ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ

ಹೊಸನಗರ : ತಾಲ್ಲೂಕಿನ  ನಗರ ವಲಯಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾಡುಕೋಣ ಬೇಟೆಯಾಡಿ ಕಾಲು ತಲೆ ಮಾಂಸವನ್ನು ಬಿಡಿಸಿ ಕಾರಿನಲ್ಲಿ ಅಕ್ರಮ ಸಾಗಾಣಿಕೆ ಮಾಡಿರುವ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅರೋಪಿಗಳು ನಾಪತ್ತೆಯಗಿದ್ದು  ಅರೋಪಿಗಳ ಪತ್ತೆ ಹಚ್ಚುವಲ್ಲಿ ನಗರ ವಲಯ ಅರಣ್ಯದಿಕಾರಿಗಳ ತಂಡ ಯಶ್ವಸಿಯಾಗಿದೆ.

ಆರೋಪಿಗಳಾದ ಮಹ ಮ್ಮದ್ ಆಶ್ರಫ್ ಮುಂಡಳ್ಳಿ ವಾಸಿ, ಭಟ್ಕಳ ತಾಲ್ಲೂಕು, ಉತ್ತರ ಕನ್ನಡ ಎ೨) ಯಾಸೀನ್, ಹಣಬರಕೇರಿ, ಶಿರೂರು ಗ್ರಾಮ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ ಎ೩) ವಾಸೀಮ್ ಅಕ್ರಂ ಮದ್ದೋಡಿ ರೋಡ್, ಜೋಗೂ ಕ್ರಾಸ್, ಶಿರೂರು ಗ್ರಾಮ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ, ರವರನ್ನು ಬಂಧಿಸಿದ್ದು ಇನ್ನುಳಿದ ಇಬ್ಬರು ಆರೋಪಿಗಳು ತಲೆಮರೆಸಿ ಕೊಂಡಿದ್ದು ಶೋಧಕಾರ್ಯ ನಡೆದಿರುತ್ತದೆ,

ಮೋಹನ್ ಕುಮಾರ್ ಡಿ, ಮಾನ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸಾಗರ ವಿಭಾಗ ಸಾಗರ ರವರ ಮಾರ್ಗದರ್ಶನದಲ್ಲಿ ಮೋಹನ್ ಕುಮಾರ್ ಕೆ.ಬಿ, ಸಹಾಯಕ ಅರಣ್ಯ ಸಂರಕ್ಷಣಾದಿಕಾರಿಗಳು, ಹೊಸನಗರ ಉಪವಿಭಾಗರವರ  ಮಾರ್ಗ ದರ್ಶನದಲ್ಲಿ ಅರೋಪಿಗಳನ್ನು ಬಂಧಿಸಿ ನ್ಯಾಯಲಯಕ್ಕೆ ಒಪ್ಪಿಸಲಾಗಿದೆ ಎಂದು ನಗರ ವಲಯ ಅರಣ್ಯಧಿಕಾರಿ ಸಂತೋಷ ಮಲ್ಲನಗೌಡ್ರ ತಿಳಿಸಿದರು.

ದಿನಾಂಕ:೦೮.೦೧.೨೦೨೫ ರಂದು ಸುಮಾರು ೩ ಗಂಟೆ ಬೆಳಗಿನ ಜಾವ ಸಂಪೆಕಟ್ಟೆ ಶಾಖೆಯ ಹೊಸೂರು ಗ್ರಾಮದ ಸರ್ವೆ ನಂ-೪ ರ ಮತ್ತಿಕ್ಕೆ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಒಂದು ಹೆಣ್ಣು ಕಾಡುಕೋಣ ಅಂದಾಜು ವಯಸ್ಸು ೪ರಿಂದ ೫ ವರ್ಷ ನ್ನು ಬೇಟೆಯಾಡಿ ಕಾಲು ತಲೆ ಮಾಂಸವನ್ನು ಬಿಡಿಸಿ ಕಾರಿನಲ್ಲಿ ಸಾಗಾಣಿಕೆ ಮಾಡಿರುವ ಬಗ್ಗೆ ದಾಖಲಾದ ವನ್ಯಜೀವಿ ಪ್ರಕರಣ ದಾಖಲಾದ ಸಂಬಧ ಆರೋಪಿಗಳು ನಾಪತ್ತೆಯಾಗಿದ್ದು,
ನಗರ ವಲಯದ ವಲಯ ಅರಣ್ಯಾಧಿಕಾರಿ ಸಂತೋಷ ಮಲ್ಲನಗೌಡ್ರ ಹಾಗೂ ಹೊಸನಗರ ವಲಯ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಹಾಗೂ ಸಿಬ್ಬಂದಿ ಗಳು ಕಾರ್ಯಚರಣೆ ನೆಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಸಂದರ್ಭದಲ್ಲಿ ಆರೋಪಿಗಳ ಪತ್ತೆಗಾಗಿನಗರ ವಲಯದ ಉಪವಲಯ ಅರಣ್ಯಾಧಿಕಾರಿಗಳಾದ ಸತೀಶ ನರೇಂದ್ರ ಕುಮಾರ್ ಟಿ.ಪಿ, ಅಮೃತ್ ಸುಂಕದ್, ರಾಘ ವೇಂದ್ರ ತೆಗ್ಗಿನ್, ರಾಜೇಂದ್ರ ಜಿ.ಡಿ, ಗಸ್ತು ಅರಣ್ಯ ಪಾಲಕರಾದ ಮನೋಜ್ ಕುಮಾರ್ ಕನೇರಿ, ಯೋಗ ರಾಜ್ ಜೆ, ಎ.ವಿ ಮನೋಜ್, ಸುಬ್ಬಣ್ಣ, ಸತೀಶ್ ಬಿ, ದಿವಕರ್ ಬಿ.ಎಸ್, ಅರಣ್ಯ ವೀಕ್ಷಕ ಸಂಗಪ್ಪ ವಾಹನ ಚಾಲಕ ರಾಮು ಗಾಣಿಗ ಹಾಗೂ ಹೊಸನಗರ ವಲಯ ಸಿಬ್ಬಂದಿ ಯವರು ಭಾಗಿಯಾಗಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

17 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

17 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

19 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago