RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ

ರಿಪ್ಪನ್‌ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ ಗ್ರಾಮದ ಷಣ್ಮುಖ (50)ವರ್ಷ ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಪಟ್ಟಣದ ಬಸ್ ನಿಲ್ದಾಣದಲ್ಲಿ ಕುಳಿತಲ್ಲಿಯೇ ಮೃತಪಟ್ಟಿದ್ದಾನೆ ಎಂಬ ಹಿನ್ನೆಲೆಯಲ್ಲಿ ಸ್ಥಳೀಯರು ವೈದ್ಯರಾದ ಅನಂತ್ ಮಯ್ಯ ರವರಿಗೆ ಮಾಹಿತಿ ತಿಳಿಸಿದ್ದು ಕೂಡಲೇ ಸ್ಥಳಕ್ಕಾಗಮಿಸಿ ಪರಿಶೀಲಿಸಿದ ಅವರು ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಧೃಡ ಪಡಿಸಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ.

ಮೃತ ವ್ಯಕ್ತಿಯು ತೀವ್ರ ಮದ್ಯವಯಸನಿಯಾಗಿದ್ದು ಕಳೆದೆರಡು ದಿನಗಳಿಂದ ಮನೆಗೆ ತೆರಳದೇ ಬಸ್ ನಿಲ್ದಾಣದಲ್ಲಿಯೇ ತಂಗಿದ್ದ ಎನ್ನಲಾಗುತ್ತಿದೆ.

ಸ್ಥಳಕ್ಕೆ ಪಟ್ಟಣದ ಪೊಲೀಸ್ ಸಿಬ್ಬಂದಿ ಗಳು ಭೇಟಿ ನೀಡಿದ್ದಾರೆ.

ಮದ್ಯದ ಹಾವಳಿಗೆ ಪಟ್ಟಣದಲ್ಲಿ ಹಲವಾರು ಪ್ರಾಣಹಾನಿಗಳು ಸಂಭವಿಸುತಿದ್ದು ಅದಕ್ಕೆ ಈ ಪ್ರಕರಣವೊಂದು ಸೇರ್ಪಡೆಯಾಗಿದೆ.2023 ರ ಜೂನ್ ನಲ್ಲಿ ಇದೇ ಬಸ್ ನಿಲ್ದಾಣದಲ್ಲಿ ತೀವ್ರ ಮದ್ಯವ್ಯಸನದಿಂದ ಛತ್ರಿ ರಿಪೇರಿ ಮಾಡುವ ಹೆದ್ದಾರಿಪುರ ಮೂಲದ ವ್ಯಕ್ತಿಯೊಬ್ಬ ಮೃತಪಟ್ಟಿದ್ದನು ಆ ಘಟನೆ ನಡೆದ ಎರಡು ದಿನಗಳ ಅಂತರದಲ್ಲಿ ತೀರ್ಥಹಳ್ಳಿ ರಸ್ತೆಯ ನ್ಯೂ ಚಾಣಕ್ಯ ಬಾರ್ ನಲ್ಲಿ ಕೆಲಸ ಮಾಡುತಿದ್ದ ಎನ್ನುವ ವ್ಯಕ್ತಿಯೊಬ್ಬ ಅದೇ ಬಾರ್ ನ ಹಿಂಬಾಗದಲ್ಲಿ ಶವವಾಗಿ ಪತ್ತೆಯಾಗಿದ್ದನು.ಕಳೆದೊಂದು ವಾರದಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ವಿಪರೀತ ಮದ್ಯ ಸೇವನೆಯಿಂದ ಮೂವರು ಮೃತಪಟ್ಟಿರುವುದು ಆತಂಕಕಾರಿಯಾಗಿದೆ.

ತೀರ್ಥಹಳ್ಳಿ ರಸ್ತೆಯಲ್ಲಿರುವ ಬಾರ್ ನ ಮಾಲೀಕರು ಸರ್ಕಾರದ ನಿಯಮಗಳನ್ನು ಸರಿಯಾಗಿ ಪಾಲಿಸದೇ ಬಾರ್ ಹಿಂಭಾಗದಲ್ಲಿ ಮದ್ಯ ಸೇವನೆಗೆ ಅನುವು ಮಾಡಿಕೊಟ್ಟಿದ್ದು ಕೆಲವೊಂದು ಕಿಂಡಿಗಳನ್ನು ಸೃಷ್ಟಿಸಿದ್ದಾರೆ.ಈ ಕಿಂಡಿಗಳು ಮುಂಜಾನೆಯ ಕುಡುಕರಿಗೆ ಸ್ವರ್ಗದ ಬಾಗಿಲಂತೆ ಕಂಡು ಬರುತ್ತಿದೆ.ಈ ಕುಡುಕರಿಂದ ಹಿಂಭಾಗದಲ್ಲಿರುವ ಸ್ಥಳೀಯರಿಗೆ ದಿನನಿತ್ಯ ಕಿರಿಕಿರಿಯಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತಿದ್ದಾರೆ.

ಇನ್ನೂ ಪಟ್ಟಣದ ಬಸ್ ನಿಲ್ದಾಣವಂತೂ ಕುಡುಕರ ಪಾಲಿಗೆ ಸ್ವರ್ಗದಂತಾಗಿದ್ದೂ ಇಲ್ಲಿಗೆ ಬರುವ ಮಹಿಳಾ ಪ್ರಯಾಣಿಕರೂ ಎಷ್ಟೊತ್ತಿಗೆ ಬಸ್ ಬರುತ್ತದೆ ಎಂದು ಉಸಿರು ಬಿಗಿಹಿಡಿದು ಕುಳಿತಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.ಅಲ್ಲೇ ಇರುವ ಬಾರ್ ಗಳಲ್ಲಿ ಕುಡಿದು ವಿಶ್ರಾಂತಿ ತೆಗೆದುಕೊಂಡು ಮತ್ತೆ ಕುಡಿದು ಅಲ್ಲೇ ಮಲಗಿರುವವ ಕೆಲವರನ್ನು ಕಂಡರೆ ಅವರೆಲ್ಲಾ ಯಮಪಾಶಕ್ಕೆ ಕ್ಯೂ ನಲ್ಲಿ ಕಾಯುತ್ತಿರುವಂತೆ ಭಾಸವಾಗುತ್ತದೆ.

ಒಟ್ಟಾರೆಯಾಗಿ ಇನ್ನಾದರು ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸುತ್ತಾರೋ ಕಾದು ನೋಡಬೇಕಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

41 minutes ago

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

9 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

22 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

23 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

1 day ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

1 day ago