RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಬೈರಾಪುರಾ ಗ್ರಾಮದ ತೀರ್ಥೇಶ್ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ.
ವೀಡಿಯೋ ಇಲ್ಲಿ ವೀಕ್ಷಿಸಿ👆
ತೀರ್ಥೇಶ್ ಅಡಿಕಟ್ಟು ರವರಿಗೆ ಸೇರಿದ 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ.
ಬೈರಾಪುರ ಗ್ರಾಮದಲ್ಲಿ ಒಕ್ಕಲು ಮಾಡಲು 6 ಸಾವಿರಕ್ಕೂ ಪಿಂಡಿಯಷ್ಟು ಹೆಚ್ಚು ಭತ್ತದ ಗೊಣಬೆಯನ್ನು ಶೇಖರಿಸಲಾಗಿತ್ತು ಅದರಲ್ಲಿ ಒಕ್ಕಲು ಮಾಡಿದ್ದ ಸುಮಾರು 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿದೆ ಸಮಯಕ್ಕೆ ಸರಿಯಾಗಿ ಮೆಸ್ಕಾಂ ಇಂಜಿನಿಯರ್ ಹಾಗೂ ಸಿಬ್ಬಂದಿಗಳು ಕರ್ತವ್ಯ ಪ್ರಜ್ಞೆ ಮೆರೆದ ಕಾರಣ ಭಾರಿ ಅನಾಹುತ ತಪ್ಪಿದೆ.
ನಂತರ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ಸಂಪೂರ್ಣ ನಂದಿಸಿದ್ದಾರೆ.
ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಸಿಬ್ಬಂದಿಗಳು :
ಬೈರಾಪುರ ಗ್ರಾಮದ ಹಲವು ರೈತರು ಒಕ್ಕಲು ಮಾಡಲು ಶೇಖರಿಸಿಟ್ಟಿದ್ದ ಸುಮಾರು 6 ಸಾವಿರಕ್ಕೂ ಹೆಚ್ಚು ಪಿಂಡಿಯಷ್ಟಿದ್ದ ಭತ್ತದ ಪಕ್ಕದಲ್ಲಿದ್ದ ಹುಲ್ಲಿನ ಬಣವೆಗೆ ಬೆಂಕಿ ಹತ್ತಿಕೊಂಡಿದ್ದು ಈ ಸಂಧರ್ಭದಲ್ಲಿ ಬೆಂಕಿ ನಂದಿಸಲು ಸ್ಥಳೀಯರು ಪ್ರಯತ್ನಸಿದರೂ ವಿದ್ಯುತ್ ಲೋಡ್ ಶೆಡ್ಡಿಂಗ್ ಇದ್ದ ಕಾರಣ ಸಾಧ್ಯವಾಗಿರಲಿಲ್ಲ ಆ ಸಂದರ್ಭದಲ್ಲಿ ಸ್ಥಳೀಯರು ಮೆಸ್ಕಾಂ ಇಲಾಖೆಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ತತ್ತಕ್ಷಣ ಎಚ್ಚೆತ್ತುಕೊಂಡ ಇಲಾಖೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಿದ ಹಿನ್ನಲೆಯಲ್ಲಿ ಸುತ್ತಮುತ್ತಲಿದ್ದ ಬೋರ್ ವೆಲ್ ನೀರನ್ನು ಬಳಸಿ ಸಾಕಷ್ಟು ಬೆಂಕಿಯನ್ನು ನಂದಿಸುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply