ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ನಡುವೆ ಕಿರಿಕ್ : ಚಾಕು ಇರಿತಕೊಳಗಾದ ಓರ್ವ ಆಸ್ಪತ್ರೆಗೆ ದಾಖಲು
ಶಿವಮೊಗ್ಗ: ಮದ್ಯ ಸೇವನೆ ವೇಳೆ ಪ್ರಸ್ತಾಪವಾದ ವಿಷಯದಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ನಗರದಲ್ಲಿ ಸಂಭವಿಸಿದೆ.
ಜ.೧೩ ರಂದು ಈ ಬಗ್ಗೆ ಕಿರಣ್ ಎಂಬುವರು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಆನಂದ್, ನಿತಿನ್, ಮೋಹನ್, ಮಾಲತೇಶ,, ರಾಕೇಶ್ ಅಡ್ಡು ಎಂಬುವರ ವಿರುದ್ಧ ದೂರು ದಾಖಲಿಸಿದ್ದಾರೆ.
ಕಿರಣ್ ಎಂಬುವರ ಸ್ನೇಹಿತನಾದ ಸದಾನಂದ ಇವರಿಗೆ ಆನಂದ ಬಿನ್ ಜಯರಾಮ, ನಿತಿನ್ ಬಿನ್ ನಾಗರಾಜ, ಮೋಹನ ಬಿನ್ ಜಯರಾಮ, ಮಾಲತೇಶ ಬಿನ್ ರಾಜು, ರಾಕೇಶ್, ಆಡು ಮತ್ತು ಇತರರು ಜ. ೧೨ ರಂದು ರಾತ್ರಿ ೧೦.೧೫ ರ ಸಮಯದಲ್ಲಿ ಚಾಕುವಿನಿಂದ ಹಲ್ಲೆ ಮಾಡಿರುವುದಾಗಿ ದೂರು ದಾಖಲಾಗಿದ್ದು ಘಟನೆ ಸಾಗರ ರಸ್ತೆಯ ಬಾರ್ ಬಳಿ ನಡೆದ ಘಟನೆಯಲ್ಲಿ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ.
೬ ಜನರ ಜೊತೆ ಪಾರ್ಟಿ ಮಾಡುವಾಗ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು, ಈ ವೇಳೆ ಕಿರಣ್ಗೆ ಹೊಡೆದು ಯಾರನ್ನು ಕರೆಸುತ್ತೀಯಾ, ಕರೆಯಿಸು ಎಂದು ಬೆದರಿಕೆ ಹಾಕಿದ್ದಾರೆ. ಆಗ ಕಿರಣ್ ತನ್ನ ಸ್ನೇಹಿತ ಸದಾನಂದ ಬಿನ್ ನಾಗರಾಜನನ್ನು ಗಾಡಿಕೊಪ್ಪ ಬಾರ್ ಪಕ್ಕ ಬರಲು ತಿಳಿಸಿದ್ದನು. ಸದಾನಂದ ಬಂದ ನಂತರ ಪುನಃ ಜಗಳ ಪ್ರಾರಂಭವಾಗಿ ೬ ಜನರ ಪೈಕಿ ಮೂವರು ಚಾಕುವಿನಿಂದ ಹಲ್ಲೆ ಮಾಡಿರುವುದಾಗಿ ದೂರಿನಲ್ಲಿ ದಾಖಲಿಸಲಾಗಿದೆ.
ಹಲ್ಲೆಗೊಳಗಾದ ಸದಾನಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ರಿಪ್ಪನ್ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ A physical education teacher…
ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು A tragic tipper-bike…
ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500…
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…