ರಿಪ್ಪನ್ ಪೇಟೆಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ “ಸಂಕ್ರಾಂತಿ ಉತ್ಸಾಹ ಹಾಗೂ ಭಜನೆ”.
ರಿಪ್ಪನ್ ಪೇಟೆ : ಪಟ್ಟಣದ ಶ್ರೀ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ವೇದಿಕೆ ಇವರ ಆಶ್ರಯದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಂಕ್ರಾಂತಿ ಉತ್ಸವ ಹಾಗೂ ಬಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಸುಮಂಗಳ ಹರೀಶ್ ಹಾಗೂ ಕಾರ್ಯದರ್ಶಿ ರೂಪ ಶಂಕ್ರಪ್ಪ ತಿಳಿಸಿದ್ದಾರೆ.
ಸೋಮವಾರ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜನವರಿ 14 ಮಂಗಳವಾರ ಸಂಜೆ 4 ಗಂಟೆಗೆ ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ರಿಪ್ಪನ್ ಪೇಟೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಂಕ್ರಾಂತಿ ಉತ್ಸವ ಹಾಗೂ ಬಜನಾ ಕಾರ್ಯಕ್ರಮ ಆಯೋಜಿಸಲಾಗಿದೆ ಈ ಬಜನಾ ಕಾರ್ಯಕ್ರಮದಲ್ಲಿ ಹತ್ತಕ್ಕೂ ಹೆಚ್ಚು ಮಹಿಳಾ ತಂಡಗಳು ಭಾಗವಹಿಸಲಿದೆ.
ಈ ಸಂಕ್ರಾಂತಿ ಉತ್ಸವ ಹಾಗೂ ಭಜನಾ ಕಾರ್ಯಕ್ರಮದಲ್ಲಿ ಸಮಾಜದ ಬಾಂಧವರು ಸೇರಿದಂತೆ ಎಲ್ಲಾ ಸಾರ್ವಜನಿಕ ಬಂಧುಗಳು ಭಾಗವಹಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ತಿಳಿಸಿದರು
ಈ ಸಂದರ್ಭದಲ್ಲಿ ಶ್ರೀ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ವೇದಿಕೆಯ ಪದಾಧಿಕಾರಿಗಳಾದ ಪ್ರಮೀಳಾ ಲಕ್ಷ್ಮಣಗೌಡ. ಕೋಮಲ ಕೇಶವ್, ಜಯಂತಿ ಅಶೋಕ್, ಶ್ಯಾಮಲ ಪ್ರದೀಪ್, ವಾಣಿ ಗೋವಿಂದಪ್ಪ ಗೌಡ, ಪ್ರವೀಣೆ ಮಂಜುನಾಥ್, ವೀಣಾ ಗುರುಮೂರ್ತಿ, ಮಮತಾ ವಿಷ್ಣುಮೂರ್ತಿ. ಇನ್ನಿತರರಿದ್ದರು..
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್