ಪಿಡಿಓ ವರ್ಗಾವಣೆಗೆ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರಿಂದ ಆಗ್ರಹ – ಹೋರಾಟದ ಎಚ್ಚರಿಕೆ

ಪಿಡಿಓ ವರ್ಗಾವಣೆಗೆ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರಿಂದ ಆಗ್ರಹ – ಹೋರಾಟದ ಎಚ್ಚರಿಕೆ

HOSANAGARA | ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ಪಿಡಿಒ ರವಿ ಎಸ್ ಅವರನ್ನು ಶೀಘ್ರವಾಗಿ ಬೇರೆ ವರ್ಗಾಯಿಸಬೇಕು ಎಂದು ಆಗ್ರಹಿಸಿ ಎಂ ಗುಡ್ಡೆಕೊಪ್ಪ ಗ್ರಾಪಂ ಅಧ್ಯಕ್ಷ  ಪ್ರವೀಣ್ ಜಿ ಎನ್ ತಾಪಂ ಕಾರ್ಯನಿರ್ವಾಹಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಕಾರ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಪಿಡಿಓ ರವಿ ಎಸ್ ರವರನ್ನು ಕೂಡಲೆ ವರ್ಗಾವಣೆಗೊಳಿಸಿ ಇಲ್ಲವಾದಲ್ಲಿ ದಿನಾಂಕ 7-1-2025 ರಂದು ತಾಲೂಕು ಪಂಚಾಯತ್ ಕಚೇರಿ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಚ್ಚರಿಸಲಾಗಿದೆ.

ಮನವಿಯಲ್ಲಿ ಎಂ ಗುಡ್ಡೆ ಕೊಪ್ಪ ಗ್ರಾಮ ಪಂಚಾಯತ್ ಪಿಡಿಒ ರವಿ ಎಸ್ ಅವರು ಸಾರ್ವಜನಿಕರ ಇತಿಮಿತಿ ಸಮಯದೊಳಗೆ ಕೆಲಸವನ್ನು ನಿರ್ವಹಿಸದೆ ಅವರನ್ನು ಪದೇಪದೇ ಕಚೇರಿಗೆ ಅಲೆದಾಡಿಸುವುದು ಸಾರ್ವಜನಿಕರ ಅರ್ಜಿಯನ್ನ ಮೂರರಿಂದ ನಾಲ್ಕು ತಿಂಗಳು ಕಾಲ ವಿಲೇವಾರಿ ಮಾಡದೆ ಇಟ್ಟುಕೊಳ್ಳುವುದು ಹಾಗೂ ಗ್ರಾಮ ಪಂಚಾಯತ್ ಸದಸ್ಯರೊಂದಿಗೆ ಅಗೌರವದಿಂದ ವರ್ತಿಸಿ ಹಗುರವಾಗಿ ಮಾತನಾಡುವುದು ಅಲ್ಲದೆ ಸಾರ್ವಜನಿಕರಿಗೆ ಮತ್ತು ಸದಸ್ಯರಿಗೆ ಬೇಜವಾಬ್ದಾರಿಯ ಹೇಳಿಕೆಗಳನ್ನು ನೀಡುವ ಜೊತೆಗೆ ಸಾಮಾನ್ಯ ಸಭೆಯ ನಿರ್ಣಯವನ್ನು ಅಜೆಂಡ ರೀತಿ ಬರೆಯದೆ ಮತ್ತು ಸಾರ್ವಜನಿಕರ ಅರ್ಜಿಗಳನ್ನ ಸಭೆಯಲ್ಲಿ ನಿರ್ಣಯಿಸಿದ ನಿರ್ಣಯವನ್ನ ಬರೆಯದೆ ಹಾಗೂ ಅಧ್ಯಕ್ಷರು ಮತ್ತು ಸದಸ್ಯರ ಗಮನಕ್ಕೆ ಬಾರದೆ ಸದರಿ ನಿರ್ಣಯ ಪುಸ್ತಕದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಸಾರ್ವಜನಿಕರ ವಿರುದ್ಧ ಇರುವ ರೀತಿ ನಿರ್ಣಯವನ್ನು ತಿರುಚಿ ಬರೆದಿರುವುದು.ಈ ಸ್ವತ್ತು ಪುಸ್ತಕವನ್ನು ನಿರ್ವಹಿಸದೆ ಇರುವುದು ಹಾಗೂ ಈ ಸ್ವತ್ತಿಗೂ ರಶೀದಿಗು ತಾಳೆ ಬಾರದೆ ಪಂಚಾಯಿತಿ ಗೆ ನಷ್ಟವನ್ನುಂಟು ಮಾಡುತ್ತಿದ್ದಾರೆ.

ಈ ಬಗ್ಗೆ ಹಲವು ಬಾರಿ ಅವರ ವರ್ಗಾವಣೆಗೆ ಹಾಗೂ ಅವರಿಂದ ಗ್ರಾಮ ಪಂಚಾಯಿತಿಗೆ ಆಗುತ್ತಿರುವಂತಹ ಸಮಸ್ಯೆಗಳ ಕುರಿತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲಾ ಪಂಚಾಯತ್ ರವರಿಗೆ ಸರ್ವ ಸದಸ್ಯರು ಮನವಿಯನ್ನು ನೀಡಿದ್ದರು ಇಲ್ಲಿಯವರೆಗೆ ಅವರ ವಿರುದ್ಧ ಯಾವುದೇ ರೀತಿಯ ಕ್ರಮವನ್ನು ಕೈಗೊಳ್ಳದೆ ಇರುವುದ ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದ್ದು ಈ ಮೂಲಕ ಅವರ ವಿರುದ್ಧ ಸೂಕ್ತ ಕ್ರಮವನ್ನು ಕೈಗೊಳ್ಳದಿದ್ದಲ್ಲಿ ಮೇಲೆ ತಿಳಿಸಿದ ದಿನಾಂಕದಂದು ತಾಲೂಕ್ ಪಂಚಾಯಿತಿ ಮುಂಭಾಗ ಧರಣಿಯನ್ನ ಮಾಡುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ..

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

15 hours ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

16 hours ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

17 hours ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

18 hours ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

18 hours ago

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

1 day ago