ ಮಾಡಿದವರು ಸರಿಯಾಗಿ ಹಣವನ್ನು ವಾಪಾಸ್ ನೀಡಿರಲಿಲ್ಲ. ಇದರಿಂದ ಹಣದ ಅಡಚಣೆ ಆಗಿತ್ತು. ಸಿದ್ದೇಗೌಡರಿಗೆ ಅಡಿಕೆ ಕೊಟ್ಟವರಿಗೂ ಹಣ ಕೊಡುವುದು ಬಾಕಿ ಇತ್ತು,   ಇವರಿಗೆ ಮಗ ನಾಗೇಶ್ ಹಣವನ್ನು ಕೊಡಬೇಕಾಗಿತ್ತು.  ಹಿರಿಯ ಸಮ್ಮುಖದಲ್ಲಿ ಈ ಬಗ್ಗೆ ಮಾತುಕತೆ ಮಾಡಿ ಗ್ರಾಹಕರಿಗೆ ಸ್ವಲ್ಪ ಸ್ವಲ್ಪ ಹಣವನ್ನು ಕೊಟ್ಟು ತೀರಿಸಲಾಗಿತ್ತು,ಈ ಪೈಕಿ ,  ಖಾಸೀಫ್ ಎನ್ನುವವರು  ನಾಗೇಶ್‌ಗೆ ನಿಮ್ಮ  ತಂದೆ ೧೭ ಲಕ್ಷ ಹಣ ಕೊಡಬೇಕೆಂದು ಹೇಳಿದ್ದನು. ಅಷ್ಟೊಂದು ಹಣ ಕೊಡಲು ಆಗುವುದಿಲ್ಲ. ಎಂದು ನಾಗೇಶ್ ಹೇಳಿ  ೧೧ ಲಕ್ಷ ಹಣವನ್ನು ಕೊಟ್ಟು ಇಷ್ಟೇ ಹಣ ಸಾಧ್ಯ ಎಂದಿದ್ದರು. ನಂತರದ ದಿನಗಳಲ್ಲಿ ಖಾಸೀಫ್ ಉಳಿದ ಹಣ ಕೊಡು  ಎಂದು ಬೆನ್ನುಬಿದ್ದಿದ್ದರು.

ಜನವರಿ  ೧೪ ರಂದು ನಾಗೇಶ್ ನೆಹರು ಸ್ಟೇಡಿಯಂ ಪಕ್ಕದ  ಪೆಟ್ ಪ್ಲಾನೆಟ್ ಆಸ್ಪತ್ರೆಯಲ್ಲಿ  ನಾಯಿಮರಿಗೆ ಚಿಕಿತ್ಸೆ ಕೊಡಿಸಲು ಬಂದಿದ್ದರು. ಆಸ್ಪತ್ರೆಯ ಹೊರಗಡೆ ಮೊಬೈಲ್‌ನಲ್ಲಿ ಮಾತನಾಡುತಿದ್ದಾಗ ಖಾಸೀಫ್ ಇಬ್ಬರ ಜೊತೆ ಕಾರಿನಲ್ಲಿ ಆತನನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ   ಹಾಯ್‌ಹೊಳೆ ಹತ್ತಿರದ ಒಂದು ತೋಟದ ಬಳಿ ಶೆಡ್‌ಗೆ ಕರೆದುಕೊಂಡು ಹೋಗಿ ಹಣ ಕೊಡು ಅಂದರೆ ಕೊಡುತ್ತಿಲ್ಲ. ಈ ದಿನ ನಿನ್ನನ್ನು ಜೀವಂತವಾಗಿ ಬಿಡುವುದಿಲ್ಲ ಎಂದು ಕೈಗಳಿಂದ ಹೊಡೆದು ಅವಾಚ್ಯವಾಗಿ ಬೈದು ಬಲವಂತವಾಗಿ ನಾಗೇಶ್ ಬಳಿಯಿದ್ದ ಕಾರಿನ ಕೀ ಯನ್ನು ಕಿತ್ತುಕೊಂಡು ಕಾರನ್ನು ತನ್ನ ಹೆಸರಿಗೆ ಮಾರಾಟ ಮಾಡಿದಂತೆ ಫಾರಂಗಳಿಗೆ ಸಹಿ ಹಾಕಿಸಿಕೊಂಡು ಆತನ್ನು ಬಿಟ್ಟಿದ್ದರು.

ಈ ಘಟನೆ ನಂತರ ಮನೆಗೆ ಬಂದ ನಾಗೇಶ್ ಇವರ  ವಿರುದ್ಧ ಕಠಿಣ ಕ್ರಮಜರುಗಿಸುವಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

7 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

11 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

11 hours ago

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು!

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…

23 hours ago

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ Karnataka Cabinet Expansion 2026:…

1 day ago

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: “ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ” ಘೋಷಣೆ

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: "ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ" ಘೋಷಣೆ Sagar MLA Beluru…

1 day ago