ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ

ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ

ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಶುಕ್ರವಾರ ಸಂಜೆ ಗೋದೂಳಿ ಲಗ್ನದಲ್ಲಿ ಅದ್ದೂರಿ ಮಂತ್ರ ಮಾಂಗಲ್ಯವೊಂದು ಜರುಗಿದೆ. ಕುವೆಂಪು ಸದಾಶಯದ ಮಂತ್ರ ಮಾಂಗಲ್ಯ ಎಲ್ಲಾ ರೀತಿಯ ಸರಳ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಸಮಾರಂಭವೊಂದು ಹೈಫೈ ರೂಪದಲ್ಲಿ ನಡೆದಿದೆ.

ಹೇಮಾಂಗಣದ ಮುಂಭಾಗದಲ್ಲಿ ತಳಿರುತೋರಣಗಳಿಂದ ಸಿಂಗರಿಸಿ, ಫಲ, ಪುಷ್ಪಗಳನ್ನು ಬಳಸಿಕೊಂಡು ವಿಭಿನ್ನವಾಗಿ ಮಂತ್ರ ಮಾಂಗಲ್ಯ ವಿವಾಹ ಮಾಡಲಾಗಿದೆ.

ಕುವೆಂಪು ಸರಳ ನಿಯಮಗಳಿಂದ ತಮ್ಮ ಪುತ್ರ ತೇಜಸ್ವಿ ವಿವಾಹವನ್ನು ಮಾಡಿದ್ದರು. ಆಮಂತ್ರಣ ಪತ್ರಿಕೆಯಲ್ಲಿ ಬಿಡುವಿದ್ದ ಸಂದರ್ಭ ವಧುವರರ ಸತ್ಕಾರ ಸ್ವೀಕರಿಸಿ ಎನ್ನುವ ಒಳಾರ್ಥದಲ್ಲಿ ವಿವಾಹವನ್ನು ಸರಳೀಕರಣಗೊಳಿಸಿದ್ದರು. ಆದರೆ ಅದೀಗ ಮುಂದುವರೆದು ಶ್ರೀಮಂತ ಕುಟುಂಬಗಳ ಸ್ವತ್ತಾಗಿದ್ದು ಸರಳತೆಯ ವಿವಾಹವನ್ನು ವೈಭವೀಕರಿಸಿ ಜಗತ್ತಿಗೆ ಕುವೆಂಪು ಸಂದೇಶ ಸಾರುವ ಹಂತಕ್ಕೆ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ತಮ್ಮ ಹೃದಯ ವೈಶಾಲ್ಯತೆಯನ್ನು ತೋರಿಸಿಕೊಳ್ಳುತ್ತಿದೆ‌.

ಹೇಮಾಂಗಣದ ಮುಂಭಾಗದಲ್ಲಿ ಬಾಳೆಯ ಗಿಡಗಳನ್ನು ಬಳಸಿಕೊಂಡು ಸಿಗರಿಸಿದರೆ. ವೇದಿಕೆಯಾಗಿ ಕಮಲದ ಹೂವುಗಳನ್ನು ಬಳಕೆ ಮಾಡಿಕೊಂಡು ವಧು-ವರರ ಕೈಯಿಂದ ಸರಳತೆಯ ಪಠ್ಯವನ್ನು ಚಾಚು ತಪ್ಪದೆ ಹೇಳಿಸಿದರೆ. ಮುಂಭಾಗದ ಮರಗಳಿಗೆ ವಿದ್ಯುತ್ ದೀಪಾಲಂಕಾರಗಳನ್ನು ಮಾಡಿ ಕುಪ್ಪಳಿಯ ಶಾಂತ ನಿಸರ್ಗದ ಪರಿಚಯ ಮಾಡಿಸಿಕೊಟ್ಟರು. ಊಟಕ್ಕೆ ರೌಂಡ್ ಟೇಬಲ್ ಅಳವಡಿಸಿ ಅದಕ್ಕೆ ಶ್ವೇತ ವಸ್ತ್ರಗಳನ್ನು ಅಲಂಕರಿಸಿ ಯಾರು ಊಟವನ್ನು ಕಿಂಚಿತ್ತೂ ಹಾಳು ಮಾಡದಂತೆ ಜಾಗ್ರತೆವಹಿಸಿದರು. ಊಟಕ್ಕೂ ಮುನ್ನ ಆಯಕಟ್ಟಿನ ಜಾಗದಲ್ಲಿ ಬೆಂಗಳೂರಿನಿಂದ ಬಂದ ಅತಿಥಿಗಳಿಗೆ ಸುರಪಾನದ ಹಿತ ನೀಡಿದರು. ಮೂರ್ನಾಲ್ಕು ರೆಸಾರ್ಟ್ ಗಳಿಗೆ ಈ ಮದುವೆ ದೊಡ್ಡ ಲಾಭ ತಂದುಕೊಟ್ಟಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ A physical education teacher…

4 hours ago

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು A tragic tipper-bike…

7 hours ago

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500…

7 hours ago

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

1 day ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

1 day ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

1 day ago