January 11, 2026

ಜಮೀನಿನ ವಿದ್ಯುತ್ ಟಿಸಿ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ

ಜಮೀನಿನ ವಿದ್ಯುತ್ ಟಿಸಿ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ

ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಭದ್ರಾವತಿಯ ದೊಡ್ಡೇರಿ ಗ್ರಾಮದಲ್ಲಿ ಬುಧವಾರ (ಜ.22) ರಾತ್ರಿ ನಡೆದಿದೆ.

ಶಾಂತ ಕುಮಾರ (35) ಕೊಲೆಯಾದ ದುರ್ದೈವಿ. ಲೇಪಾಕ್ಷಿ ಎನ್ನುವ ವ್ಯಕ್ತಿ ಹಾಗೂ ಮತ್ತೋರ್ವ ಸೇರಿ ಶಾಂತಕುಮಾರನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ಬುಧವಾರ ಸಂಜೆ ಜಗಳ ನಡೆದಿತ್ತು. ಗಲಾಟೆ ವಿಪರೀತಕ್ಕೆ ಹೋಗಿ ರಾತ್ರಿ ಮಚ್ಚಿನಿಂದ ಹಲ್ಲೆ ಮಾಡಿ ಇಬ್ಬರು ಆರೋಪಿಗಳು ಕೊಲೆ ಮಾಡಿದ್ದಾರೆ.

ಬುಧವಾರ ರಾತ್ರಿಯೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

Exit mobile version