ಅಡಿಕೆ ಕಳ್ಳತನಗೈದಿದ್ದ ಆರೋಪಿಯ ಬಂಧನ – ಲಕ್ಷಾಂತರ ರೂ ಮೌಲ್ಯದ ಮಾಲು ವಶಕ್ಕೆ .!
ಭದ್ರಾವತಿ : ತಾಲೂಕಿನ ಅರಹತೊಳಲು ಗ್ರಾಮದ ಮನೆಯ ಮುಂದೆ ಇಟ್ಟಿದ್ದ ಅಡಿಕೆ ಚೀಲಗಳನ್ನು ಕಳ್ಳತನ ಮಾಡಿಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಯನೂರು ಕೋಹಳ್ಳಿಯ ಯುವಕನನ್ನು ಬಂಧಿಸಿ ಕಳುವಾದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.
ಅಡಿಕೆ ಕಳುವಾದ ಬಗ್ಗೆ ಹರ್ಷ ಎನ್ನುವವರು ಹೊಳೆಹೊನ್ನೂರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಆಯನೂರು ಕೋಹಳ್ಳಿಯ ಸಯ್ಯದ್ ನವೀದ್ (೨೯) ಸಿಕ್ಕಿಬಿದ್ದಿದ್ದಾನೆ. ಈತನನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆರೋಪಿತನಿಂದ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ವರದಿಯಾದ ೨೦೨೫ನೇ ಸಾಲಿನ ಎರಡು ಮತ್ತು ೨೦೨೪ನೇ ಸಾಲಿನ ಎರಡು ಪ್ರಕರಣ ಸೇರಿ ಒಟ್ಟು ನಾಲ್ಕು ಅಡಿಕೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು ಮೌಲ್ಯ ೫ ಲ. ರೂ. ಗಳ ೧೦ ಕ್ವಿಂಟಾಲ್ ಒಣ ಅಡಿಕೆ, ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಅಂದಾಜು ಮೌಲ್ಯ ೪ ಲಕ್ಷದ ಅಮೇಜ್ ಹೋಂಡಾ ಕಾರ್ ಸೇರಿ ೯ ಲ. ರೂ. ಮಾಲನ್ನು ಅಮಾನತುಪಡಿಸಿಕೊಳ್ಳಲಾಗಿದೆ.
ಸಿಪಿಐ ಲಕ್ಷ್ಮೀಪತಿ ಆರ್.ಎಲ್, ಪಿಎಸ್ಐಗಳಾದ ರಮೇಶ, ಮಂಜುನಾಥ ಎಸ್ ಕುರಿ, ಕೃಷ ನಾಯ್ಕ ಹಾಗೂ ಸಿಬ್ಬಂದಿಗಳಾದ ಸಿ.ಹೆಚ್.ಸಿ ಅಣ್ಣಪ್ಪ, ಪ್ರಕಾಶ ನಾಯ್ಕ ಪ್ರಸನ್ನ, ಸವಿತ ಮತ್ತು ಸಿ.ಪಿ.ಸಿ ವಿಶ್ವನಾಥ ರವರುಗಳನ್ನು ಒಳಗೊಂಡ ತನಿಖಾ ತಂಡವನ್ನು ಪತ್ತೆಗೆ ರಚಿಸಲಾಗಿತ್ತು.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…