ಕೋಣಂದೂರು ಸುತ್ತಮುತ್ತ ಹಾಡಹಗಲೇ ದೇವಸ್ಥಾನ, ಮನೆಗಳಲ್ಲಿ ಕಳ್ಳತನ

ಕೋಣಂದೂರು ಸುತ್ತಮುತ್ತ ಹಾಡಹಗಲೇ ದೇವಸ್ಥಾನ, ಮನೆಗಳಲ್ಲಿ ಕಳ್ಳತನ

ತೀರ್ಥಹಳ್ಳಿ :ತಾಲೂಕಿನ ಕೋಣಂದೂರು ಸುತ್ತಮುತ್ತ ಕಳ್ಳತನ ಪ್ರಕರಣಗಳು ಇತ್ತೀಚಿಗೆ ಹೆಚ್ಚುತ್ತಿದ್ದು, ಮಲೆನಾಡಿಗರಲ್ಲಿ ಆತಂಕ ಮನೆ ಮಾಡಿದೆ.
ಕೋಣಂದೂರು ಸಮೀಪದ ಗುಡ್ಡೆಕೊಪ್ಪದಲ್ಲಿ ಶುಕ್ರವಾರ ಮಧ್ಯಾಹ್ನ ಮನೆಯ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಬೆಲೆಬಾಳುವ ವಸ್ತುಗಳು ಸಿಕ್ಕಿಲ್ಲದಿರುವುದರಿಂದ ವಸ್ತುಗಳನ್ನು ಪುಡಿ ಪುಡಿ ಮಾಡಿ ಹಿಂಭಾಗದ ಬಾಗಿಲಿನಿಂದ ಹೊರ ಹೋಗಿದ್ದಾರೆ. ಹಿರೇಸರದ ಮನೆಯೊಂದರಲ್ಲಿದ್ದ 75,000 ನಗದು ಹಾಗೂ ಬಂಗಾರ, ಬೆಳ್ಳಿಯನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ.

ಆಲೂರು ಹೊಸಕೊಪ್ಪದ ಉಮಾಮಹೇಶ್ವರ ದೇವಸ್ಥಾನ, ಯೋಗಿಮಳಲಿ ದೇವಸ್ಥಾನದ ಹುಂಡಿ, ಜಂಬೆ, ಹುಲ್ಲತ್ತಿ, ಹುಂಚಾ, ಕಾರ್ಕೊಡ್ಲು ಈ ಭಾಗಗಳಲ್ಲಿ ಕಳ್ಳತನ ನಡೆದಿದ್ದು, ಆಭರಣ, ನಗದು, ಚಪ್ಪರದಲ್ಲಿ ಒಣಗಿಸಿದ್ದ ಅಡಿಕೆ, ಪಾತ್ರೆಗಳನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ.

ಕೆಲ ದಿನಗಳ ಹಿಂದೆ ಹೊಸಕೊಪ್ಪದ ಉಮಾಮಹೇಶ್ವರ ದೇವಸ್ಥಾನದ 2 ಕಾಣಿಕೆ ಹುಂಡಿಗಳನ್ನು ಕಳ್ಳರು ಹೊತ್ತೊಯ್ದಿದ್ದರು.

ಹಣವನ್ನು ದೋಚಿಕೊಂಡು 2 ಕಿ.ಮೀ. ಅಂತರದಲ್ಲಿ ಹುಂಡಿಯನ್ನು ಬಿಸಾಡಿ ಹೋಗಿದ್ದರು. ಮಾಳೂರು ಠಾಣಾ ವ್ಯಾಪ್ತಿಯ ಯೋಗಿ ಮಳಲಿ ಈಶ್ವರ ದೇವಸ್ಥಾನದ ಸಿ.ಸಿ. ಟಿವಿ ಕ್ಯಾಮೆರಾವನ್ನು ಮುರಿದು ಕಳ್ಳತನ ಮಾಡಿದ್ದರು.

ಯೋಗಿಮಳಲಿಯಲ್ಲಿ ಒಂಟಿ ಮನೆಯೊಂದರ ಬಾಗಿಲು ಮುರಿದು ಪಾತ್ರೆ ಮತ್ತಿತರ ವಸ್ತುಗಳನ್ನು ಹೊತ್ತುಕೊಂಡು ಹೋಗಿದ್ದಾರೆ. ಕಾನುಕೊಪ್ಪದ ಮನೆಯೊಂದರಲ್ಲಿ ಆಸ್ಪತ್ರೆಗೆ ಹೋಗಲು ತಂದು ಮನೆಯಲ್ಲಿಟ್ಟುಕೊಂಡಿದ್ದ 710,000 ಹಣವನ್ನು ಕಳ್ಳರು ದೋಚಿದ್ದಾರೆ. ಮಳಲೀಮಕ್ಕಿ ಸಮೀಪದ ಕಳಸಗುಂಡಿ ಮನೆಯೊಂದರಲ್ಲಿ ಬೆಲೆಬಾಳುವ ಬಂಗಾರ, ನಗದು ದೋಚಿದ್ದಾರೆ. ಜಂಬೆ ಗ್ರಾಮದ ಮನೆಯೊಂದರ ಬೀಗವನ್ನು ಹಗಲಿನಲ್ಲೇ ಕಲ್ಲಿನಿಂದ ಒಡೆದು ಪರಾರಿಯಾಗಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

17 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

18 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

19 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago