ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು
ಶಿವಮೊಗ್ಗ | ಕಳ್ಳನೋರ್ವ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸಿದ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಸಮೀಪದಲ್ಲಿರುವ ಬ್ಯಾಂಕ್ ಒಂದರ ಎಟಿಎಂನಲ್ಲಿ ಕಳವು ಯತ್ನ ನಡೆದಿದೆ.
ಎಟಿಎಂ ಬಾಕ್ಸ್ ಒಡೆಯಲು ಕಳ್ಳ ಯತ್ನಿಸಿದ್ದಾನೆ. ಎಟಿಎಂನಲ್ಲಿ ಸೈರನ್ ಶಬ್ದ ಹಾಗೂ 112 ಸಿಬ್ಬಂದಿಯನ್ನು ನೋಡಿ ಕಳ್ಳ ಪರಾರಿಯಾಗಿದ್ದಾನೆ.
ಈ ಸಂಬಂಧ ಕೆನರಾ ಬ್ಯಾಂಕ್ನ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಕಲಂ 331(4) ಮತ್ತು 62 BNS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿ ಬಿಹಾರ ರಾಜ್ಯದ ಸಾರಸ್ ಜಿಲ್ಲೆಯ ಸಮಾನಿ ತಾಲೂಕಿನ ಜಲೈ ಗ್ರಾಮದ ಕಾಂಕ್ರೀಟ್ ಕೆಲಸಗಾರ ಮಹಮ್ಮದ್ ವಸೀಂ ಬಿನ್ ಅಲೀ ಹಸನ್ (22) ಈತನನ್ನು ಬಂಧಿಸಲಾಗಿದೆ.
ಈ ಕಾರ್ಯಾಚರಣೆಗೆ ಕೋಟೆ ಪೊಲೀಸ್ ಠಾಣೆಯ ಪಿಎಸ್ಐ ಸಂತೋಷ್ ಭಾಗೋಜಿ, ಎಎಸ್ಐ ಹರ್ಷ ಎಎಸ್ಐ ಮತ್ತು ಸಿಬ್ಬಂದಿಗಳಾದ ಸಿಪಿಸಿ ಕಿಶೋರ್, ಆಂಜಿನಪ್ಪ, ಕಾಂತರಾಜ್ ಮತ್ತು ಪ್ರಕಾಶ್ ಹಾಗೂ ಇಲಾಖಾ ವಾಹನದ ಚಾಲಕ ಸೋಮು ಎಪಿಸಿ ರವರುಗಳನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿತ್ತು.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…