RIPPONPETE | ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ
ರಿಪ್ಪನ್ಪೇಟೆ :ಇಲ್ಲಿನ ಸಮೀಪದ ಸಿದ್ದಪ್ಪನಗುಡಿಯ ಇತಿಹಾಸ ಪ್ರಸಿದ್ದ ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿಯ ಅಂಗವಾಗಿ ಗುರುವಾರ ದೇವರಿಗೆ ರುದ್ರಾಭಿಷೇಕ, ಅಭಿಷೇಕ, ಪೂಜಾ ಕೈಂಕರ್ಯಗಳು ಸಂಭ್ರಮದೊಂದಿಗೆ ಜರುಗಿತು.
ಪಟ್ಟಣದ ಹೊರವಲಯದಲ್ಲಿರುವ ಸಿದ್ದಪನಗುಡಿ ಕಂತೆ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ರುದ್ರಾಭಿಷೇಕ ಮತ್ತು ಅಭಿಷೇಕ ಅಲಂಕಾರ ಪೂಜೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.ನಂತರ ಮಹಾಮಂಗಳಾರತಿಯೊಂದಿಗೆ ಸಾರ್ವಜನಿಕರಿಗೆ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು.
ಈ ಸಂಧರ್ಭದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸುಮಾರು ಎರಡೂ ಸಾವಿರಕ್ಕೂ ಹೆಚ್ಚು ಭಕ್ತಾಧಿಗಳು ಸ್ವಾಮಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನೀತರಾದರು.
ದೇವಸ್ಥಾನದ ಅರ್ಚಕರು ಹಾಗೂ ಕಂತೆ ಸಿದ್ದೇಶ್ವರ ದೇವಸ್ಥಾನದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್