ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು
ಶಿವಮೊಗ್ಗ | ಕಳ್ಳನೋರ್ವ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸಿದ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಸಮೀಪದಲ್ಲಿರುವ ಬ್ಯಾಂಕ್ ಒಂದರ ಎಟಿಎಂನಲ್ಲಿ ಕಳವು ಯತ್ನ ನಡೆದಿದೆ.
ಎಟಿಎಂ ಬಾಕ್ಸ್ ಒಡೆಯಲು ಕಳ್ಳ ಯತ್ನಿಸಿದ್ದಾನೆ. ಎಟಿಎಂನಲ್ಲಿ ಸೈರನ್ ಶಬ್ದ ಹಾಗೂ 112 ಸಿಬ್ಬಂದಿಯನ್ನು ನೋಡಿ ಕಳ್ಳ ಪರಾರಿಯಾಗಿದ್ದಾನೆ.
ಈ ಸಂಬಂಧ ಕೆನರಾ ಬ್ಯಾಂಕ್ನ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಕಲಂ 331(4) ಮತ್ತು 62 BNS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿ ಬಿಹಾರ ರಾಜ್ಯದ ಸಾರಸ್ ಜಿಲ್ಲೆಯ ಸಮಾನಿ ತಾಲೂಕಿನ ಜಲೈ ಗ್ರಾಮದ ಕಾಂಕ್ರೀಟ್ ಕೆಲಸಗಾರ ಮಹಮ್ಮದ್ ವಸೀಂ ಬಿನ್ ಅಲೀ ಹಸನ್ (22) ಈತನನ್ನು ಬಂಧಿಸಲಾಗಿದೆ.
ಈ ಕಾರ್ಯಾಚರಣೆಗೆ ಕೋಟೆ ಪೊಲೀಸ್ ಠಾಣೆಯ ಪಿಎಸ್ಐ ಸಂತೋಷ್ ಭಾಗೋಜಿ, ಎಎಸ್ಐ ಹರ್ಷ ಎಎಸ್ಐ ಮತ್ತು ಸಿಬ್ಬಂದಿಗಳಾದ ಸಿಪಿಸಿ ಕಿಶೋರ್, ಆಂಜಿನಪ್ಪ, ಕಾಂತರಾಜ್ ಮತ್ತು ಪ್ರಕಾಶ್ ಹಾಗೂ ಇಲಾಖಾ ವಾಹನದ ಚಾಲಕ ಸೋಮು ಎಪಿಸಿ ರವರುಗಳನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿತ್ತು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್