ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ನಂದನ್ ಇನ್ನಿಲ್ಲ..!

ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ನಂದನ್ ಇನ್ನಿಲ್ಲ..!

ಖ್ಯಾತ ಫೋಟೋ ಜರ್ನಲಿಸ್ಟ್ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಶಿವಮೊಗ್ಗ ನಂದನ್ (57ವರ್ಷ ) ಹೃದಯಾಘಾತದಿಂದ ನಿಧನರಾಗಿದ್ದಾರೆ.

ತಡರಾತ್ರಿ 1:30ರ ಸುಮಾರಿಗೆ ನಂದನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಂದನ್ ಇಹಲೋಕ ತ್ಯಜಿಸಿದ್ದಾರೆ.

ಮೃತರು ಪತ್ನಿ, ಪುತ್ರ, ಪುತ್ರಿ, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇಂದು ರೈಲ್ವೆ ನಿಲ್ದಾಣ ಬಳಿ ಇರುವ ಎ.ಎ.ಕಾಲೋನಿಯಲ್ಲಿರುವ ನಿವಾಸದಲ್ಲಿ ನಂದನ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಅಂತ್ಯಕ್ರಿಯೆ ನೆರವೇರಲಿದೆ.

ನಂದನ್ 1999ರಿಂದ ಶಿವಮೊಗ್ಗದಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದರು. ಶಿವಮೊಗ್ಗ ನಂದನ್ ಎಂದೇ ಖ್ಯಾತಿಯನ್ನು ಪಡೆದಿದ್ದರು. ಅದಷ್ಟೇ ಅಲ್ಲ ಸಾಕಷ್ಟು ಪ್ರಯೋಗಗಳ ಮೂಲಕ ಗಮನ ಸೆಳೆದಿದ್ದರು. ನಂದನ್ ಅವರು ತೆಗೆದ ಹಲವು ಚಿತ್ರಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದವು.

ಕುವೆಂಪು ವಿಶ್ವವಿದ್ಯಾಲಯ, ಧರ್ಮಸ್ಥಳ ಎಸ್ ಡಿ ಎಂ ಕಾಲೇಜು ಹಾಗೂ ಮೈಸೂರಿನ ಹಲವು ಕಾಲೇಜುಗಳ ವಿದ್ಯಾರ್ಥಿಗಳಿಗೆ ಛಾಯಾಗ್ರಹಣದ ತರಬೇತಿ ನೀಡುತ್ತಿದ್ದರು. ಪರಿಸರ ಹಾಗೂ ವ್ಯಕ್ತಿ ಚಿತ್ರಗಳನ್ನು ಹೆಚ್ಚು ಸೆರೆ ಹಿಡಿಯುತ್ತಿದ್ದರು.

ಹೀಗೆ ಸೆರೆ ಹಿಡಿದ ಪರಿಸರ ಹಾಗೂ ವ್ಯಕ್ತಿ ಚಿತ್ರಗಳಿಗೆ ಹಲವು ಪ್ರಶಸ್ತಿಗಳು ಸಂದಿವೆ. ನಿನ್ನೆಯಷ್ಟೇ ಶಿವಮೊಗ್ಗ ಸಮೀಪದ ಕುಂಸಿಯ ಸರ್ಕಾರಿ ಶಾಲೆಯಲ್ಲಿ ಛಾಯಾಚಿತ್ರ ತರಬೇತಿಯನ್ನು ಏರ್ಪಡಿಸಿ, ಛಾಯಾಗ್ರಹಣದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ್ದರು.

ಶಿವಮೊಗ್ಗದ ರೈಲ್ವೆ ನಿಲ್ದಾಣ ಬಳಿ ಇರುವ ನಂದನ್ ಅವರ ಮನೆಗೆ ವಿಧಾನಪರಿಷತ್ ಸದಸ್ಯರಾದ ಡಿ ಎಸ್ ಅರುಣ್ ಸೇರಿದಂತೆ ಅನೇಕ ಹಿರಿಯ ಪತ್ರಕರ್ತರು ಹಾಗೂ ಅಭಿಮಾನಿಗಳು ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದಿದ್ದಾರೆ.

ಶಿವಮೊಗ್ಗದ ರೋಟರಿ ಚಿತಾಗರದಲ್ಲಿ ಇಂದು ಸಂಜೆ ಮೃತರ ಅಂತ್ಯ ಸಂಸ್ಕಾರ ನೆರವೇರಲಿದೆ. ಅವರ ನಿಧನಕ್ಕೆ ಜಿಲ್ಲಾ ವರದಿಗಾರರು, ಛಾಯಾಗ್ರಾಹಕರು ಕಂಬನಿ ಮಿಡಿದಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

2 hours ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

2 hours ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

2 hours ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

2 hours ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

10 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

1 day ago