ಸೌಂದರ್ಯವೇ ಮುಳುವಾಯ್ತು ಕುಂಭಮೇಳ ಸುಂದರಿಗೆ..!

ಸೌಂದರ್ಯವೇ ಮುಳುವಾಯ್ತು ಕುಂಭಮೇಳ ಸುಂದರಿಗೆ..!

ಪ್ರಯಾಗ್ ರಾಜ್‌ನಲ್ಲಿ ಮಹಾ ಕುಂಭಮೇಳ ಉತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಪ್ರತಿ ದಿನ ನೂರಾರು ಭಕ್ತರು ಪ್ರಪಂಚದಾದ್ಯಂತ ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕುಂಭಮೇಳದಲ್ಲಿ ತನ್ನ ಸೌಂದರ್ಯದ ಮೂಲಕ ವೈರಲ್‌ ಆಗಿದ್ದ ಯುವತಿ ಗೋಳು ಹೇಳತಿರದ್ದಾಗಿದೆ. ಕುಂಭಮೇಳದ ಆಧ್ಯಾತ್ಮಿಕ ಉತ್ಸವಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಸೇರುತ್ತಾರೆ. ಕೋಟ್ಯಂತರ ಭಕ್ತರು ಈಗಾಗಲೇ ಪುಣ್ಯ ಸ್ನಾನ ಮಾಡಿದ್ದಾರೆ. ಸುಮಾರು 13 ಅಖಾಡಗಳಿಗೆ ಸೇರಿದ ಅಘೋರಿಗಳು, ನಾಗಾ ಸಾಧುಗಳು ಮತ್ತು  ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ.. ಇದರ ನಡುವೆ ವೈರಲ್‌ ಆಗಿದ್ದ ಚೆಲುವೆಗೆ ಯೂಟ್ಯೂಬರ್‌ಗಳ ಕಾಟ ಹೆಚ್ಚಾಗಿಬಿಟ್ಟಿದೆ..

ಹೌದು.. ಪ್ರಸ್ತು ಕುಂಭಮೇಳ ದೇಶದಾದ್ಯಂತ ಸುದ್ದಿಯಲ್ಲಿರುವ ವಿಷಯ. ಈಗಾಗಲೇ ಐಐಟಿ ಬಾಬಾ, ಗ್ಲಾಮರಸ್ ಸಾಧ್ವಿ ಹರ್ಷರಿಚಾರ್ಯ ಒಂದು ರೇಂಜ್ ನಲ್ಲಿ ಟ್ರೆಂಡಿಂಗ್ ಆಗಿದ್ದಾರೆ. ಇವರ ನಡುವೆ.. ವೈರಲ್‌ ಆದ ರುದ್ರಾಕ್ಷಿ ಮಾರುವ ಯುವತಿಯನ್ನು ಸಂದರ್ಶಿಸಲು ಹಲವು ಮಾಧ್ಯಮಗಳು ಪೈಪೋಟಿ ನಡೆಸುತ್ತಿವೆ.

ಕಳೆದ ನಾಲ್ಕೈದು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಎಲ್ಲಿ ನೋಡಿದರೂ ಈಕೆಯ ಸೌಂದರ್ಯ ವಿಚಾರವೇ ಸುದ್ದಿಯಾಗುತ್ತಿದೆ.. ಈ ಚೆಲುವೆಯ ಫೋಟೋಗಳು ಮತ್ತು ವಿಡಿಯೋಗಳು ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿವೆ.. ಆಕರ್ಷಕ ಕಣ್ಣು, ಕೃಷ್ಣ ವರ್ಣ.. ಸುಂದರವಾದ ನಗುವಿನ ಮೂಲಕ ಗಮನಸೆಳೆದಿದ್ದ ರೂಪವತಿಗೆ ವ್ಯಾಪರ ಮಾಡಲೂ ಜನ ಬಿಡುತ್ತಿಲ್ಲ..
ಕುಂಭಮೇಳದಲ್ಲಿ ಮಾಲೆ ಮತ್ತು ರುದ್ರಾಕ್ಷಗಳನ್ನು ಮಾರುತ್ತ ಜೀವನ ಸಾಗಿಸುತ್ತಿದ್ದ ಮೊನಾಲಿಸಾ.. ಇಂದೋರ್‌ನ ಹುಡುಗಿ. ಇದೀಗ ಈಕೆಯನ್ನು ಸಂದರ್ಶಿಸಲು ಯೂಟ್ಯೂಬರ್‌ಗಳು ಹಿಂದೆ ಬಿದ್ದಿದ್ದಾರೆ. ಇದರಿಂದ ಈಕೆ ವ್ಯಾಪರಕ್ಕೆ ಅಡ್ಡಿಯಾಗುತ್ತಿದೆ. ಅದಕ್ಕಾಗಿ ಎಲ್ಲರಿಂದ ತಪ್ಪಿಸಿಕೊಳ್ಳಲು ಸಾಧುಗಳ ಟೆಂಟ್‌ ಮೊರೆ ಹೋಗಬೇಕಾಗಿದೆ.

ಮೊನಾಲಿಸಾಗೆ ಇದು ವ್ಯಾಪಾರದ ಸಮಯ ಆದರೆ ಸಂದರ್ಶಕರು ಈಕೆಯ ಬೆನ್ನು ಹತ್ತಿದ್ದು ನಷ್ಟ ಅನುಭವಿಸಬೇಕಾಗಿದೆ. ಸೌಂದರ್ಯವೇ ಈಕೆಯ ಹೊಟ್ಟೆಗೆ ಶಾಪವಾಗಿ ಪರಿಣಮಿಸುತ್ತಿದೆ. ಇನ್ನಾದರೂ ಜನ ಆಕೆಯನ್ನ ಆಕೆಯ ಪಾಡಿಗೆ ಬಿಟ್ಟರೆ ತುಂಬಾ ಒಳ್ಳೆಯದು ಅಲ್ವಾ..

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

3 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

5 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

22 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

23 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago